ಸ್ಥಳೀಯರ ಸಹಕಾರದಿಂದ ಕೆರೆಗಳ ರಕ್ಷಣೆ


Team Udayavani, Oct 9, 2019, 3:00 AM IST

staliyara

ದೇವನಹಳ್ಳಿ: ಸ್ಥಳೀಯರ ಸಹಕಾರದಿಂದ ಅಳಿವಿನಂಚಿನಲ್ಲಿರುವ ಕೆರೆಗಳ ರಕ್ಷಣೆ ಮಾಡಲು ಕೆರೆ ಹೂಳೆತ್ತುವ ಕಾರ್ಯ ಮಾಡಲಾಗಿದೆ ಎಂದು ಕೃಷಿ ಮಾರಾಟ ನಿರ್ದೇಶಕ ಸಿಎಸ್‌ ಕರೀಗೌಡ ತಿಳಿಸಿದರು.

ತಾಲೂಕಿನ ಕೊಯಿರಾ ಗ್ರಾಮದ ಕೆರೆಗೆ ಮಳೆ ನೀರು ಹರಿದ ಪರಿಣಾಮ ಗ್ರಾಮಸ್ಥರ ವತಿಯಿಂದ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, ನಾನು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಕೆರೆಗಳ ಹೂಳೆತ್ತಿದರೆ ಜಲ ಸಂರಕ್ಷಣೆಯಾಗುತ್ತದೆ ಎಂಬ ದೃಷ್ಟಿಯಿಂದ ಸಾರ್ವಜನಿಕರ ಸಹಕಾರ ಪಡೆದು ಜಿಲ್ಲೆಯಲ್ಲಿ 31 ಕೆರೆ ಗಳನ್ನು ಸಾರ್ವಜನಿಕರಿಂದ ಅಭಿವೃದ್ಧಿ ಪಡಿಸಲಾಯಿತು ಎಂದರು.

ದೇವನಹಳ್ಳಿ ತಾಲೂಕಿನಲ್ಲಿ 12 ಕೆರೆಗಳನ್ನು ಹೂಳೆತ್ತಲಾಗಿದ್ದು, ಮುಂದಿನ ಬೇಸಿಗೆ ವೇಳೆಗೆ ಕೊಯಿರಾ ಗ್ರಾಮದ 19 ಎಕರೆಯ ವಿಸ್ತಿರ್ಣದ ಕೆರೆಯನ್ನು ಹೂಳೆತ್ತುವ ಕಾರ್ಯ ಮಾಡಲಾಗುವುದು. ಈಗಾಗಲೇ ರೋಟರಿ ಸಂಸ್ಥೆ 50 ಲಕ್ಷ ರೂ. ನೀಡಿದ್ದು, ಶೇ.40 ರಷ್ಟು ಕೆಲಸ ಪೂರ್ಣಗೊಂಡಿದೆ. ಮಳೆ ನೀರು ಕೊಯ್ಲು ಅಳವಡಿಸಿಕೊಳ್ಳುವಂತೆ ನೋಟೀಸ್‌ ನೀಡಲಾಗಿತ್ತು. ದೊಡ್ಡಬಳ್ಳಾಪುರದ ಕಲ್ಯಾಣ ಮಂಟಪಗಳು, ಸೇರಿದಂತೆ ಹಲವು ಕಡೆಗಳಲ್ಲಿ ಮಳೆ ಕೊಯ್ಲು ಪದ್ಧತಿಯನ್ನು ಅಳವಡಿಸಲಾಗಿದೆ ಎಂದರು.

