ಉಗ್ರಗಾಮಿಗಳ ಹುಟ್ಟಡಗಿಸಲು ಸನ್ನದ್ಧರಾಗಿ


Team Udayavani, Feb 25, 2019, 7:29 AM IST

ugraga.jpg

ದೇವನಹಳ್ಳಿ: ದೇಶದಲ್ಲಿ ತಾಂಡವವಾಡುತ್ತಿರುವ ಭಯೋತ್ಪಾದನೆ ಮತ್ತು ಉಗ್ರಗಾಮಿತ್ವವನ್ನು ಬುಡ ಸಮೇತ ಕಿತ್ತು ಹಾಕಬೇಕು. ಈ ನಿಟ್ಟಿನಲ್ಲಿ ಪ್ರತಿ ಯುವಕರು ಸೈನಿಕರಾಗಬೇಕೆಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಜಂಟಿ ನಿದೇಶಕ ಡಾ.ರಮೇಶ್‌ ಬಾಬು ಸಲಹೆ ನೀಡಿದರು.

ನಗರದ ವಿಜಯಪುರ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಸರ್ಕಾರಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ರಾಷ್ಟ್ರೀಯ ಭಾವೈಕ್ಯತೆ ಶಿಬಿರದ ಮುಕ್ತಾಯ ಸಮಾರಂಭವನ್ನು ಗಿಡಕ್ಕೆ ನೀರುಣಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.  

ಯುವಕ, ಯುವತಿಯರು ಸೈನ್ಯಕ್ಕೆ ಸೇರಬೇಕು. ಭಯೋತ್ಪಾದನೆ ನಿರ್ಮೂಲನೆ ಮಾಡುವಲ್ಲಿ ಯುವಕರ ಪಾತ್ರ ಹೆಚ್ಚಾಗಿದೆ. ಬೇರೆ ರಾಜ್ಯಗಳೊಂದಿಗೆ ಭಾಷೆ, ನೆಲ, ಜಲದ ಬಗ್ಗೆ ಜಗಳವಾಡಿದರೆ ಸಮಸ್ಯೆ ಬಗೆಹರಿಯುವುದಿಲ್ಲ. ರಾಷ್ಟ್ರೀಯ ಭಾವೈಕ್ಯತೆಯಿಂದ ಹೋದಾಗ ಸಮಸ್ಯೆ ಇತ್ಯರ್ಥವಾಗುತ್ತದೆ. ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು.  

ಅಭಿವೃದ್ಧಿಗೆ ಭಾವೈಕ್ಯತೆ ಮುಖ್ಯ: ರಾಷ್ಟ್ರೀಯ ಮಟ್ಟದಲ್ಲಿ ಭಾವೈಕ್ಯತಾ ಶಿಬಿರ‌ವನ್ನು ದೇವನಹಳ್ಳಿಯಲ್ಲಿ ಮಾಡುತ್ತಿರುವುದು ಉತ್ತಮ ಕಾರ್ಯವಾಗಿದೆ. ದೇಶದ ಅಭಿವೃದ್ಧಿಗೆ ಭಾವೈಕ್ಯತೆ ಮುಖ್ಯ. ಸ್ವಾತಂತ್ರಕ್ಕಾಗಿ ಸಾಕಷ್ಟು ಮಹನೀಯರು ಹೋರಾಟ ಮಾಡಿದ್ದಾರೆ. ಹಲವಾರು ಜನರ ತ್ಯಾಗ ಹಾಗೂ ಶಾಂತಿ ಮಂತ್ರದಿಂದ ಸ್ವಾತಂತ್ರ ಪಡೆಯಲು ಸಾಧ್ಯವಾಗಿದೆ. ಪ್ರತಿ ವಿದ್ಯಾರ್ಥಿಯಲ್ಲಿ ಇಂತಹ ಶಿಬಿರಗಳು ಜೀವನದ ದಿಕ್ಕನ್ನು ಬದಲಾಯಿಸುತ್ತವೆ. ರಾಷ್ಟ್ರಧ್ವಜದ ಮಹತ್ವ ಹಾಗೂ ಶಿಸ್ತು, ಸಂಯಮದ ವ್ಯಕ್ತಿತ್ವವನ್ನು ರಾಷ್ಟ್ರೀಯ ಭಾವೈಕ್ಯತೆ ಬೆಳೆಸುತ್ತದೆ. ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರೌಢಶಾಲಾ ಹಂತದಲ್ಲೂ ವಿಸ್ತರಿಸಲಾಗಿದೆ ಎಂದು ಹೇಳಿದರು.  

