ಕಲಾವಿದರಿಗೆ ಮಾಸಿಕ 10 ಸಾವಿರ ರೂ. ಮಾಸಾಶನ ನೀಡಿ

ಕಾರ್ಯಕ್ರಮದಲ್ಲಿ ಮಾಜಿ ತಾಪಂ ಅಧ್ಯಕ್ಷ ಬಿ.ಕೆ. ಶಿವಪ್ಪ ಒತ್ತಾಯ! ಕೋವಿಡ್‌ನಿಂದ ಆರ್ಥಿಕವಾಗಿ ಕಲಾವಿದರ ಬದುಕು ಸಂಕಟ

Team Udayavani, Mar 4, 2021, 7:35 PM IST

Artist

ದೇವನಹಳ್ಳಿ: ಕುಟುಂಬದ ಪೋಷಣೆಗಾಗಿ ಕಲೆಯನ್ನೇ ನಂಬಿಕೊಂಡಿರುವ ಕಲಾವಿದರು ದೃಶ್ಯ ಮಾಧ್ಯಮಗಳಿಂದ ನೇಪಥ್ಯಕ್ಕೆ ಸರಿಯುತ್ತಿದ್ದಾರೆ. ಕೋವಿಡ್‌ ಕಾರಣದಿಂದ ಆರ್ಥಿಕವಾಗಿ ತೀರಾ ಸಂಕಷ್ಟದಲ್ಲಿ ರಂಗಭೂಮಿ ಕಲಾವಿದರಿದ್ದು, ಕಲಾವಿದರಿಗೆ ಮಾಸಿಕ 10 ಸಾವಿರ ರೂ. ಮಾಸಾಶನ ನೀಡಿ  ಎಂದು ಮಾಜಿ ತಾಪಂ ಅಧ್ಯಕ್ಷ ಬಿ.ಕೆ. ಶಿವಪ್ಪ ಒತ್ತಾಯಿಸಿದರು.

ನಗರದ ನಾರಾಯಣಚಾರ್‌ ಲೇಔಟ್‌ನಲ್ಲಿರುವ ಬಿಕೆಎಸ್‌ ಪ್ರತಿಷ್ಠಾನದ ಕೇಂದ್ರ ಕಚೇರಿಯಲ್ಲಿ ದೇವನಹಳ್ಳಿ ತಾಲೂಕು ಕನ್ನಡ ಕಲಾವಿದರ ಸಂಘದಿಂದ ಏರ್ಪಡಿಸಿದ್ದ 75ನೇ ಕನ್ನಡದೀಪ ಕಾರ್ಯಕ್ರಮವನ್ನು  ಉದ್ಘಾಟಿಸಿ ಮಾತನಾಡಿದ ಅವರು, ದೃಶ್ಯ ಮಾಧ್ಯಮಗಳ ಭರಾಟೆಯಿಂದ ರಂಗಭೂಮಿ ಕಲಾವಿದರು ಜೀವನೋಪಾಯಕ್ಕಾಗಿದ್ದ ಕಲೆಯನ್ನು ಕೈಬಿಟ್ಟು ಬೇರೆ ಕೆಲಸವನ್ನು ಹುಡುಕುತ್ತಿದ್ದಾರೆ. ಇದರಿಂದ ನಮ್ಮ ನಾಡಿನ ಕಲೆ ಅವನತಿಯತ್ತ ಸಾಗುತ್ತಿದೆ ಎಂದರು.

ನಾಡಿನ ಕಲೆ-ಸಂಸ್ಕೃತಿಯನ್ನು ಅಭಿನಯದ ಮೂಲಕ ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸುತ್ತಿರುವವರು ಕಲಾವಿದರು. ಅಂತಹ ಕಲಾವಿದರ ಬದುಕು ಈಗ ಸಂಕಷ್ಟದಲ್ಲಿದೆ. ಸಮಾಜ ಪರಿವರ್ತನೆಗೆ ಶಿಕ್ಷಕರು ಎಷ್ಟು ಮುಖ್ಯವೋ ಕಲೆ-ಸಂಸ್ಕೃತಿ ಉಳಿಯಬೇಕಾದರೆ ಕಲಾವಿದರೂ ಅಷ್ಟೆ ಮುಖ್ಯ. ದಿ.ರಾಜಗೋಪಾಲ್‌ ಅವರು ಅನೇಕ ಶಿಷ್ಯವೃಂದ ಬೆಳೆಸಿದ್ದು, ಅವರ ಮಾರ್ಗದರ್ಶನದಲ್ಲಿ ನಾವೆಲ್ಲರು ಮುನ್ನಡೆಯಬೇಕಿದೆ ಎಂದರು.

ಕ್ರಮ ಕೈಗೊಂಡಿಲ್ಲ: ಕಲಾವಿದರ ಸಂಘದ ಜಿಲ್ಲಾಧ್ಯಕ್ಷ ರಬ್ಬನಹಳ್ಳಿ ಕೆಂಪಣ್ಣ ಮಾತನಾಡಿ, ಈ ಹಿಂದೆ  ಅನೇಕ ಹೋರಾಟಗಳ ಮೂಲಕ ಕಲಾವಿದರ ಸಂಕಷ್ಟಗಳನ್ನು ಸರ್ಕಾರದ ಗಮನಕ್ಕೆ ತಂದಿದ್ದರೂ, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಸಂಬಂಧಪಟ್ಟ ಮಂತ್ರಿಗಳೂ ಇತ್ತ ಗಮನ ಹರಿಸಿಲ್ಲ. ಕಲಾವಿದರಿಗೆ ಯಾವುದೇ ಅನುದಾನಗಳನ್ನು ನೀಡದೆ ಅವರನ್ನು ಮೂಲೆಗುಂಪು ಮಾಡುವ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇವನಹಳ್ಳಿ ತಾಲೂಕು ಕನ್ನಡ ಕಲಾವಿದರ ಸಂಘದ ಸಂಚಾಲಕ ವಿ.ಎನ್‌.ರಮೇಶ್‌, ಕಲಾವಿದರ ಸಂಘದ ಗೌರವಾಧ್ಯಕ್ಷ ಆರ್‌.ಕೆ. ನಂಜೇಗೌಡ, ಅಧ್ಯಕ್ಷ ಮೋಹನ್‌ಬಾಬು, ಉಪಾಧ್ಯಕ್ಷ ಸೀತಾ ರಾಮಪ್ಪ, ಪ್ರ. ಕಾರ್ಯದರ್ಶಿ ಸುಬ್ರಮಣಿ, ಸಹ ಕಾರ್ಯದರ್ಶಿ ಗೋವಿಂದರಾಜು, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಗೌರವಾಧ್ಯಕ್ಷ ಎನ್‌. ಚಂದ್ರಶೇಖರ್‌, ಜಿಲ್ಲಾಧ್ಯಕ್ಷ ಮುನಿರಾಜು, ಕಾರ್ಯಾಧ್ಯಕ್ಷ ವಿನೋದ್‌ಕುಮಾರ್‌ಗೌಡ, ಜೊನ್ನಹಳ್ಳಿ ರಾಮಾಂಜಿನಪ್ಪ, ಸೋಲೂರು ಶಿವಕುಮಾರ್‌, ಜೆ.ಎನ್‌. ಮುನಿವೀರಣ್ಣ, ಖಜಾಂಚಿ ವೆಂಕಟರಾಜು, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಮತ್ತಿತರರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.