ಗೋಮಾಂಸ ಸಾಗಿಸಿದ ಬೈಕ್ ಸುಟ್ಟುಹಾಕಿದ ಸಾರ್ವಜನಿಕರು
Team Udayavani, Sep 18, 2022, 12:43 PM IST
ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನವೊಂದರಲ್ಲಿ ಅಕ್ರಮವಾಗಿ ಗೋಮಾಂಸ ಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ಸಾರ್ವ ಜನಿಕರು ಹಿಡಿದು ಪೊಲೀಸರಿಗೊಪ್ಪಿಸಿ ನಂತರ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ನಗರದ ಹೊರವಲಯದ ಬಾಶೆಟ್ಟಿಹಳ್ಳಿ ಬಳಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ.
ಬಾಶೆಟ್ಟಿಹಳ್ಳಿ ರಾಜ್ಯ ಹೆದ್ದಾರಿಯಲ್ಲಿ ಹಿಂದೂಪುರದಿಂದ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಗೋಮಾಂಸ ರಸ್ತೆಯಲ್ಲಿ ಚೆಲ್ಲಾಡಿದೆ. ಇದನ್ನು ಕಂಡ ಸಾರ್ವಜನಿಕರು ಆರೋಪಿಯನ್ನು ಥಳಿಸಿ ದ್ವಿಚಕ್ರ ವಾಹನ ಸವಾರರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು.
ಪೊಲೀಸರು ತೆರಳಿದ ಮೇಲೆ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಂಧಿತನನ್ನು ಹಿಂದೂಪುರ ಮೂಲದ ಅಸ್ಲಂ ಎಂದು ಗುರುತಿಸ ಲಾಗಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!