ಹೆಚ್ಚಿನ ಜ್ಞಾನಾರ್ಜನೆ ಮಾಡಿಕೊಳ್ಳಿ: ರಾಜ್ಯ ಎನ್‌ಎಸ್‌ಎಸ್‌ ಸಂಯೋಜಕ ಡಾ.ಆರ್‌.ಶ್ರೀನಿವಾಸ್‌ ಮಾತನಾಡಿ, ಯುವ ಶಕ್ತಿ ಮನಸ್ಸು ಮಾಡಿದರೆ ಏನನ್ನಾದರೂ ಬದಲಾವಣೆ ತರಲು ಸಾಧ್ಯವಾಗುತ್ತದೆ. ಎನ್‌ಎಸ್‌ಎಸ್‌ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಕೇವಲ ಅಂಕ ಮತ್ತು ಪ್ರಮಾಣ ಪತ್ರಗಳಿಗೆ ಕಾಟಾಚಾರಕ್ಕೆ ಭಾಗವಹಿಸಿದರೆ ಸಾಲದು. ರಾಷ್ಟ್ರೀಯ ಭಾವೈಕ್ಯತೆ ಬಗ್ಗೆ ಎಲ್ಲೆಡೆ ಅರಿವು ಮೂಡಿಸುವ ಕಾರ್ಯವಾಗಬೇಕು. ಹೆಚ್ಚಿನ ಜ್ಞಾನಾರ್ಜನೆ ಮಾಡಿಕೊಳ್ಳಬೇಕು ಎಂದರು.  

ಪರಿಸರ ಉಳಿದರೆ ಮಾತ್ರ ಉಳಿಗಾಲ: ಬಾಲ ಗಂಗಾಧರನಾಥ್‌ ಸ್ವಾಮೀಜಿ ನೇತೃತ್ವದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಒಂದು ಲಕ್ಷ ಸಸಿಗಳನ್ನು ನೆಡಲಾಗಿತ್ತು. ಪರಿಸರದ ಮಹತ್ವ ಪ್ರತಿಯೊಬ್ಬರು ತಿಳಿಯಬೇಕು. ಪರಿಸರ ಉಳಿದರೆ ಮಾತ್ರ ನಾವೂ ಉಳಿಯಲು ಸಾಧ್ಯ. ಫ್ಲಾಸ್ಟಿಕ್‌ನ್ನು ಬಳಸುವ ಮೊದಲು ವಿ ಧ್ಯಾರ್ಥಿಗಳು ಚಿಂತಿಸಬೇಕು. ಇದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿಯಬೇಕು. ಫ್ಲಾಸ್ಟಿಕ್‌ ಭೂಮಿಯ ಒಳ ಭಾಗಕ್ಕೆ ಹೋದರೆ ಅಂತರ್ಜಲ ಕುಸಿತ, ಪ್ರಾಣಿಗಳು ತಿಂದರೆ ಆರೋಗ್ಯ ಕೆಡುತ್ತದೆ. ಫ್ಲಾಸ್ಟಿಕ್‌ ಬಳಕೆಯಿಂದ ಅಂದ, ಚಂದವೂ ಕೆಡುತ್ತದೆ ಎಂದರು.  

ಸೇವಾ ಮನೋಭಾವ ಅಗತ್ಯ: ಇಡೀ ದೇಶದಲ್ಲಿಯೇ ರಾಷ್ಟ್ರೀಯ ಸೇವಾ ಭವನ ಬೆಂಗಳೂರಿನಲ್ಲಿ ಮಾತ್ರ ಇದೆ. ವಿದ್ಯಾರ್ಥಿಗಳಲ್ಲಿರುವ ಉತ್ತಮ ಪ್ರತಿಭೆ ಹೊರಹಾಕಲು ಯೋಜನೆ ಸೂಕ್ತ ವೇದಿಕೆಯಾಗಿದೆ. ಸೇವಾ ಮನೋಭಾವನೆಯನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು.  

ಈ ವೇಳೆ ರಾಜ್ಯ ಎನ್‌ಎಸ್‌ಎಸ್‌ ಯೋಜನಾಧಿಕಾರಿ ಪೂರ್ಣಿಮಾ ಜೋಗಿ, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೆ.ಎಸ್‌.ಶಿವಶಂಕರಪ್ಪ, ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ.ರವಿಚಂದ್ರ, ಎನ್‌ಎಸ್‌ಎಸ್‌ ಸಂಯೋಜಕ ಸಜ್ಜಾದ್‌ ಪಾಷ್‌, ಉಪನ್ಯಾಸಕರಾದ ಪ್ರೊ.ಕೆಂಪೆೇಗೌಡ, ಸತ್ಯನಾರಾಯಣ ಗೌಡ, ಅರ್ಚನಾ, ಕೇಶವ ಮೂರ್ತಿ, ಸಂಘಟನಾ ಅಧಿಕಾರಿ ಗಿರೀಶ್‌, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಬೆಟ್ಟಕೋಟೆ ಹರೀಶ್‌, ಪಿಳ್ಳರಾಜು, ಮುಖಂಡ ಅಜಯ್‌, ಶಿವಕುಮಾರ್‌, ಸತೀಶ್‌ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.