ಬೆಲೆ ಏರಿಕೆ ವಿರೋಧಿಸಿ ಶ್ರಮ ಜೀವಿಗಳಿಂದ ಪ್ರತಿಭಟನೆ


Team Udayavani, Dec 13, 2022, 12:16 PM IST

tdy-8

ದೊಡ್ಡಬಳ್ಳಾಪುರ: ಕನ್ನಡ ಜಾಗೃತ ಪರಿಷತ್‌ನಿಂದ ಬೆಲೆ ಏರಿಕೆ, ಸರ್ಕಾರದ ಜನವಿರೋಧಿ ನೀತಿಗಳ ಕುರಿತು ಎಚ್ಚರಿಸುವ ನಿಟ್ಟಿನಲ್ಲಿ ಶ್ರಮ ಜೀವಿಗಳ ಪ್ರತಿಭಟನೆ ಕಾರ್ಯಕ್ರಮ ನಗರದ ಸಿದ್ದಲಿಂಗಯ್ಯ ವೃತ್ತದಲ್ಲಿ ನಡೆಯಿತು.

ಕನ್ನಡ ಜಾಗೃತ ಪರಿಷತ್‌ನ ಅಧ್ಯಕ್ಷ ಕೆ.ವೆಂಕಟೇಶ್‌, ಪ್ರಧಾನ ಕಾರ್ಯದರ್ಶಿ ಡಿ.ಪಿ.ಆಂಜನೇಯ ಮಾತನಾಡಿ, ಕೋವಿಡ್‌ನಿಂದ ಜನ ಚೇತರಿಸಿಕೊಳ್ಳುತ್ತಿರುವ ಇಂದಿನ ದಿನಗಳಲ್ಲಿ ಬೆಲೆ ಏರಿಕೆಯ ಹೊಡೆತ ಜನಸಾಮಾನ್ಯರನ್ನು ತೀವ್ರ ಸಂಕಷ್ಟಕ್ಕೆ ದೂಡಿದೆ. ದಿನಸಿ ಪದಾರ್ಥಗಳು ತೈಲ ಬೆಲೆ, ಶಿಕ್ಷಣ, ಆರೋಗ್ಯ ಮೊದಲಾಗಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ಬೆಲೆ ಏರಿಕೆಗಳಿಂದಾಗಿ ಜನ ಸಾಮಾನ್ಯರು ತತ್ತರಿಸುತ್ತಿದ್ದಾರೆ ಎಂದು ಹೇಳಿದರು.

ಜನವಿರೋಧಿ ನೀತಿ: ಸರ್ಕಾರದ ಜನ ವಿರೋಧಿ ನೀತಿ ಗಳನ್ನು ಜನರಿಗೆ ತಿಳಿಸಲು, ಆರ್ಥಿಕ ಸಬಲತೆ ಇರುವ ಎಲ್ಲರಿಗೂ ಮಾನವೀಯತೆ ಪರಿಚಯ, ದುಡ್ಡಿದ್ದವರಿಗೆ ಅಂತರಂಗ ಹಾಜರಿ ಪರಿಚಯ ಮಾಡಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ತಿಳಿಸಿದರು.

ಹೆಚ್ಚುವರಿ ವಸೂಲಿ: ಜಾಗತಿಕ ಮಾರುಕಟ್ಟೆಯಲ್ಲಿ ಇಂದಿನ ಕಚ್ಚಾ ತೈಲದ ಬೆಲೆಗೆ ಅನುಸಾರವಾಗಿ ಪೆಟ್ರೋಲ್‌ ಬೆಲೆ 32 ರೂ. ಇರಬೇಕಿದೆ. ಆದರೆ, ಕೇಂದ್ರದ ಸರ್ಕಾರ ತೈಲ ಬೆಲೆಗಳ ಮೇಲೆ ನಿಯಂತ್ರಣವಿಲ್ಲದೇ 102 ರೂ.ಗೆ ಏರಿಸಿದೆ. ಪ್ರತಿ ಲೀಟರ್‌ ಪೆಟ್ರೋಲ್‌ ಮೇಲೆ 37 ರೂ., ಡೀಸೆಲ್‌ ಮೇಲೆ 36 ರೂ. ಹೆಚ್ಚುವರಿಯಾಗಿ ವಸೂಲಿ ಮಾಡಲಾಗುತ್ತಿದೆ ಎಂದು ಹೇಳಿದರು.

