ರೈತರ ಬಗ್ಗೆ ಕಾಳಜಿ ಇಲ್ಲದ ಪ್ರಧಾನಿ


Team Udayavani, Feb 6, 2018, 3:16 PM IST

bng-g-1.jpg

ದೇವನಹಳ್ಳಿ: ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತನಾಡದೆ ಕೇವಲ ರಾಜಕೀಯ ಪಕ್ಷಗಳನ್ನು ಟೀಕಿಸುವುದೇ ಭಾಷಣವಾಗಿದೆ. ಉತ್ತರ ಕರ್ನಾಟಕದಲ್ಲಿ ನಿರಂತರವಾಗಿ ಮಹದಾಯಿ ಹೋರಾಟ ನಡೆಯುತ್ತಿದ್ದರೂ ಅದರ ವಿಚಾರ ಎತ್ತದಿರುವುದು ಪ್ರಧಾನಿಗೆ ರೈತರ ಮೇಲೆ ಎಷ್ಟು ಕಾಳಜಿ ಇದೆ ಎಂಬುವುದು ಸ್ಪಷ್ಟವಾಗು ತ್ತಿದೆ ಎಂದು ರಾಜ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಛಲವಾದಿ ನಾರಾಯಣ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ವಿಜಯಪುರ ಕ್ರಾಸ್‌ನಲ್ಲಿರುವ ಅವರ ಕಚೇರಿಯಲ್ಲಿ ಮೋದಿ ಬೆಂಗಳೂರಿಗೆ ಬಂದು ಕೇವಲ ರಾಜಕೀಯ ಮಾತನಾಡಿರುವುದಕ್ಕೆ ಸುದ್ದಿಗೋಷ್ಠಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. 

ಮೋಸ ಮಾಡಿದ ಪ್ರಧಾನಿ: 900 ದಿನಗಳಿ ಗಿಂತಲೂ ಮಹದಾಯಿ ಹೋರಾಟ ಉತ್ತರ ಕರ್ನಾಟಕದಲ್ಲಿ ನಡೆಯುತ್ತಿದೆ. ರೈತರು, ಕನ್ನಡ ಪರ ಸಂಘಟನೆಗಳು ಪ್ರಧಾನಿ ನರೇಂದ್ರ ಮೋದಿ ಇದರ ಬಗ್ಗೆ ಮಾತನಾಡುತ್ತಾರೆ ಎಂಬುವ ನಿರೀಕ್ಷೆಯಲ್ಲಿದ್ದ ಜನರಿಗೆ ಮೋಸ ಮಾಡಿದ್ದಾರೆ. ಕಳೆದ ವಾರದಷ್ಟೆ ಅವರ ಗಮನ ಸೆಳೆಯಲು ಕರ್ನಾಟಕ ಬಂದ್‌ನ್ನು ಕನ್ನಡ ಪರ ಸಂಘಟನೆಗಳು ಮಾಡಿದ್ದವು. ಅದಕ್ಕೆ
ರಾಜಕೀಯ ಅರ್ಥ ಕಲ್ಪಿಸುತ್ತಾರೆ. ಭಾನುವಾರ ಬಂದ್‌ ಮಾಡಿ ಗಮನ ಸೆಳೆಯುವ ಪ್ರಯತ್ನವಿತ್ತು. ಆದರೆ, ಹೈಕೋರ್ಟ್‌
ಆದೇಶದಿಂದ ಕೈಬಿಡಲಾಯಿತು ಎಂದರು.

ಸ್ಥಳೀಯ ಮುಖಂಡರಂತೆ ಮಾತನಾಡುತ್ತಾರೆ: ಪ್ರಧಾನಿ ನರೇಂದ್ರ ಮೋದಿ ಮಾತನಾಡುವಾಗ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿದೆ. ಶೇ.10 ಕಮೀಷನ್‌ ಸರ್ಕಾರವಾಗಿದೆ. ಗ್ರೀನ್‌ ಸಿಟಿ ಬೆಂಗಳೂರನ್ನು ಗಾರ್ಬೇಜ್‌ ಸಿಟಿ ಎಂದು ಹೇಳಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಒಬ್ಬ ಪಕ್ಷದ ವಕ್ತಾರನಾಗಿ ಮಾತ್ರ ಬಂದಿರುತ್ತಾರೆ. ರಾಜ್ಯದ ಅಭಿವೃದ್ಧಿ ಬಗ್ಗೆ ಇವರಿಗೇನು ಗೊತ್ತು.
ಸ್ಥಳೀಯ ಮುಖಂಡರು ಸೇರಿ ಸಣ್ಣತನದ ಮಾತು ಆಡುತ್ತಾರೆ. ಅದನ್ನೇ ಮೈಗೂಡಿಸಿ ಕೊಂಡಿದ್ದಾರೆ. ಮೂರು ಲಕ್ಷ ಸಾವಿರ ಕೋಟಿ ರೂ. ಅನುದಾನ ನೀಡಿದ್ದೇನೆಂದು ಹೇಳುವವರು ಇಷ್ಟು ದಿನ ಏಕೆ ಹೇಳಲಿಲ್ಲ. ಈ ರೀತಿ ಸುಳ್ಳುಗಳನ್ನು ಹೇಳಿ ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ.

