ರಸ್ತೆಯಲ್ಲೇ ಹರಡಿದ ಪಿಪಿಇ ಕಿಟ್‌: ಜನರಲ್ಲಿ ಆತಂಕ


Team Udayavani, Oct 3, 2020, 12:40 PM IST

ರಸ್ತೆಯಲ್ಲೇ ಹರಡಿದ ಪಿಪಿಇ ಕಿಟ್‌: ಜನರಲ್ಲಿ ಆತಂಕ

ನೆಲಮಂಗಲ: ಇತ್ತೀಚೆಗೆ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಭೀತಿ ಒಂದೆಡೆಯಾದರೆ ನಗರದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದ್ದು ಜನರಲ್ಲಿ ಕೋವಿಡ್ ಜತೆಗೆ ಹೆಸರಿಲ್ಲದ ರೋಗಗಳಿಗೆ ತುತ್ತಾಗುವ ಆತಂಕ ಸಾರ್ವಜನಿಕರಲ್ಲಿ ಮನೆಮಾಡಿದೆ.

ಗುರುವಾರ ರಾತ್ರಿ ಕಾರಿನಲ್ಲಿ ಕಿಡಿಗೇಡಿಗಳು ದೊಡ್ಡಗಾತ್ರದ ಪ್ಲಾಸ್ಟಿಕ್‌ ಕವರ್‌ ತುಂಬಾ ಯಾವುದೋ ಆಸ್ಪತ್ರೆಯವರು ಉಪಯೋಗಿಸಿ ಬಿಸಾಡಿದ8-10 ಪಿಪಿಇ ಕಿಟ್‌, ಸೂಜಿ, ಸಿರಿಂಜ್‌, ರೋಗಿಗಳು ಅಥವಾ ವೈದ್ಯಕೀಯ ಸಿಬ್ಬಂದಿ ತಿಂದು ಬಿಸಾಡಿದ್ದ ಊಟದ ಪೊಟ್ಟಣ, ಮತ್ತಿತರೆ ಅಪಾಯಕಾರಿ ವಸ್ತುಗಳನ್ನು ನಗರದ ಹೃದಯ ಭಾಗದಪರಮಣ್ಣ ಲೇಔಟ್‌ಪಾರ್ಕ್‌ಮುಂದಿನ ರಸ್ತೆಯಲ್ಲಿ ಎಸೆದು ಪರಾರಿಯಾಗಿದ್ದಾರೆ.