ಸುಳ್ಳು ಪುರಾಣ ನಿಲ್ಲಿಸಬೇಕು: ಖಾಸಗೀಕರಣದ ನೆಪ ದಲ್ಲಿ ದೊಡ್ಡ ಉದ್ಯಮಿಗಳಿಗೆ ನೆರವು ನೀಡುವ ಸರ್ಕಾರ ಅವರಿಂದ ಮತ್ತೆ ಯಾವುದೇ ಸಹಾಯ ಪಡೆಯು ವುದಿಲ್ಲ. ಕೂಡಲೇ ಸರ್ಕಾರ ತನ್ನ ವ್ಯಾಪ್ತಿಗೆ ಬರುವ ಎಲ್ಲದರ ಬೆಲೆ ಇಳಿಸಬೇಕು. ಅಭಿವೃದ್ಧಿಯ ಸುಳ್ಳು ಪುರಾಣಗಳನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಗಟ್ಟಿಧ್ವನಿಯಲ್ಲಿ ಕೇಳಬೇಕಿದೆ: ಹಿರಿಯ ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ್‌ ಮಾತನಾಡಿ, ರಾಮರಾಜ್ಯ, ಅಚ್ಚೇದಿನ್‌ ಎಂದು ಹೇಳಿ ಜನರನ್ನು ಮೋಸ ಮಾಡುತ್ತಿದ್ರೂ ಜನರಿಗೆ ಇಂದಿನ ವಾಸ್ತವ ಅರಿವಾಗುತ್ತಿಲ್ಲ. ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಲು ನಮ್ಮ ಜನಪ್ರತಿನಿ ಧಿಗಳು ಹಿಂದೆ ಸರಿಯುತ್ತಿದ್ದಾರೆ. ಜನಸಾಮಾನ್ಯರ ಬದುಕು ದಿನೇ ದಿನೆ ದುಸ್ತರವಾಗುತ್ತಿದ್ದರೂ ಆಳುತ್ತಿರುವ ಸರ್ಕಾರಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ. ಈ ಬಗ್ಗೆ ಜನತೆ ಗಟ್ಟಿ ಧ್ವನಿಯಲ್ಲಿ ಕೇಳಬೇಕಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಕನ್ನಡ ಪಕ್ಷದ ಹಿರಿಯ ಮುಖಂಡರಾದ ಸಂಜೀವ್‌ ನಾಯಕ್‌, ಆರ್‌. ರಂಗನಾಥ್‌, ಜಿಲ್ಲಾ ಕಾರ್ಯದರ್ಶಿ ಮುನಿಪಾಪಯ್ಯ, ಪರಮೇಶ್‌, ಕರವೇ ಪ್ರವೀಣ್‌ ಶೆಟ್ಟಿ ಬಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ, ತಾಲೂಕು ಅಧ್ಯಕ್ಷ ಹಮಾಮ್‌ ವೆಂಕಟೇಶ್‌, ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ನವೀನ್‌, ಮುಖಂಡರಾದ ನಾಗರಾಜ್‌, ಸುನೀಲ್‌ ಬಸವರಾಜ್‌, ಹಬೀಬ್‌, ಸೂರಿ, ಮಂಜುನಾಥ್‌, ದಿವಾಕರ್‌, ರಾಮಚಂದ್ರ ಮೊದಲಾದವರು ಭಾಗವಹಿಸಿದ್ದರು.

 

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.