ಚುನಾವಣಾ ಸಿಬ್ಬಂದಿಯ ಅಂಚೆ ಮತವೇ ತಿರಸ್ಕಾರ


Team Udayavani, May 17, 2023, 3:46 PM IST

ಚುನಾವಣಾ ಸಿಬ್ಬಂದಿಯ ಅಂಚೆ ಮತವೇ ತಿರಸ್ಕಾರ

ನೆಲಮಂಗಲ: ಚುನಾವಣೆಯಲ್ಲಿ ಜನರಿಗೆ ಮತದಾ ನದ ಅರಿವು ಮೂಡಿಸುವ ಜತೆ ಮತದಾನದಿಂದ ಮತ ಎಣಿಕೆವರೆಗೂ ಕೆಲಸ ಮಾಡುವ ಸಿಬ್ಬಂದಿಗೆ ಮತದಾನದ ಸೂಕ್ತ ವಿಧಾನ ತಿಳಿಯದಿರುವುದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಕಾರಣವಾಗಿದೆ.

ಚುನಾವಣಾ ಆಯೋಗ ಈ ಬಾರಿ ಪ್ರತಿವರ್ಷದಂತೆ ಅಂಚೆ ಮತದಾನ ಮಾಡಲು ಚುನಾವಣೆಯ ಕರ್ತವ್ಯ ಸಿಬ್ಬಂದಿಗಳಿಗೆ ಅವಕಾಶ ನೀಡಲಾಗಿತ್ತು, ಮತದಾನ ಮಾಡಿಸಲು ಅರಿವು ಮೂಡಿಸುವ ಸಿಬ್ಬಂದಿಗಳೇ ಮತದಾನ ಮಾಡಲು ಮುಂದಾಗುತ್ತಿಲ್ಲ ಎಂಬ ಮೇಲಾಧಿಕಾರಿಗಳ ಆರೋಪದ ನಡುವೆ ಮತ ದಾನ ಮಾಡಿದ ಕೆಲ ಸಿಬ್ಬಂದಿಗಳು ಕೂಡ ಸರಿಯಾದ ವ್ಯವಸ್ಥೆಯಲ್ಲಿ ಮತದಾನ ಮಾಡದಿರುವುದು ಅಂಚೆಮತಗಳ ತಿರಸ್ಕಾರಕ್ಕೆ ಕಾರಣವಾಗಿದೆ. ಸಿಬ್ಬಂದಿಗಳಿಗಿಲ್ಲ ಜಾಗೃತಿ: ಪ್ರತಿ ಚುನಾವಣೆಯಲ್ಲಿ ಅಂಚೆ ಮತದಾನಗಳು ಅತಿ ಹೆಚ್ಚು ತಿರಸ್ಕಾರವಾಗುತ್ತಿ ದ್ದರು ಸಹ ಚುನಾವಣಾ ಆಯೋಗ ಸಿಬ್ಬಂದಿಗಳಿಗೆ ಸರಿಯಾದ ತರಬೇತಿ ನೀಡುತ್ತಿಲ್ಲ ಎಂಬುದು ಕೆಲವರ ಆರೋಪವಾಗಿದೆ.

ಸಿಬ್ಬಂದಿಗಳೇ ಮತದಾನದ ಬಗ್ಗೆ ಈ ರೀತಿಯ ನಿರ್ಲಕ್ಷ್ಯ ಮಾಡುತ್ತಿರುವುದು ಸಾರ್ವಜ ನಿಕರ ಆಕ್ರೋಶಕ್ಕೆ ಕಾರಣವಾಗಿದ್ದು ಮುಂದಿನ ಚುನಾವಣೆಯಲ್ಲಿ ಸಿಬ್ಬಂದಿಗಳ ಮತ ತಿರಸ್ಕಾರವಾಗದಂತೆ ಜಾಗೃತಿ ಮೂಡಿಸಲಿ.

ಎಲ್ಲೆಲ್ಲಿ, ಎಷ್ಟೆಷ್ಟು ಅಂಚೆ ಮತ ತಿರಸ್ಕಾರ ಆಗಿದೆ?: ಚುನಾವಣೆ ಕರ್ತವ್ಯದಲ್ಲಿದ್ದ ಸಿಬ್ಬಂದಿಗಳೇ ಅತಿಹೆಚ್ಚು ಅಂಚೆ ಮತದಾನ ಮಾಡಿದ್ದು ನೆಲಮಂಗಲದಲ್ಲಿ 1169 ಅಂಚೆ ಮತದಾನ ಮಾಡಿದರೆ 487ಮತ ತಿರಸ್ಕಾರ, ಹೊಸಕೋಟೆಯಲ್ಲಿ 1148 ಅಂಚೆಮತದಾನ ದಲ್ಲಿ 114 ಮತ ತಿರಸ್ಕಾರ, ದೇವನಹಳ್ಳಿಯ 998 ಅಂಚೆ ಮತದಾನದಲ್ಲಿ 176 ಮತ ತಿರಸ್ಕಾರವಾಗಿದೆ. ಚುನಾವಣೆಯಲ್ಲಿ ಮತದಾನ ಮಾಡುವಂತೆ ಜಾಗೃತಿ ಮೂಡಿಸುವ ಸಿಬ್ಬಂದಿಗೆ ಸರಿಯಾದ ವ್ಯವಸ್ಥೆಯಲ್ಲಿ ಮತದಾನ ಮಾಡದಿರುವುದು ಚುನಾವಣಾ ಆಯೋಗದ ವ್ಯವಸ್ಥೆಯನ್ನು ಪ್ರಶ್ನೆ ಮಾಡುವಂತಾಗಿದೆ.

ಮತದಾನ ಮಾಡುವಂತೆ ಜಾಗೃತಿ ಮೂಡಿಸುವ ಚುನಾವಣೆ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳೇ ಅಂಚೆ ಮತದಾನ ತಿರಸ್ಕಾರವಾಗುವಂತೆ ಮತದಾನ ಮಾಡಿರುವುದು ಬೇಸರದ ಸಂಗತಿ, ಇಂತಹವರಿಂದ ಚುನಾವಣಾ ಆಯೋಗ ಕೆಲಸ ಮಾಡಿಸಿದರೇ ಮತದಾನಕ್ಕೆ ಗೌರವ ಬರುವುದಿಲ್ಲ, ಬುದ್ದಿವಂತರು, ವಿದ್ಯಾವಂತರು ದಡ್ಡರಂತೆ ವರ್ತಿಸುವುದು ಸರಿಯಲ್ಲ. – ಗೋವಿಂದರಾಜು, ಮತದಾರ

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.