ನಿರುದ್ಯೋಗಿ ಯುವಕರಿಗೆ ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇವೆಂದು ಹೇಳಿದ್ದರು. ಹೊರ ದೇಶದಲ್ಲಿರುವ ಕಪ್ಪುಹಣ ತಂದು ಪ್ರತಿ ಬ್ಯಾಂಕ್‌ ಖಾತೆಗೆ 15 ಲಕ್ಷ ರೂ.ಗಳನ್ನು ಹಾಕುತ್ತೇವೆಂದು ಹೇಳಿದ್ದರು. ಆದರೆ ಅಮಿತ್‌ ಶಾ ಇದೊಂದು ಚುನಾವಣಾ ಜುಮ್‌ಲಾ (ಗಿಮಿಕ್ಸ್‌) ಆಗಿದೆ ಎಂದು ಹೇಳುತ್ತಾರೆ. ಈಗ ಮಂಡಿಸಿರುವ ಬಜೆಟ್‌ ನಲ್ಲಿರುವ ಕಾರ್ಯಕ್ರಮಗಳು ನರೇಂದ್ರ ಮೋದಿ, ಅಮಿತ್‌ ಶಾ ಜುಮ್‌ಲಾ ಅಲ್ಲವೇ ಎಂದು ನಾರಾಯಣಸ್ವಾಮಿ ಪ್ರಶ್ನಿಸಿದರು. ಸುಳ್ಳು ಹೇಳಿದ ಪ್ರಧಾನಿ: ಆರೋಗ್ಯ ವಿಮಾ ಯೋಜನೆ ತಂದಿದ್ದು, 50 ಕೋಟಿ ಜನರಿಗೆ ಎರಡು ಸಾವಿರ ಲಕ್ಷ ಕೋಟಿ ರೂ. ಮೀಸಲಿಟ್ಟಿದ್ದೇವೆಂದು ಹೇಳುವವರು ಈ ಯೋಜನೆಯಲ್ಲಿ 50 ಕೋಟಿ ಕುಟುಂಬಕ್ಕೆ 5 ಲಕ್ಷ ಲೆಕ್ಕ ಹಾಕಿದರೆ ಲಕ್ಷ ಲಕ್ಷ ಕೋಟಿ ರೂ. ಅನುದಾನ ಮೀಸಲಿಡಬೇಕು. ಕೇವಲ ಒಂದು ಕುಟುಂಬಕ್ಕೆ 40 ರೂ. ಮಾತ್ರ ಆರೋಗ್ಯ ವಿಮೆಗೆ ಬರುತ್ತದೆ. 5 ಲಕ್ಷ ರೂ. ಹೇಗೆ ಕೊಡಲು ಸಾಧ್ಯ. ಯುವಕರಿಗೆ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿ ನಿರುದ್ಯೋಗಿಗಳಾಗಿ ಮಾಡಿದ್ದಾರೆ. ಟೀವಿ ಸಂದರ್ಶನದಲ್ಲಿ ಯುವಕರು ಪಕೋಡ ಮಾರಿ ಜೀವನ ಸಾಗಿಸಬಹುದು ಎಂಬ ಹೇಳಿಕೆ ನೀಡುತ್ತಾರೆ. ಪ್ರಧಾನ ಮಂತ್ರಿ ಚಹಾ ಮಾರಿ ಜೀವನ ಸಾಗಿಸಬಹುದಿತ್ತು. ಏಕೆ ಪ್ರಧಾನಿಯಾಗಿದ್ದೀರಾ ಎಂದು ಪ್ರಶ್ನಿಸಿದರು. ಜುಮ್‌ಲಾ (ಗಿಮಿಕ್ಸ್‌) ಮಾಡಲು ಹೊರಟಿದ್ದಾರೆ: ಮತ್ತೆ ಅಧಿಕಾರಕ್ಕೆ ಬರುವ ಉದ್ದೇಶದಿಂದ ಇಂಥ ಜುಮ್‌ಲಾ (ಗಿಮಿಕ್ಸ್‌) ಮಾಡಲು ಹೊರಟಿದ್ದಾರೆ. ಈಗಾಗಲೇ
ನೋಟು ಬ್ಯಾನ್‌ ಮಾಡಿ 150ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಅವರ ಕುಟುಂಬಕ್ಕೆ ಸಂತ್ವಾನ, ಕೆಲಸ, ಪರಿಹಾರ ನೀಡುವ ಕೆಲಸವಾಗಿಲ್ಲ. ಯಾರಾದರೂ ಹಿಂದೂಗಳು ಸತ್ತರೆ ಆ ಹೆಣಕ್ಕೆ ಬಿಜೆಪಿ ಕಾರ್ಯಕರ್ತ ಎಂದು ಬಿಂಬಿಸುತ್ತಾರೆ. ಹೆಣದ ಮುಂದೆ ರಾಜಕೀಯ ಮಾಡುವುದೇ ಬಿಜೆಪಿಯ ಜಾಯಮಾನವಾಗಿದೆ ಎಂದು ಲೇವಡಿ ಮಾಡಿದರು.

ಇದೇ ಸಂದರ್ಭದಲ್ಲಿ ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಭೂವನಹಳ್ಳಿ ಮುನಿರಾಜು, ಕೆಪಿಸಿಸಿ ಸದಸ್ಯ ರಾಮಚಂದ್ರಪ್ಪ, ವಿಜಯಪುರ ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ಡೇವಿಡ್‌ ನಾರಾಯಣಸ್ವಾಮಿ, ದೇವನಹಳ್ಳಿ ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ಪುರುಶೋತ್ತಮ್‌ ಕುಮಾರ್‌ ಮತ್ತಿತರರಿದ್ದರು. 

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.