ಬೆಲೆ ಏರಿಕೆ ನಡುವೆ ಆಯುಧಪೂಜೆ ಸಂಭ್ರಮ

ಮಗ್ಗಗಳ ಯಂತ್ರ, ವಾಹನಗಳು ಶುದ್ಧ ಮಾಡಿ ಪೂಜೆಗೆ ಅಣಿ „ ಗಗನಕ್ಕೇರಿದ ಹೂವು, ಹಣ್ಣುಗಳ ಬೆಲೆ

Team Udayavani, Oct 14, 2021, 11:46 AM IST

ಬೆಲೆ ಏರಿಕೆ ನಡುವೆ ಆಯುಧಪೂಜೆ ಸಂಭ್ರಮ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಆಯುಧಪೂಜೆ- ವಿಜಯದಶಮಿ ಹಬ್ಬಕ್ಕೆ ಸಿದ್ಧತೆಗಳು ನಡೆದಿದೆ. ಬೂದುಕುಂಬಳ ಹೊರತಾಗಿ ಹೂ ಹಣ್ಣು, ಬಾಳೆಕಂದು ಸೇರಿದಂತೆ ಮಿಕ್ಕೆಲ್ಲಾ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗಿದ್ದು, ಹಬ್ಬಕ್ಕೆ ಸ್ವಾಗತ ನಡೆದಿದೆ. ನಗರದ ಮಾರುಕಟ್ಟೆ ಪ್ರದೇಶದಲ್ಲಿ ಅಂಗಡಿಗಳು ಹಬ್ಬಕ್ಕೆಂದೇ ತೆರೆದಿವೆ.

ಬೂದು ಕುಂಬಳಕಾಯಿ ಕೆ.ಜಿ.ಗೆ 10ರಿಂದ 15 ರೂ. ಇದೆ. ಆದರೆ, ಹೂವಿನ ಬೆಲೆಗಳು ಗಗನಕ್ಕೇರಿವೆ. ಕಾಕಡ, ಮಳ್ಳೆ ಹೂವಿನ ಬೆಲೆ ಕೆ.ಜಿ.ಗೆ 400ರಿಂದ 500 ರೂ.ಗಳ ವರೆಗಿದ್ದರೆ, ಕನಕಾಂಬರ 1,200 ರೂ. ಸೆವಂತಿಗೆ, ಬಟನ್ಸ್‌, ಗುಲಾಬಿ ಮೊದಲಾದ ಹೂವಿನ ಬೆಲೆಗಳು ಕೆ.ಜಿ.ಗೆ 150 ರೂ. ದಾಟಿವೆ. ಬಾಳೆ ಹಣ್ಣು ಕೆ.ಜಿ.ಗೆ 20ರಿಂದ 60 ರೂ. ಸೇರಿದಂತೆ ಇತರ ಹಣ್ಣುಗಳ ಬೆಲೆಯೂ ಕೆ.ಜಿ.ಗೆ 20ರಿಂದ 30 ರೂ. ಹೆಚ್ಚಾಗಿವೆ. ಬಾಳೆಕಂದುಗಳ ಬೆಲೆ ಸಹ ಹೆಚ್ಚಾಗಿದ್ದು, ಆಯುಧ ಪೂಜೆಗಾಗಿ ಮಗ್ಗಗಳ ಯಂತ್ರಗಳು, ವಾಹನಗಳು ಮೊದಲಾದವುಗಳನ್ನು ಶುದ್ಧ ಮಾಡಿ ಪೂಜೆಗೆ ಅಣಿ ಮಾಡಿಕೊಳ್ಳುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು.

