ಕಣ್ಮರೆಯಾದ ಕೋವಿಡ್ ಮಾರ್ಗಸೂಚಿಗಳು

ಕ್ಷೀಣಿಸುತ್ತಲೇ ಇದೆ ಸಾರ್ವಜನಿಕರ ನಿರ್ಲಕ್ಷ್ಯ

Team Udayavani, Oct 9, 2020, 2:39 PM IST

ಕಣ್ಮರೆಯಾದ ಕೋವಿಡ್ ಮಾರ್ಗಸೂಚಿಗಳು

ದೊಡ್ಡಬಳ್ಳಾಪುರದಲ್ಲಿ ಮಾಸ್ಕ್ ಧರಿಸದೆ ಓಡಾಡುವವರಿಗೆ ನಗರಸಭೆ, ಪೊಲೀಸ್‌ ಅಧಿಕಾರಿಗಳು ದಂಡ ವಿಧಿಸಿದರು.

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಕೋವಿಡ್‌ 19 ಸೋಂಕಿತರು 3 ಸಾವಿರ ಗಡಿ ದಾಟಿದ್ದು, ಜನಸಂಖ್ಯೆಯ ಶೇ.1 ಭಾಗ ಸೋಂಕಿತರಾಗಿದ್ದಾರೆ. ಆದರೆ ಲಾಕ್‌ಡೌನ್‌ ತೆರವಾದ ಹೊಸತರಲ್ಲಿ ಇದ್ದ ಕೋವಿಡ್‌ಮಾರ್ಗಸೂಚಿಗಳು ಪಾಲನೆಯಾಗುತ್ತಿಲ್ಲ ಎನ್ನುವ ದೂರುಗಳುಕೇಳಿ ಬರುತ್ತಿವೆ.

ಬಸ್‌ಗಳಲ್ಲಿ ಪಾಲನೆಯಾಗದ ನಿಯಮಗಳು : ಕೋವಿಡ್‌ 19 ಅನ್‌ಲಾಕ್‌ ಆಗಿ ಸಾರಿಗೆ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಾಗ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರಯಾಣಿಸುವ ಪ್ರತಿಯೊಬ್ಬ ಪ್ರಯಾಣಿಕರ ಹೆ‌ಸರು, ವಿಳಾಸ ಮೊಬೈಲ್‌ ಸಂಖ್ಯೆ ವಿವರಗಳನ್ನು ಪಡೆಯಲಾಗುತ್ತಿತ್ತು. ಬಸ್‌ ಹತ್ತುವಾಗ ಕೈಗೆ ಸ್ಯಾನಿಟೈಸರ್‌ ಹಾಕಿ ಥರ್ಮಲ್‌ ಸ್ಕ್ರೀನಿಂಗ್‌ ಮಾಡಲಾಗುತ್ತಿತ್ತು. ಬಸ್‌ನಲ್ಲಿ 30 ಪ್ರಯಾಣಿಕರು ಮಾತ್ರ ಪ್ರಯಾಣಿಸಲು ಅವಕಾಶವಿತ್ತು. ಆದರೆ ಈಗ ಮಾಸ್ಕ್ ಕಡ್ಡಾಯಗೊಳಿಸಿರುವುದನ್ನು ಬಿಟ್ಟರೆಯಾವ ನಿಯಮಗಳು ಪಾಲನೆಯಾಗುತ್ತಿಲ್ಲ. ಬಸ್‌ಗಳ ಸಂಖ್ಯೆ ಕಡಿಮೆಯಾಗಿ, ಪ್ರಯಾಣಿಕರು ಹೆಚ್ಚಾದಾಗ, ಬಸ್‌ ನಿಲ್ದಾಣಕ್ಕೆ ಬರುತ್ತಿದ್ದಂತೆ ವ್ಯಕ್ತಿಗತ ಅಂತರ ಕಾಪಾಡಿಕೊಳ್ಳದೇ ಬಸ್‌ ಹತ್ತುವ ದೃಶ್ಯಗಳು ಕಂಡು ಬರುತ್ತಿವೆ.

