Pomegranate: ದಾಳಿಂಬೆಗೆ ದುಂಡಾಣು, ಚುಕ್ಕೆ ರೋಗಬಾಧೆ


Team Udayavani, Sep 2, 2023, 3:32 PM IST

Pomegranate: ದಾಳಿಂಬೆಗೆ ದುಂಡಾಣು, ಚುಕ್ಕೆ ರೋಗಬಾಧೆ

ದೇವನಹಳ್ಳಿ: ಬಯಲು ಸೀಮೆ ಪ್ರದೇಶವಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದಾಳಿಂಬೆಗೆ ದುಂಡಾಣು ಮತ್ತು ಚುಕ್ಕಿ ರೋಗ ಕಾಣಿಸಿಕೊಂಡಿದ್ದು ರೈತರಲ್ಲಿ ಆತಂಕ ಮನೆ ಮಾಡಿದೆ.

ದಾಳಿಂಬೆ ಲಾಭದಾಯಕ ಬೆಳೆಯಾಗಿದ್ದು, ಬಯಲು ಸೀಮೆ ಪ್ರದೇಶಕ್ಕೆ ಹೊಂದುವ ಬೆಳೆಯಾಗಿದೆ. ದಾಕ್ಷಿ ಮತ್ತು ತರಕಾರಿ ಮತ್ತು ಹೂ, ಹಣ್ಣು ಬೆಳೆಗಳನ್ನು ಬೆಳೆದು ರೈತರು ಜೀವನ ಸಾಗಿಸುತ್ತಿದ್ದಾರೆ.

ರೋಗ ತಡೆಗೆ ಕ್ರಮ ವಹಿಸಿ: ರೋಗ ರಹಿತ ಸಸಿಗಳನ್ನು ನಾಟಿಗೆ ಉಪಯೋಗಿಸಬೇಕು. ಶಿಫಾರಸ್ಸು ಮಾಡಿದ ಪೋಷಕಾಂಶಗಳು ಜೊತೆಗೆ ಕೊಟ್ಟಿಗೆ ಗೊಬ್ಬರ ಅಥವಾ ಎರೆ ಹುಳುವಿನ ಗೊಬ್ಬರ ಹೆಚ್ಚಾಗಿ ಬಳಸುವುದರಿಂದ ರೋಗದ ತೀವ್ರತೆ ಕಡಿಮೆ ಗೊಳಿಸಬಹುದು. ದಾಳಿಂಬೆ ತೋಟ ಸ್ವತ್ಛವಾಗಿ ಡುವುದು. ರೋಗ ಪೀಡಿತ ಎಲೆ, ಕಾಂಡ ಮತ್ತು ಕಾಯಿಗಳನ್ನು ಕಿತ್ತು ಸುಡಬೇಕು. ಇದರಿಂದ ರೋಗ ತಡೆಗಟ್ಟ ಬಹುದು. ರೋಗ ತಗಲಿದ ಎಲೆಗಳ ಸೋಂಕನ್ನು ಕಡಿಮೆ ಮಾಡಲು ಶೇ.ಒಂದರ ಬೋರ್ಡ್‌ ದ್ರಾವಣ ಸಿಂಪಡಿಸುವುದು. ಪ್ರತಿ ಲೀ.ನೀರಿಗೆ 2.0 ರಿಂದ 2.5 ಇಧೆÅàಲ್‌ ಬೆಳೆಸಿ ಸಿಂಪಡಿಸಿ ಎಲೆ ಉದುರಿ ಸಬೇಕು. ಪ್ರತಿ ಜೀವ ನಾಶಕ (ದುಂಡಾಣು ನಾಶಕ)ದ ಸಿಂಪಡಣೆ ನಂತರ ಸತುವಿನ ಸಲ್ಫೆಟ್‌ ಒಂದು ಗ್ರಾಂ ಮೆಗ್ನೆಶಿಯಂ ಸಲ್ಫೆಟ್‌ ಒಂದು ಗ್ರಾಂ ಸುಣ್ಣದ ಸಲ್ಫೆಟ್‌ ಹಾಗೂ ಬೋರಾನ್‌ ಒಂದು ಗ್ರಾಂ ಪ್ರತಿ ಲೀಟರ್‌ ನೀರಿನಲ್ಲಿ ಬೆರೆಸಿ ಸಿಂಪಡಣೆ ಮಾಡುವುದರಿಂದ ಸಸ್ಯಗಳಲ್ಲಿ ರೋಗ ನಿರೋಧಕತೆ ಹೆಚ್ಚಿಸಿ ರೋಗದ ತೀವ್ರತೆ ಕಡಿಮೆಗೊಳಿಸಬಹುದು ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಲಹೆ ನೀಡಿ ದ್ದಾರೆ.

ರೋಗ ಬಾಧೆ ಹೆಚ್ಚಳ: ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅತಿಹೆಚ್ಚು ದಾಳಿಂಬೆ, ಪಪ್ಪಾಯಿ, ದ್ರಾಕ್ಷಿ ಇತರೆ ಬೆಳೆ ಬೆಳೆಯಲು ಪೈಪೋಟಿಯಿದ್ದು, ಇಂತಹ ವೇಳೆ ದಾಳಿಂಬೆ ಬೆಳೆಗೆ ದುಂಡಾಣು ಮತ್ತು ಚುಕ್ಕೆ ರೋಗ ಕಾಣಿಸಿಕೊಂಡಿದ್ದು ಬಹು ತೇಕ ಬೆಳೆ ಕೈ ಸುಟ್ಟಿದೆ. ಹಾಗಾಗಿ ಗಿಡ ಅಗೆದು ಹಾಕಲು ರೈತರು ಮುಂದಾ ಗಿ ದ್ದಾರೆ. ಬೆಂ.ಗ್ರಾಮಾಂತರ ಜಿಲ್ಲೆ ಯಷ್ಟೇ ಅಲ್ಲ ದೇ ಚಿಕ್ಕಬಳ್ಳಾಪುರ, ಕೋಲಾರ, ಗ್ರಾಮಾಂತರ, ಪ್ರದೇಶಗಳಲ್ಲಿ ಸಾಕಷ್ಟು ಹಣ ಖರ್ಚು ಮಾಡಿ ದಾಳಿಂಬೆ ಬೆಳೆ ನಾಟಿ ಮಾಡಿದ್ದಾರೆ.