ಇದನ್ನೂ ಓದಿ:- ಜಪಾನ್ ಪ್ರಧಾನಿ ಶಿಷ್ಯವೇತನಕ್ಕೆ ಮುದ್ದೇಬಿಹಾಳದ ಗೌರಿ ಬಗಲಿ ಆಯ್ಕೆ

 ಸರ್ಕಾರಿ ಕಚೇರಿಗಳಲ್ಲಿ ಆಯುಧ ಪೂಜೆ: ತಾಲೂಕು ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ಸಿಡಿಪಿಒ ಕಚೇರಿ ಮೊದಲಾಗಿ ಸರ್ಕಾರಿ ಕಚೇರಿಗಳಲ್ಲಿ ಬುಧವಾರವೇ ಆಯುಧ ಪೂಜಾ ಕಾರ್ಯಕ್ರಮಗಳು ನಡೆದು ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿತ್ತು. ಸರ್ಕಾರ ಆಯುಧಪೂಜೆ ಮಾಡಲೆಂದೇ ರಜೆ ನಿಗದಿ ಮಾಡಿದೆ. ಆದರೆ, ಬಹಳಷ್ಟು ಸರ್ಕಾರಿ ಕಚೇರಿಗಳಲ್ಲಿ ಬುಧವಾರವೇ ನಡೆದಿದೆ. ಇದರಿಂದ ಸಾರ್ವಜನಿಕರ ಯಾವುದೇ ಕೆಲಸಗಳಿದ್ದರೂ ಅದು ಆನಂತರವಷ್ಟೇ.

ಕೆಲಸ ವಿಳಂಬ: ಕಚೇರಿಯಲ್ಲಿ ಸರಳವಾಗಿಯಾದರೂ ಸರಿ ರಜಾ ದಿನವೇ ಬಂದು ಮಾಡಲಿ. ಇಲ್ಲವೇ ಕಚೇರಿ ಅವಧಿ ಮುಗಿದ ನಂತರ ರಾತ್ರಿ 8 ಗಂಟೆಯವರೆಗಾ ದರೂ ಮಾಡಿಕೊಳ್ಳಲಿ. ಉಳಿದಂತೆ ಮನೆಗಳಲ್ಲಿ ಆಚರಿಸಿಕೊಳ್ಳಲಿ. ಈಗಾಗಲೇ ಎರಡನೇ ಹಾಗೂ ನಾಲ್ಕನೇ ಶ ನಿವಾರಗಳಂದು ರಜೆ ಇದ್ದು, ಕೆಲಸಗಳು ಸಾಗುತ್ತಿಲ್ಲ.

ಸಾರ್ವಜನಿಕರ ಕೆಲಸದ ಸಮಯದಲ್ಲಿ ಪೂಜೆಗಾಗಿ ಸಮಯ ಕಳೆಯುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸುತ್ತಾರೆ ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ರಾಮಕೃಷ್ಣ ತಾಜಾ ಹೂವುಗಳಿಗೆ ಬೆಲೆ ಅಧಿಕವಾದರೂ ಹೆಚ್ಚಿದ ಬೇಡಿಕೆ ಕಳೆದ ಒಂದು ವಾರದಿಂದ ತಾಲೂಕಿನಲ್ಲಿ ಮಳೆ ಬೀಳುತ್ತಿದ್ದು, ಹೂವುಗಳ ಮೇಲೆ ತೇವಾಂಶ ಹೆಚ್ಚಾಗಿ ಸಹಜವಾಗಿ ಬೆಲೆಗಳು ಹೆಚ್ಚಾಗಿವೆ. ಮಳೆಯಲ್ಲಿ ತೊಯ್ದಿರುವ ಹೂಗಳ ಬೆಲೆ ಕಡಿಮೆಯಿದ್ದರೆ, ತಾಜಾ ಹೂವುಗಳ ಬೆಲೆಗಳು ಹೆಚ್ಚಾಗಿವೆ. ಬೆಲೆ ಏರಿಕೆ ನೋಡಿದರೆ ಹಬ್ಬ ಮಾಡಲು ಉತ್ಸಾಹವೇ ಇಲ್ಲದಿದ್ದರೂ, ಹಿಂದಿನಿಂದಲೂ ಆಚರಿಸುತ್ತಿರುವ ಹಬ್ಬಗಳನ್ನು ಆಚರಿಸಲೇಬೇಕಲ್ಲ ಎನ್ನುತ್ತಾರೆ ಬಹುಪಾಲು ಸಾರ್ವಜನಿಕರು.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.