ಕೆರೆ ನೀರಿನಲ್ಲಿ ಪ್ಲಾಸ್ಟಿಕ್‌ ಹಾವಳಿ


Team Udayavani, Apr 27, 2019, 5:00 AM IST

kere-nee

ನೆಲಮಂಗಲ: ಕೆರೆಗಳ ಹೂಳೆತ್ತುವ ಮೂಲಕ ಅಂತರ್ಜಲಮಟ್ಟ ಹೆಚ್ಚಿಸಿ ರೈತರಿಗೆ ಮತ್ತು ಗ್ರಾಮೀಣ ಜನರಿಗೆ ಅನುಕೂಲ ಕಲ್ಪಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಕೆರೆಗಳ ಪುನಃಶ್ಚೇತನಕ್ಕೆ ಮುಂದಾದರೆ, ಕೆಲವು ಮಣ್ಣುಗಳ್ಳರು ಕೆರೆಗಳ ಒಡಲಿಗೆ ಕನ್ನ ಹಾಕುವ ಮೂಲಕ ಕೆರೆಯಂಗಳದಲ್ಲಿ ಗುಂಡಿಗಳನ್ನು ನಿರ್ಮಿಸಿದ್ದಾರೆ.

ತಾಲೂಕಿನ ಕೆಂಪಲಿಂಗನಹಳ್ಳಿ ಹಾಗೂ ಬಾವಿಕೆರೆೆ ಗ್ರಾಮಗಳ ಜನರಿಗೆ ಜೀವನಾಡಿಯಾಗಿರುವ ಈ ಕೆರೆಯಲ್ಲಿ ವರ್ಷದ 365 ದಿನಗಳ ಕಾಲ ನೀರಿರುತ್ತದೆ. ಮಳೆಗಾಲದಲ್ಲಿ ನೀರು ತುಂಬಿರುತ್ತದೆ. ಆದರೆ, ಬೇಸಿಗೆಯಲ್ಲಿ ಪ್ರಾಣಿ, ಪಕ್ಷಿಗಳಿಗೆ ಬಾಯಾರಿಕೆ ನೀಗಿಸುವ ಈ ಕೆರೆಗೆ ವಿಷದ ಮಿಶ್ರಣ ಮಾಡಿದಂತೆ ಪಾಸ್ಟಿಕ್‌ ಹಾವಳಿ ಹೆಚ್ಚಾಗಿದೆ. ಇದರಿಂದ, ಪ್ರಾಣಿ, ಪಕ್ಷಿಗಳು ಅಪಾಯದಂಚಿಗೆ ತಲುಪಿ, ಸಾವು, ಬದುಕಿನ ನಡುವೆ ಹೋರಾಟ ನಡೆಸುತ್ತಿವೆ.

ಕೆರೆ ಒಡಲಿಗೆ ಕನ್ನ: ಕೆರೆಯ ಅಂಗಳದಲ್ಲಿ ಹೂಳೆತ್ತುವ ಮೂಲಕ ಕೆ‌ರೆಯ ಅಭಿವೃದ್ಧಿ ಮಾಡಲಾಗುತ್ತಿದೆ ಎನ್ನುವ ಕೆಲವರು, ಕೆರೆಯ ಮಣ್ಣನ್ನು ಹತ್ತಾರು ಅಡಿ ಆಳಕ್ಕೆ ಅಗೆದು ಮಣ್ಣನ್ನು ಸಾಗಿಸುತ್ತಿದ್ದಾರೆ. ಇದರಿಂದ ಕೆರೆಯಂಗಳದಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿವೆ.