ಕೀಟ ಬಾಧೆ ತಡೆಯೇ ಸವಾಲು: ದಾಳಿಂಬೆ ಗಿಡದ ಎಲೆ ಮತ್ತು ಕಾಯಿಗಳ ಮೇಲೆ ಕಪ್ಪು ಚುಕ್ಕೆ ಆಕಾರದಲ್ಲಿ ಕಾಣಿಸುವ ದುಂಡಾಣು ರೋಗ ದಿನದಿಂದ ದಿನಕ್ಕೆ ವ್ಯಾಪಿಸುತ್ತಿದೆ. ಅತಿಯಾದ ಮಳೆ, ಬಿಸಿಲು ರೈತರಿಗೆ ಶಾಪವಾಗಿ ಪರಿಣಮಿಸಿದೆ. ದುಂಡಾಣು ರೋಗದ ಜತೆಗೆ ಈ ಬಾರಿ ಕಾಯಿ ಕೊರಕ ರೋಗ ಕಾಣಿಸಿಕೊಂಡಿದ್ದು ಬಹುತೇಕ ರೈತರು ನೂರಾರು ಕ್ವಿಂಟಲ್‌ ದಾಳಿಂಬೆ ಹಣ್ಣು ಕಿತ್ತು ತಿಪ್ಪೆಗೆ ಹಾಕಿರುವುದು ಕಂಡುಬಂದಿದೆ. ಇದು ದಾಳಿಂಬೆ ಬೆಳೆಗಾರರು ಕುಸಿಯುವಂತೆ ಮಾಡಿದೆ. ತಿಂಗಳಿಗೆ 25 ಸಾವಿರ ಹಣ ನೀಡಿ ಕ್ರಿಮಿನಾಶಕ ಸಿಂಪಡಣೆ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದರೂ ನೂರಾರು ಟನ್‌ ದಾಳಿಂಬೆ ಹಾನಿಗೀಡಾಗಿದೆ. ಹವಾಮಾನ ಆಧರಿತ ರೋಗಾಣು ನಿಯಂತ್ರಣ ಸವಾಲಾಗಿ ಪರಿಣಮಿಸಿದೆ.

ದಾಳಿಂಬೆ ಬೆಳೆಯನ್ನು ದೇವನಹಳ್ಳಿ ತಾಲೂಕಿನಲ್ಲಿ ಹೆಚ್ಚು ರೈತರು ಬೆಳೆಯುತ್ತಿದ್ದಾರೆ. ದುಂಡಾಣು ಮತ್ತು ಚುಕ್ಕ ರೋಗವು ಜಿಲ್ಲೆಯಲ್ಲಿ ಶೇ.30ರಷ್ಟಿದೆ. ಈ ರೋಗ ಬಂದಾಗ ರೈತರ ಸಾಕಷ್ಟು ಸಮಗ್ರ ನಿರ್ವಹಣೆಗಾಗಿ ಅನುಸರಿಸಬೇಕಾದ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಈ ರೋಗಗಳು ಅಷ್ಟು ಪರಿಣಾಮಕಾರಿಯಾಗಿಲ್ಲ. ದುಂಡಾಣು ಮತ್ತು ಚುಕ್ಕೆ ರೋಗ ಸಂಬಂಧಪಟ್ಟಂತೆ ರೈತರಿಗೆ ತರಬೇತಿಗಳನ್ನು ನೀಡುವುದರ ಮೂಲಕ ಅರಿವು ಮೂಡಿಸಲಾಗುವುದು. – ಗುಣವಂತ, ಉಪನಿರ್ದೇಶಕರು ಜಲ್ಲಾ ತೋಟಗಾರಿಕೆ ಇಲಾಖೆ

ದುಂಡಾಣು ಮತ್ತು ಚುಕ್ಕೆ ರೋಗದ ಬಗ್ಗೆ ತೋಟಗಾರಿಕೆ ಅಧಿಕಾರಿಗಳು ರೈತರಿಗೆ ಹೆಚ್ಚಿನ ಮಾಹಿತಿ ನೀಡಬೇಕು. ದಾಳಿಂಬೆ ಬೆಳೆಯನ್ನು ಸಾಲ ಸೋಲ ಮಾಡಿ ಬೆಳೆಯುತ್ತಿದ್ದೇವೆ. ಇಂತಹ ರೋಗಗಳು ರೈತರನ್ನು ಕಾಡುತ್ತಿದೆ. ದಾಳಿಂಬೆ ಬೆಳೆಯು ಲಾಭದಾಯಕ ಬೆಳೆಯಾಗಿದೆ. – ವಿನಯ್‌, ದಾಳಿಂಬೆ ಬೆಳೆಗಾರ

– ಎಸ್‌.ಮಹೇಶ್‌

ಟಾಪ್ ನ್ಯೂಸ್

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

2-thirthahalli

ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.