ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ
Team Udayavani, Sep 29, 2020, 11:47 AM IST
ನೆಲಮಂಗಲ: ತಾಲೂಕಿನ ವಿವಿಧ ಸಂಘಟನೆಗಳು ಹಾಗೂ ವರ್ತಕರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ಮಾಡಿದರು.
ನಗರದ ಹಣ್ಣು ತರಕಾರಿ ಮಾರುಕಟ್ಟೆ ಮಾರಾಟಗಾರರು ಹಾಗೂ ವರ್ತಕರು ಅಂಗಡಿ ಬಂದ್ ಮಾಡುವ ಮೂಲಕ ಸರಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆಯಲ್ಲಿ ಭಾಗವಹಿಸಿ ರೈತ ವಿರೋಧಿ ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಿದರು.
ಶಿವರಾಮೇಗೌಡ ಬಣದ ಕರವೇ ಕಾರ್ಯಕರ್ತರು ಹೋಬಳಿ ಅಧ್ಯಕ್ಷಮಂಜೇಗೌಡ ನೇತೃತ್ವದಲ್ಲಿ ಮಾಕಳಿಯ ಹೆದ್ದಾರಿ ಸಮೀಪದಲ್ಲಿ ಪ್ರತಿಭಟನೆ ಜಾಥಾ ಮಾಡಿ ತಹಶೀಲ್ದಾರ್ ಶ್ರೀನಿವಾಸ್ಗೆ ಮನವಿ ಸಲ್ಲಿಸಿದರು.
ಎಸ್ಪಿ ಪರಿಶೀಲನೆ: ತಾಲೂಕಿನಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹೆದ್ಧಾರಿ ಹಾಗೂ ವಿವಿಧ ವೃತ್ತಗಳಿಗೆ ಎಸ್ಪಿ ರವಿ ಡಿ. ಚೆನ್ನಣ್ಣನವರ್, ಡಿವೈಎಸ್ಪಿ ಮೋಹನ್ಕುಮಾರ್ ಪರಿಶೀಲನೆ ಭೇಟಿ ನೀಡಿ ಶಾಂತಿ ಕಾಪಾಡಿ ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್