ಮಳೆಯ ನೀರು ಕೆರೆಯಲ್ಲಿ ನಿಲ್ಲದೇ ಸ್ವಲ್ಪ ಮಣ್ಣಿನ ಗುಂಡಿಯಲ್ಲಿ ನೀರು ಸಂಗ್ರಹವಾಗಿರುವುದರಿಂದ ಜಾನುವಾರಗಳು ನೀರು ಕುಡಿಯುವ ವೇಳೆ ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ. ಇದಲ್ಲದೇ, ಮಕ್ಕಳು ಈಜಲು ಮುಂದಾದರೆ ಕೆರೆಯ ಗುಂಡಿಯಲ್ಲಿನ ಮಣ್ಣಲ್ಲಿ ಸಿಲುಕಿಕೊಂಡು ಪ್ರಾಣಪಕ್ಷಿ ಹಾರುವುದರಲ್ಲಿ ಸಂಶಯವಿಲ್ಲ. ಕೆಲವರು ಮಣ್ಣಿಗಾಗಿ ಕೆರೆಯ ಒಡಲಿಗೆ ಕನ್ನ ಹಾಕುತ್ತಿರುವುದು ಬಹುದೊಡ್ಡ ದುರಂತವೇ ಸರಿ.

ಮೌನವಾದರೇ ಜಿಲ್ಲಾಧಿಕಾರಿ: ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕರೀಗೌಡರು ಅಧಿಕಾರ ಸ್ವೀಕರಿಸಿದ ನಂತರ ಕೆರೆಗಳ ಅಭಿವೃದ್ಧಿ ಮಾಡಲು ಹಲವು ಕೆರೆಗಳನ್ನು ಆಯ್ಕೆ ಮಾಡಿಕೊಂಡು ಖಾಸಗಿಯವರ ನೆರವಿನೊಂದಿಗೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿದರು. ಕೆಲವು ಕೆರೆಗಳ ಹೂಳೆತ್ತುವ ಮೂಲಕ ಉತ್ತಮ ಕೆಲಸ ಮಾಡಿದ್ದಾರೆ. ಆದರೆ, ಇದನ್ನು ಬಂಡವಾಳವಾಗಿ ಮಾಡಿಕೊಂಡ ಕೆಲ ಮಣ್ಣುಗಳ್ಳರು ಬೇರೆ ಕೆರೆಗಳಲ್ಲಿ ಅವರಿಗೆ ಇಷ್ಟಬಂದತೆ ಮಣ್ಣು ಸಾಗಿಸುತ್ತಿದ್ದಾರೆ.

ಆ ನೂಲಕ ಕೆರೆಯಲ್ಲಿ ಗುಂಡಿಗಳು ನಿರ್ಮಾಣವಾಗುವಂತೆ ಮಾಡಿದ್ದಾರೆ. ಆದರೆ, ಕೆಲವು ಕೆರೆಗಳಲ್ಲಿ ಕದ್ದುಮುಚ್ಚಿ ಮಣ್ಣಿನ ಸಾಗಾಣಿಕೆ ನಡೆಯುತ್ತಿದ್ದರೂ ಜಿಲ್ಲಾಧಿಕಾರಿಗಳು ಮೌನವಾಗಿದ್ದಾರೆ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಬಲವಾಗಿ ಕೇಳಿಬರುತ್ತಿವೆ. ಈಗಲಾದರೂ ಇಂತಹ ಕಳ್ಳರಿಗೆ ಕಡಿವಾಣ ಹಾಕದಿದ್ದರೆ ಮುಂದೆ ಗ್ರಾಮೀಣ ಜನರು ಬಹುದೊಡ್ಡ ಅಪಾಯ ಎದುರಿಸಬೇಕಾಗುತ್ತದೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಪ್ಲಾಸ್ಟಿಕ್‌ ಕೆರೆ: ಕೆಂಪಲಿಂಗನಹಳ್ಳಿ ದೇವಾಂಗ ಮಠದ ಸಮೀಪವಿರುವ ಈ ಕೆರೆ ರಸ್ತೆ ಪಕ್ಕದಲ್ಲಿರುವುದರಿಂದ ಪ್ಲಾಸ್ಟಿಕ್‌ ಪೇಪರ್‌ ಹಾಗೂ ವಸ್ತುಗಳನ್ನು ಕೆರೆಯಂಗಳದಲ್ಲಿ ಸುರಿಯಲಾಗಿದೆ. ಪರಿಣಾಮ ಗಾಳಿಗೆ ಹಾರಿಹೋಗಿ ಕೆರೆಯ ತುಂಬ ಪಾಸ್ಟಿಕ್‌ ವಸ್ತುಗಳು ತುಂಬಿಕೊಂಡಿವೆ. ಈ ಕೆರೆಯಲ್ಲಿ ಬೇಸಿಗೆಯಲ್ಲಿ ನೀರಿರುವುದರಿಂದ ಜಾನುವಾರಗಳು ಹಾಗೂ ಸಾವಿರಾರು ಪಕ್ಷಿಗಳು ನೀರು ಕುಡಿಯಲು ಈ ಕೆರೆಗೆ ಬರುತ್ತವೆ. ಆದರೆ, ಇಲ್ಲಿನ ಪ್ಲಾಸ್ಟಿಕ್‌ ಜಾನುವಾರಗಳ ದೇಹ ಸೇರುತ್ತಿವೆ. ಇನ್ನು ನೀರಿಗಾಗಿ ಬರುವ ಪಕ್ಷಿಗಳ ಕಾಲಿಗೆ ಪ್ಲಾಸ್ಟಿಕ್‌ ಕವರ್‌ ಸಿಲುಕಿ ನರಳಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ನಿಯಮ ಉಲ್ಲಂಘನೆ: ಕೆರೆಯಲ್ಲಿ ಇಂತಿಷ್ಟೇ ಅಡಿ ಆಳದವರೆಗೆ ಹೂಳೆತ್ತಬೇಕು. ಕೆಲವೊಮ್ಮೆ ಕೆರೆಯ ಕೀಟ್ರಂಚ್‌ ಮಿತಿಯವರೆಗೂ ಅಥವಾ ಕೆರೆಯ ತೂಬಿನ ಮಟ್ಟಕ್ಕೆ ತೆಗೆಯಬೇಕೆಂಬ ಸಣ್ಣ ನೀರಾವರಿ ಇಲಾಖೆ ನೀತಿನಿಯಮಗಳನ್ನು ಮಣ್ಣುಗಳ್ಳರು ಗಾಳಿಗೆ ತೂರಿದ್ದಾರೆ.

