ಜನರಿಗೆ ತಪ್ಪದ ಆಧಾರ್‌ ತಿದ್ದುಪಡಿಯ ತಲೆನೋವು


Team Udayavani, Jun 11, 2019, 3:00 AM IST

janarige

ನೆಲಮಂಗಲ: ದೇಶದಲ್ಲಿ ಆಧಾರ್‌ಕ್ರಾಂತಿಯಿಂದ ಸರ್ಕಾರದ ಕೆಲವು ಯೋಜನೆಗಳು ಹಾಗೂ ಪಡಿತರ ಚೀಟಿಗಳಿಗೆ ಆಧಾರ್‌ ಕಡ್ಡಾಯವಾಗಿದೆ. ಆದರೆ ಆಧಾರ್‌ ತಿದ್ದುಪಡಿಗೆ ಸೂಕ್ತ ಕೇಂದ್ರಗಳಿಲ್ಲದೆ ಜನರು ಪ್ರತಿನಿತ್ಯ ಸಮಸ್ಯೆ ಎದುರಿಸುತ್ತಿರುವುದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಪಟ್ಟಣದ ತಾಲೂಕು ಕಚೇರಿಯ ಆವರಣದಲ್ಲಿ ಬೆಳಗ್ಗೆ 5.30 ರಿಂದಲೇ 300ಕ್ಕೂ ಹೆಚ್ಚು ಜನರು ಆಧಾರ್‌ ತಿದ್ದುಪಡಿಗೆ ಸಾಲುಗಟ್ಟಿ ನಿಂತಿದ್ದರು, ಆದರೆ ತಾಲೂಕು ಕಚೇರಿಯಲ್ಲಿ ದಿನಕ್ಕೆ 25 ರಿಂದ 30 ಆಧಾರ್‌ ತಿದ್ದುಪಡಿ ಮಾಡಲು ಅವಕಾಶವಿದ್ದು, ಅಧಿಕಾರಿಗಳು 40 ಟೋಕನ್‌ಗಳನ್ನು ನೀಡುತಿದ್ದಾರೆ. 250ಕ್ಕೂ ಹೆಚ್ಚು ಜನರು ಟೋಕನ್‌ ಸಿಗದೇ ವಾಪಸ್‌ ಹೋಗುತ್ತಿದ್ದು, ಕೆಲಸಗಾರರಿಗೆ, ರೈತರಿಗೆ, ವಿದ್ಯಾರ್ಥಿಗಳಿಗೆ, ನೌಕರರಿಗೆ ಬಹಳಷ್ಟು ತೊಂದರೆಯಾಗುತ್ತಿದೆ ಪರ್ಯಾಯ ವ್ಯವಸ್ಥೆಮಾಡಬೇಕು ಎಂದು ಅಧಿಕಾರಿಗಳಿಗೆ ಸಾರ್ವಜನಿಕರು ಮನವಿ ಮಾಡಿದರು.

ಬಗೆಹರಿಯದ ಸಮಸ್ಯೆ: ತಾಲೂಕಿನಲ್ಲಿ ಆಧಾರ್‌ ತಿದ್ದುಪಡಿ ಸಮಸ್ಯೆಜನರಿಗೆ ಪ್ರತಿನಿತ್ಯದ ತಲೆನೋವಾಗಿದ್ದು, ತಾಲೂಕು ಕಚೇರಿಗೆ ಜನರು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ಅಧಿಕಾರಿಗಳು ಗ್ರಾಮ ಪಂಚಾಯತಿ ಹಾಗೂ ನಾಡಕಚೇರಿಯಲ್ಲಿ ಆಧಾರ್‌ ತಿದ್ದುಪಡಿ ಮಾಡಲಾಗುತ್ತದೆ ಎಂಬ ಭರವಸೆಯನ್ನು ನೀಡುತ್ತಿದ್ದಾರೆ ವಿನಃ ತಿದ್ದುಪಡಿ ಕೇಂದ್ರಗಳಿಗೆ ಚಾಲನೆ ನೀಡಿಲ್ಲ, ಇದರಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗಿದ್ದು ಬಗೆಹರಿಯದ ಸಮಸ್ಯೆಯಾಗಿದೆ.

ಅಕ್ರೋಶ: ಪಟ್ಟಣದ ತಾಲೂಕು ಕಚೇರಿಯ ಒಂದು ಕೇಂದ್ರದಲ್ಲಿ ಮಾತ್ರ ಆಧಾರ್‌ ತಿದ್ದುಪಡಿಗೆ ಅವಕಾಶವಿದ್ದು, ದಿನಕ್ಕೆ 25 ರಿಂದ 30 ಆಧಾರ್‌ ಮಾಡಬಹುದು, ಉಳಿದ ಜನರು ವಾಪಸ್‌ ತೆರಳಬೇಕು, ಶಾಲಾ ಮಕ್ಕಳು, ಕೆಲಸಗಾರಿಗೆ ಬಹಳಷ್ಟು ತೊಂದರೆಯಾಗುತ್ತಿದೆ. ಅಧಿಕಾರಿಗಳು ನಮ್ಮಗೆ ಸ್ಪಂದನೆ ನೀಡುತ್ತಿಲ್ಲ ಎಂದು ಆಧಾರ್‌ ತಿದ್ದುಪಡಿಗೆ ಆಗಮಿಸಿದ್ದ ನೂರಾರು ಜನರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಹಶೀಲ್ದಾರ್‌ ಕೆ.ಎನ್‌.ರಾಜಶೇಖರ್‌ ಮಾತನಾಡಿ, ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿ ಹಾಗೂ ನಾಡ ಕಚೇರಿಗಳಲ್ಲಿ ಆಧಾರ್‌ ತಿದ್ದುಪಡಿ ಕೇಂದ್ರಗಳನ್ನು ತೆರೆಯಲಾಗುವುದು, ಸಾರ್ವಜನಿಕರಿಗೆ ತಕ್ಷಣ ಆಧಾರ್‌ ತಿದ್ದುಪಡಿ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದರು.

ಆಧಾರ್‌ತಿದ್ದುಪಡಿಗೆ ಬಂದಿದ್ದ ಸ್ಥಳೀಯರಾದ ಮಂಜುಳಾ ಮಾತನಾಡಿ, ಆಧಾರ್‌ ತಿದ್ದುಪಡಿ ಮಾಡಿಸಲು ತಿಂಗಳಿನಿಂದ ಪರದಾಡುತ್ತಿದ್ದೇನೆ. ಗ್ರಾಮ ಪಂಚಾಯತಿ ಹಾಗೂ ನಾಡಕಚೇರಿಗಳಲ್ಲಿ ಆಧಾರ್‌ ತಿದ್ದುಪಡಿ ಮಾಡದೇ ಅಧಿಕಾರಿಗಳು ಸುಳ್ಳು ಭರವಸೆ ನೀಡುತಿದ್ದಾರೆ. ತಾಲೂಕು ಕಚೇರಿಯಲ್ಲಿ ಟೋಕನ್‌ ಸಿಗದೇ ನಾಲ್ಕು ದಿನಗಳಿಂದ ಅಲೆದಾಡುತಿದ್ದೇನೆ, ಇದರಿಂದ ಶಾಲೆ ಮಕ್ಕಳಿಗೆ ಬಹಳಷ್ಟು ತೊಂದರೆಯಾಗಿದೆ ತಕ್ಷಣ ಸಮಸ್ಯೆ ಬಗೆಹರಿಸುವಲ್ಲಿ ಅಧಿಕಾರಿಗಳು ಗಮನಹರಿಸಬೇಕು ಎಂದರು.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.