ಮನುಷ್ಯ ಸೇರಿದಂತೆ ಪ್ರತಿ ಜೀವಿಗಳಿಗೂ ನೀರು ಬೇಕು. ಬತ್ತಿ ಹೋಗಿರುವ ಕೆರೆಗಳನ್ನು ಪುನಶ್ಚೇತನ ಮಾಡಬೇಕಾದ ಅನಿವಾರ್ಯತೆ ಇದ್ದು, ಕೆರೆಯ ಅಭಿವೃದ್ಧಿಗಾಗಿ ಎಲ್ಲರ ಸಹಕಾರ ಅತ್ಯವಶ್ಯವಿದೆ. ಕೆರೆ ಹೂಳೆತ್ತು ಜನರು ಸ್ವಯಂ ಪ್ರೇರಿತವಾಗಿ ಮುಂದೆ ಬರುತ್ತಿದ್ದಾರೆ. ಹಿರಿಯರು ತಮ್ಮ ದೂರದೃಷ್ಠಿಯಿಂದ ನಿರ್ಮಿಸಿರುವ ಜಲ ಮೂಲವಾದ ಕೆರೆಗಳ ಪುನಃ ಶ್ಚೇತನಕ್ಕೆ ಒತ್ತು ನೀಡಿದರೆ ಕೆರೆಗಳಲ್ಲಿ ನೀರಿನ ಅಂತರ್ಜಲ ಮಟ್ಟ ಹೆಚ್ಚುತ್ತದೆ ಎಂದರು.

ಸರ್ಕಾರದ ಯಾವುದೇ ಅನುದಾನ ಬಳಸದೆ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಜಿಲ್ಲೆ ಯ ಹಲವು ಕೆರೆಗಳನ್ನು ಹೂಳೆತ್ತುತ್ತಿದ್ದೇವೆ. ಜಲಮೂಲ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಕೆರೆ ಅಭಿವೃದ್ದಿಯಲ್ಲಿ ಸ್ಥಳೀಯರ ಸಹಭಾಗಿತ್ವ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್‌ ಹರೀಶ್‌ ಮಾತನಾಡಿ, ಅರ್ಕಾವತಿ ನದಿ ಮೂಲದ ವ್ಯಾಪ್ತಿಯಲ್ಲಿ ಅರಣ್ಯ ಮತ್ತು ಕೆರೆಗಳ ಅಭಿವೃದ್ಧಿಯಾಗಬೇಕು. ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದಲ್ಲಿ ಎಕರೆಗೆ ಇಂತಿಷ್ಟು ಹಣವನ್ನು ಕಟ್ಟಿಸಿಕೊಳ್ಳುತ್ತಾರೆ ಆದರೆ ಅರಣ್ಯ ಮತ್ತು ಕೆರೆಗಳ ಅಭಿವೃದ್ಧಿಗೆ ಆ ಅನುದಾನದ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಈ ವೇಳೆ ಕೃಷಿ ಮಾರಾಟ ನಿರ್ದೇಶಕ ಸಿಎಸ್‌ ಕರೀಗೌಡ ಅವರ ಪತ್ನಿ ಹರಿಣಿ , ಸಾಮಾಜಿಕ ಕಾರ್ಯಕರ್ತ ಚಿಕ್ಕೇಗೌಡ, ಗ್ರಾಪಂ ಅಧ್ಯಕ್ಷ ಕೆ.ಎಸ್‌.ಶ್ರೀನಿವಾಸ್‌, ಗ್ರಾಪಂ ಸದಸ್ಯ ರಮೇಶ್‌ ಬಾಬು, ಕೃಷಿಕ ಸಮಾಜದ ತಾಲೂಕು ನಿರ್ದೇಶಕ ಎಚ್‌.ಎಮ್‌ ರವಿಕುಮಾರ್‌, ತಾಲೂಕು ಬಿಜೆಪಿ ಉಪಾಧ್ಯಕ್ಷ ಕೆ.ಸಿ.ಮುನಿರಾಜು, ಮುಖಂಡರಾದ ರವಿಕುಮಾರ್‌, ವೆಂಕಟೇಶ್‌, ನಾಗೇಶ್‌, ಮುನಿರಾಜು ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.