ಹೆದರಿದರು: ನಾಯಿಗಳು ಪ್ಲಾಸ್ಟಿಕ್‌ ಕವರ್‌ ಎಳೆದಾಡಿದ ಪರಿಣಾಮ ರಸ್ತೆ ತುಂಬಾ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಹರಡಿತ್ತು. ಪರಿಣಾಮ ವಾಯು ವಿಹಾರಕ್ಕೆ ಬಂದವರು, ಅಕ್ಕಪಕ್ಕದ ಮನೆಯವರು ಹೆದರಿ ಓಡಿದರು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ನಗರದಲ್ಲಿ ಅವ್ಯವಸ್ಥೆ ಬಗ್ಗೆ ಭೀತಿ ಎದುರಾಗಿದೆ. ನಮ್ಮ ಮನೆಯಲ್ಲೂ ಚಿಕ್ಕ ಚಿಕ್ಕ ಮಕ್ಕಳು ಮತ್ತು ವಯೋವೃದ್ಧರಿದ್ದು ಅನಾರೋಗ್ಯದ ಭಯ ಹೆಚ್ಚಿದೆ. ಹೀಗಾಗಿ ಕೂಡಲೇ ಸಂಬಂಧಪಟ್ಟ ಅಧಿ ಕಾರಿಗಳು ಸೂಕ್ತ ಕ್ರಮ ಕೈಗೊಂಡು ಉದ್ಯಾನ ವನದ ಅಂದವನ್ನು ಹೆಚ್ಚಿಸಿ ಸಾರ್ವಜನಿಕರ ಉಪ ಯೋಗಕ್ಕೆ ನೀಡಬೇಕೆಂದು ನಾಗರೀಕರ ಪರವಾಗಿ ಸ್ಥಳೀಯ ನಿವಾಸಿ ಎಸ್‌.ಕುಮಾರ್‌ ಮನವಿ ಮಾಡಿದರು. ನಗರದ ಪ್ರಮುಖ ಬಡಾವಣೆ ಯಾದ ಪರ ಮಣ್ಣ ಲೇ ಔಟ್‌ನ20ನೇ ವಾರ್ಡ್‌ ನಲ್ಲಿರುವ ಸಾರ್ವಜನಿಕ ಉದ್ಯಾನವನದ ತುಂಬಾ ಅನಾಗರಿಕರು ಹಲವು ದಿನಗಳಿಂದ ರಾತ್ರಿ ಸಮಯದಲ್ಲಿ ಅನುಪಯುಕ್ತ ಮತ್ತು ಅಪಾಯಕಾರಿ ಕಸ ತಂದು ಸುರಿಯುತ್ತಿದ್ದಾರೆ. ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಸ ಕೊಳೆತು ನಾರುತ್ತಿರುವ ಜೊತೆಗೆ ಸೊಳ್ಳೆ, ನೊಣ, ರೋಗಾಣುಗಳ ಉಗಮ ಸ್ಥಾನವಾಗಿ ಮಾರ್ಪಟ್ಟು ಸುತ್ತಮುತ್ತಲಿನ ಮನೆಯವರಿಗೆ ರೋಗದ ಭೀತಿ ಎದುರಾಗಿದೆ ಎಂದು ಹಿರಿಯ ನಾಗರಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ವಿದ್ಯಾವಂತರೂ ಆಸ್ಪತ್ರೆಯಲ್ಲಿ ಸಂಗ್ರಹವಾಗುವ ಅಪಾಯಕಾರಿ ತ್ಯಾಜ್ಯ ಸೇರಿದಂತೆ ಅನು ಪಯುಕ್ತ ಕಸ ತಂದು ಎಲ್ಲೆಂದರಲ್ಲೇ ಎಸೆದು ಹೋಗುತ್ತಿರುವುದರಿಂದ ಇದು ಪಾರ್ಕ್‌ ಎನಿಸದೆ ತಿಪ್ಪೆಗುಂಡಿ ಅಥವಾ ತ್ಯಾಜ್ಯ ಸಂಗ್ರಹಣಾ ಘಟಕವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಪ್ರತಿಷ್ಠಿತ ಬಡಾವಣೆ: ಪರಮಣ್ಣ ಲೇಔಟ್‌ ವಾರ್ಡ್‌ನಲ್ಲಿ ಪ್ರತಿಷ್ಠಿತ ಬ್ಯಾಂಕ್‌, ದೊಡ್ಡ ದೊಡ್ಡ ವ್ಯಾಪಾರ ಕೇಂದ್ರ, ಹಾಸ್ಟೆಲ್‌, ಹಲವು ಆಸ್ಪತ್ರೆ, ನರ್ಸಿಂಗ್‌ಹೋಮ್‌, ಡಯೋಗ್ನೊàಸ್ಟಿಕ್‌ ಕೇಂದ್ರ ಗಳಿವೆ. ಅಲ್ಲದೇ, ಉನ್ನತ ಮಟ್ಟದ ಅಧಿಕಾರಿಗಳು ವಿವಿಧ ಸಂಸ್ಥೆಗಳ ಮುಖ್ಯಸ್ಥರು ನೆಲೆಸಿದ್ದರೂ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ಅವ್ಯವಸ್ಥೆ ಸರಿಪಡಿಸದಿರುವುದು ವಿಪರ್ಯಾಸ. ಕೂಡಲೇ ಸಂಬಂಧಪಟ್ಟಅಧಿಕಾರಿಗಳು ನಗರದ ಸ್ವಚ್ಛತೆ ಹಾಳುಮಾಡುವ ಅನಾಗರಿಕರಿಗೆ ತಕ್ಕ ಪಾಠ ಕಲಿಸಿ ನಗರದ ಸೌಂದರ್ಯದ ಜತೆಗೆ ನಾಗರಿಕರ ಆರೋಗ್ಯ ಸಂರಕ್ಷಣೆಗೆ ಮುಂದಾಗ ಬೇಕೆಂಬುದು “ಉದಯವಾಣಿ’ಯ ಆಶಯವಾಗಿದೆ.

ಟಾಪ್ ನ್ಯೂಸ್

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.