ಪ್ಲಾಸ್ಟಿಕ್‌ ಪ್ಯಾಕೆಟ್‌ ಹಾಲು ನಿಷೇಧ


Team Udayavani, Oct 4, 2019, 4:06 PM IST

br-tdy-1

ನೆಲಮಂಗಲ: ರಾಜ್ಯದಲ್ಲಿ ಪ್ಲಾಸ್ಟಿಕ್‌ ಪ್ಯಾಕೆಟ್‌ನಲ್ಲಿ ಹಾಲು ನೀಡುವ ವಿಧಾನ ಬದಲಾವಣೆ ಮಾಡುವ ಮೂಲಕ ದೇಶದಲ್ಲಿ ಪ್ಲಾಸ್ಟಿಕ್‌ ನಿಷೇಧಕ್ಕೆ ಪ್ರಧಾನಿ ನೀಡಿರುವ ಕರೆಗೆ ಕೈಜೊಡಿಸುತ್ತೇವೆ ಎಂದು ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷ ನರಸಿಂಹಮೂರ್ತಿ ತಿಳಿಸಿದರು.

ತಾಲೂಕಿನ ವರದನಾಯಕನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ 5 ಸಾವಿರ ಲೀಟರ್‌ ಸಾಮಥ್ಯದ ಹಾಲು ಶೀಥಲಿಕರಣ ಘಟಕ ಬಿ.ಎಂ.ಸಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು.  ರೈತರಿಂದ ಸಂಗ್ರಹಿಸಿದ ಹಾಲನ್ನು ಗುಣಮಟ್ಟವಾಗಿ ಕಾಪಾಡಿಕೊಳ್ಳಲು ಹಾಲಿನ ಡೇರಿ ಗಳಲ್ಲಿ ಹಾಲು ಶೀಥಲಿ ಕರಣ ಘಟಕ (ಬಿ.ಎಂ.ಸಿ) ನಿರ್ಮಾಣ ಮಾಡಲಾಗುತ್ತಿದೆ. ಬೆಂಗಳೂರು ಸಹಕಾರ ಹಾಲು ಒಕ್ಕೂಟದಿಂದ ಹಾಲು ಉತ್ಪಾದಕರಿಗೆ ವಿಮಾ ಸೌಲಭ್ಯ, ಮಕ್ಕಳಿಗೆ ವಿದ್ಯಾರ್ಥಿವೇತನ, ಸಹಾಯಧನ, ಕೊಟ್ಟಿಗೆ ನಿರ್ಮಾಣ, ಹಸುಗಳಿಗೆ ಮ್ಯಾಟ್‌, ಹಾಲು ಕರೆಯುವ ಯಂತ್ರ, ಹುಲ್ಲು ಕತ್ತರಿಸುವ ಯಂತ್ರ ಸೇರಿದಂತೆ ಹಾಲಿನ ಸಹಾಯ ಧನವನ್ನು ಹೆಚ್ಚಿನ ಪ್ರಮಾಣದಲ್ಲಿ ನೀಡಲಾಗುತ್ತಿದ್ದು, ಹಾಲು ಒಕ್ಕೂಟಗಳು ರೈತರಿಗೆ ಆರ್ಥಿಕ ಶಕ್ತಿ ನೀಡುವ ಕೇಂದ್ರಗಳಾಗಿವೆ ಎಂದರು.

ಸಂಘದ ಅಧ್ಯಕ್ಷ ಕೆ. ನಾಗರಾಜು ಮಾತನಾಡಿ, ಹಾಲು ಒಕ್ಕೂಟ ಗ್ರಾಮದ ರೈತರ ಬದುಕನ್ನು ಬಂಗಾರದಂತೆ ಮಾಡಿದೆ. ಹೈನುಗಾರಿಕೆಯಿಂದ ಕೃಷಿಯಲ್ಲಿನ ನಷ್ಟವನ್ನು ಸರಿದೂಗಿಸಿ ಜೀವನ ನಡೆಸಲು ಅವಕಾಶ ಮಾಡಿಕೊಟ್ಟಿದೆ. ಗ್ರಾಮದಲ್ಲಿ ಬಿ.ಎಂ.ಸಿ ನಿರ್ಮಾಣದಿಂದ ಗುಣಮಟ್ಟದ ಹಾಲು ನೀಡಲು ಸಹಕಾರಿಯಾಗಿದೆ ಎಂದರು.

5 ಸಾವಿರ ಲೀಟರ್‌ ಹಾಲು ಸಂಗ್ರಹ: ವರದನಾಯಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ 5 ಸಾವಿರ ಲೀಟರ್‌ ಸಾಮರ್ಥ್ಯದ ಹಾಲು ಶೀಥಲಿಕರಣ ಘಟಕ ವನ್ನು ಬೆಂಗಳೂರು ಸಹಕಾರ ಹಾಲು ಒಕ್ಕೂಟ ಹಾಗೂ ರಾಷ್ಟ್ರೀಯ ಹೈನುಗಾರಿಕೆ ಯೋಜನೆಯಡಿ 15ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಕಟ್ಟಡ ನಿರ್ಮಾಣಕ್ಕೆ 7 ಲಕ್ಷ ನೀಡಲಾಗಿದ್ದು, ವರದನಾಯಕನಹಳ್ಳಿ, ಬೈರನಹಳ್ಳಿ, ತೋಣಚಿನಕುಪ್ಪೆ,ಯರಮಾಚನಹಳ್ಳಿ, ಬರದಿ, ಮಂಡಿಗೆರೆ ಗ್ರಾಮಸ್ಥರಿಗೆ ಅನುಕೂಲವಾಗಲಿದೆ. ಈ ವೇಳೆ ಹಸಿರುವಳ್ಳಿ ಗ್ರಾಪಂ ಸದಸ್ಯ ಪುರುಷೋತ್ತಮ್‌, ಬೆಂಗಳೂರು ಸಹಕಾರ ಹಾಲು ಒಕ್ಕೂಟದ ನಿರ್ದೇಶಕ ಭಾಸ್ಕರ್‌, ಉಪ ವ್ಯವಸ್ಥಾಪಕ ಗೋಪಾಲ್‌ ಗೌಡ, ದತ್ತರಾಜು, ವಿಸ್ತರಣಾಧಿಕಾರಿ ನಾಗರಾಜು, ಚಂದನ್‌, ಶಿವಕುಮಾರ್‌, ವಿವಿಧ ಹಾಲಿನ ಡೇರಿ ಅಧ್ಯಕ್ಷ ವಿಜಯಕುಮಾರ್‌, ಜಗದೀಶ್‌, ವರದನಾಯಕನಹಳ್ಳಿ ಹಾಲಿನ ಸಂಘದ ಕಾರ್ಯದರ್ಶಿ ಮಂಜುನಾಥ್‌ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.