ನಮ್ಮ ಕೆರೆಯಲ್ಲಿ ವರ್ಷಪೂರ್ತಿ ನೀರಿರುತ್ತದೆ. ಆದರೆ,ಕೆಲವರು ಕದ್ದು ಮಣ್ಣು ಸಾಗಣೆ ಮಾಡಿ ಗುಂಡಿಗಳು ಬೀಳುವಂತೆ ಮಾಡಿದ್ದಾರೆ. ಹೂಳೆತ್ತಲು ನಿಯಮವಿದೆ.ಅದಕ್ಕೆ ವಿರುದ್ಧವಾಗಿ ಕೆಲಸ ಮಾಡುವವರನ್ನು ತಡೆಯಬೇಕಾದ ಅಧಿಕಾರಿಗಳು ಕಾಣೆಯಾಗಿದ್ದಾರೆ.
-ಪ್ರದೀಪ್‌, ಸ್ಥಳೀಯ

ಪ್ರಾಣಿ, ಪಕ್ಷಿಗಳಿಗೆ ಬೇಸಿಗೆಯಲ್ಲಿ ನೀರು ಸಿಗುವುದೇ ಕಷ್ಟ. ಇಂತಹ ಸಂದರ್ಭದಲ್ಲಿ ಕೆರೆಯ ನೀರು ಬೇಸಿಗೆಯಲ್ಲೂ ಪ್ರಾಣಿ, ಪಕ್ಷಿಗಳಿಗೆ ಅನುಕೂಲವಾಗಿರುವುದು ಸಂತೋಷ.ಆದರೆ ಇದಕ್ಕೆ ಪ್ಲಾಸ್ಟಿಕ್‌ ಪೇಪರ್‌ಗಳು ಮುಳ್ಳಾಗಿರುವುದು ಬಹಳ ಬೇಸರ ತಂದಿದೆ.ಸಮಬಂಧಪಟ್ಟ ಇಲಾಖೆ ಅಧಿಕಾರಿಗಳು ತಕ್ಷಣ ಸಮಸ್ಯೆ ಬಗೆಹರಿಸಬೇಕು.
-ನವೀನ್‌ಕುಮಾರ್‌, ಪಕ್ಷಿ ಪ್ರೇಮಿ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.