ಇನ್ನು ಬಹಳಷ್ಟು ಸರ್ಕಾರಿ ಕಚೇರಿಗಳಲ್ಲಿಯೂ, ಥರ್ಮಲ್‌ ಸ್ಕ್ರೀನಿಂಗ್‌ ಮಾಡುವುದು ನಿಂತಿದೆ. ಸ್ಯಾನಿಟೈಸರ್‌ ಸಹ ಕಡ್ಡಾಯವಾಗಿ ಹಾಕುತ್ತಿಲ್ಲ.ಮಾರುಕಟ್ಟೆ ಪ್ರದೇಶದಲ್ಲಿಯೂ ಸಹ ಜನಸಂದಣಿ ಹೆಚ್ಚಾದಾಗ ಅಂತರ ಕಾಪಾಡಿಕೊಳ್ಳದೇ ವ್ಯವಹರಿಸುವುದು ಸಾಮಾನ್ಯವಾಗಿದೆ. ಬಳಕೆಯಾಗದ ಮಾಸ್ಕ್: ಈ ನಡುವೆ ಮಾರುಕಟ್ಟೆ ಪ್ರದೇಶದಲ್ಲಿ ಹಲವು ಮಂದಿ ವ್ಯಾಪಾರಿಗಳ ಕುತ್ತಿಗೆಯ ಬಳಿ ಮಾಸ್ಕ್ ಇರುತ್ತದೆ. ಮಾಸ್ಕ್ಧರಿಸಿದ್ದರೂ ಮೂಗು ಬಾಯಿ ಮುಚ್ಚಿಕೊಳ್ಳುವುದಿಲ್ಲ. ತರಕಾರಿಗಳ ಬೆಲೆ ಕೂಗುವಾಗ ಹಾಗೂ ಗ್ರಾಹಕರೊಡನೆ ವ್ಯವಹರಿಸುವಾಗ ಮಾಸ್ಕ್ ಕುತ್ತಿಗೆ ಬಳಿ ಬರುತ್ತದೆ.ವ್ಯಕ್ತಿಗಳೊಂದಿಗೆ ವ್ಯವಹರಿಸುವಾಗ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎನ್ನುತ್ತಾರೆ ತಜ್ಞರು.

ಮಾಸ್ಕ್ ಧರಿಸದೆ ಓಡಾಡುವವರಿಗೆ ದಂಡ : ತಾಲೂಕಿನಲ್ಲಿ ದಿನೇ ದಿನೇ ಕೋವಿಡ್‌ 19 ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದೆ ನಗರದಲ್ಲಿ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದವರಿಗೆ ಪೌರಾಯುಕ್ತ ರಮೇಶ್‌ ಎಸ್‌.ಸುಣಗಾರ್‌ ಹಾಗೂ ಡಿವೈಎಸ್‌ಪಿ ಟಿ.ರಂಗಪ್ಪ ನೇತೃತ್ವದಲ್ಲಿ ಅಧಿಕಾರಿಗಳು ದಂಡ ವಿಧಿಸುತ್ತಿದ್ದಾರೆ.

250 ರೂ. ವಿಧಿಸುತ್ತಿದ್ದ ದಂಡ ರಾಜ್ಯ ಸರ್ಕಾರದ ಆದೇಶದಂತೆ ಗುರುವಾರದಿಂದ 100 ರೂ ವಿಧಿಸಲಾಗುತ್ತಿದೆ. ನಗರದಬಸ್‌ ನಿಲ್ದಾಣ,ಡಿ.ಕ್ರಾಸ್‌ ವೃತ್ತ, ಬಸವ ಭವನ ವೃತ್ತ ಮೊದಲಾದ ಪ್ರಮುಖ ರಸ್ತೆಗಳಲ್ಲಿ ಮಾಸ್ಕ್ ಇಲ್ಲದೇಓಡಾಡುವ ನಾಗರಿಕರಿಗೆ ದಂಡ ವಿಧಿಸಲಾಗುತ್ತಿದೆ. ವಾಹನಗಳಲ್ಲಿಸಂಚರಿಸುವವರು ಮಾಸ್ಕ್ ಇಟ್ಟುಕೊಂಡಿರಬೇಕು.ಸಾರ್ವಜನಿಕರ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ಧರಿಸಬೇಕು ಎಂದು ಎಚ್ಚರಿಕೆ ನೀಡಲಾಗುತ್ತಿದೆ.ನಗರಸಭೆ ವತಿಯಿಂದ ಏಪ್ರಿಲ್‌ನಿಂದ ಆಗಸ್ಟ್‌ ವರೆಗೆ53,850 ರೂ. ಸೆಪ್ಟೆಂಬರ್‌ನಲ್ಲಿ 25,800 ರೂ.ಹಾಗೂ ಅಕ್ಟೋಬರ್‌ 8ರ ವರೆಗೆ 20 ಸಾವಿರ ರೂ.ಸೇರಿ 1ಲಕ್ಷದ ವರೆಗೆ ದಂಡ ವಸೂಲಿ ಮಾಡಲಾಗಿದೆ.

ಕೋವಿಡ್‌ ಸೋಂಕು ತಡೆಗಟ್ಟಲು ಮಾಸ್ಕ್ ಧರಿಸುವುದು ಹಾಗೂಸಾಮಾಜಿಕ ಅಂತರಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಮಾಸ್ಕ್ ಧರಿಸದೆ ಬೇಕಾಬಿಟ್ಟಿ ಓಡಾಡುವವರಿಗೆ ದಂಡ ವಿಧಿಸಲಾಗುತ್ತಿದೆ. ಸಾರ್ವಜನಿಕರು ನಿಮ್ಮ ಸುರಕ್ಷತೆಗಾಗಿ ಕಡ್ಡಾಯವಾಗಿ ಕೊವಿಡ್‌ 19 ಮಾರ್ಗ ಸೂಚಿಗಳನ್ನು ಪಾಲಿಸಬೇಕಿದೆ. ರಮೇಶ್‌ ಎಸ್‌.ಸುಣಗಾರ್‌, ನಗರಸಭೆ ಪೌರಾಯುಕ್ತರು

ಟಾಪ್ ನ್ಯೂಸ್

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.