ಸಮಾನತೆ ಸಾರುವ ಮಕ್ಕಳ ಚಿತ್ರ : ಸಾಹಿತಿ


Team Udayavani, Dec 4, 2020, 10:17 AM IST

ಸಮಾನತೆ ಸಾರುವ ಮಕ್ಕಳ ಚಿತ್ರ : ಸಾಹಿತಿ

ನೆಲಮಂಗಲ: ಶಿಕ್ಷಣದ ಶ್ರೇಷ್ಠತೆಯ ಜತೆ ಸರ್ಕಾರಿ ಶಾಲೆಗಳ ಉಳಿಸುವ ಮೂಲಕ ಸಮಾನತೆಯ ಸಂದೇಶ ಸಾರುವ ಸಾಧನೆಯ ಶಿಖರ ಚಿತ್ರಕ್ಕೆ ಸಹಕಾರ ನೀಡಿ ಎಂದು ಪದ್ಮಶ್ರೀ ಪುರಸ್ಕೃತ ಸಾಹಿತಿ ಡಾ.ದೊಡ್ಡರಂಗೇಗೌಡ ಅಭಿ ಪ್ರಾಯಪಟ್ಟರು.

ತಾಲೂಕಿನ ಬಸವನಹಳ್ಳಿಯ ಸ್ಪಾರ್ಕಲ್‌ ಡ್ಯಾನ್ಸ್‌ ಸ್ಟುಡಿಯೋದಲ್ಲಿ ಸಾಧನೆ ಶಿಖರ ಚಲನಚಿತ್ರ ತಂಡ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಎನ್‌.ಈರಣ್ಣಮಧುಗಿರಿಯವರ ನಿರ್ದೇಶನದಲ್ಲಿ ಮೂಡಿಬಂದಿರುವ ಸಾಧನೆ ಶಿಖರಸಿನಿಮಾ ಗ್ರಾಮೀಣ ಸೊಗಡಿನ ಚಿತ್ರಣದ ಮೂಲಕ ಬಾಲಕಾರ್ಮಿಕ ಪದ್ಧತಿ,ಜೀತಪದ್ಧತಿ ದೂರಮಾಡುವ ಹಾಗೂಮಹಿಳಾ ಶಿಕ್ಷಣದ ಮಹತ್ವ ಸಾರುವವಿಶೇಷ ಸನ್ನಿವೇಷ ಚಿತ್ರದಲ್ಲಿ ತರಲಾಗಿದೆ. ಜತೆಯಲ್ಲಿ 7 ಹಾಡು ಹಾಗೂಕಾಮಿಡಿ ಸನ್ನಿವೇಶ ಕಾಣಬಹುದು ಎಂದರು.

ಜಿಲ್ಲೆಯಲ್ಲಿ ಚಿತ್ರೀಕರಣ: ಬೆಂಗ ಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡ ಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಸುತ್ತಮುತ್ತಲ ಪ್ರದೇಶ ಹಾಗೂ ನೆಲಮಂಗಲ ಪ್ರದೇಶಗಳಲ್ಲಿ ಚಿತ್ರೀಕ ರಣ ಮಾಡಲಾಗಿದ್ದು ಡಿ.12ರಂದುಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಎಂದು ನಿರ್ದೇಶಕ ಈರಣ್ಣ ತಿಳಿಸಿದರು.

ಹಿರಿಯ ಕಲಾವಿದರು ನಟನೆ: ವೈಜನಾಥ್‌ ಬಿರಾದರ್‌, ಶಂಕನಾದ ಆಂಜಿ® ‌ಪ್ಪ,ಡಾ.ದೊಡ್ಡರಂಗೇಗೌಡ,ಅಪೂರ್ವ ಸೇರಿದಂತೆ ಅನೇಕ ಹಿರಿಯ ಕಲಾವಿದರು ನಟಿಸಿದ್ದು ಬೇಬಿ ಬೈರವಿ,ಪ್ರೀತಮ್‌ ಬಾಲನಟರಾಗಿ ಅಭಿನಯಿಸಿದರೆ ಇಂದೂವಿಶ್ವನಾಥ್‌ಸಂಗೀತನಿರ್ದೇಶಕಿಯಾಗಿದ್ದು ಹತ್ತಾರು ಹೊಸಕ ಲಾವಿದರು ನಟನೆ ಮಾಡಿದ್ಧಾರೆಂದರು.

ಈ ಸಂದರ್ಭದಲ್ಲಿಕಲಾವಿದರಾದ ಶಂಕನಾದಆಂಜಿನಪ್ಪ, ವೈಜನಾಥ್‌ ಬಿರಾದರ್‌, ಮುನೇಗೌಡ, ಪ್ರೀತಮ್‌, ಬಟವಾಡಿ ರಂಗನಾಥ್‌, ಪ್ರತಿಕಾ ವಿತರಕ ಹುಲ್ಲಕುಂಟೆ ಮಹೇಶ್‌ ಮತ್ತಿತರರಿದ್ದರು.

ಕನ್ನಡಪರ ಸಂಘಟನೆಗಳ ಮುಖಂಡರ ಸಭೆ :

 ದೊಡ್ಡಬಳ್ಳಾಪುರ: ಪ್ರತಿಭಟನೆ ಮಾಡುವ ಹಕ್ಕು ನಿಮಗಿದೆ. ಹಾಗೆಂದು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಟ್ಟರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್ಪಿ ಟಿ.ರಂಗಪ್ಪ ಹೇಳಿದರು.

ಮರಾಠ ಅಭಿವೃದ್ಧಿ ನಿಗಮ ರಚನೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಡಿ.5ರ ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ನಗರದ ಖಾಸಗಿ ಭವನದಲ್ಲಿ ಪೊಲೀಸ್‌ ಇಲಾಖೆಯಿಂದ ನಡೆದ ತಾಲೂಕಿನಕನ್ನಡ ಪರ, ರೈತ ಮತ್ತು ದಲಿತ ಸಂಘಟನೆಗಳ ಮುಖಂಡರಸಭೆಯಲ್ಲಿ ಮಾತನಾಡಿದರು. ಶಾಂತಿಯುತ ಬಂದ್‌ಗೆ ಇಲಾಖೆ ಸಹಕಾರ ಇದೆ. ಮಾನವೀಯ ನೆಲೆಯಲ್ಲಿ ನಿಮ್ಮ ಪ್ರತಿಭಟನೆ ಇರಲಿ ಎಂದು ಸಲಹೆ ನೀಡಿದ ಅವರು, ಪ್ರತಿಭಟನಾ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಬಾರದು ಎಂದು ಎಚ್ಚರಿಸಿದರು.ಈ ವೇಳೆ ಕನ್ನಡಪರ ಹೋರಾಟಗಾರರಾದ ತ.ನ.ಪ್ರಭುದೇವ್‌, ಸಂಜೀವನಾಯಕ್‌ ಮತ್ತಿತರರಿದ್ದರು. ಸರ್ಕಲ್‌ ಇನ್ಸ್‌ಪೆಕ್ಟರ್‌ ನವೀನ್‌ ಕುಮಾರ್‌, ಸಬ್‌ ಇನ್ಸ್‌ಪೆಕ್ಟರ್‌ಗಳಾದ ಸೋಮಶೇಖರ್‌, ಮಂಜುನಾಥ್‌, ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.