ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಿ

ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ನಿರ್ದೇಶನ  ಸ್ಥಗಿತಗೊಂಡಿದ್ದ ಬಿಸಿಯೂಟ ಯೋಜನೆ ಪುನಾರಂಭ

Team Udayavani, Oct 22, 2021, 12:10 PM IST

ಮಕ್ಕಳು, ಗುಣಮಟ್ಟದ ಆಹಾರ, udayavanipaper, kannadanews,

ದೇವನಹಳ್ಳಿ:ತಾಲೂಕಿನ ಪ್ರತಿ ಶಾಲೆಯಲ್ಲೂ ಶಾಲಾ ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಬೇಕು. ಬಿಸಿಯೂಟ ತಿನ್ನುವುದರ ಮೂಲಕ ವಿದ್ಯಾರ್ಥಿಗಳು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಶಾಸಕ ಎಲ್‌. ಎನ್‌.ನಾರಾಯಣಸ್ವಾಮಿ ತಿಳಿಸಿದರು. ಪಟ್ಟಣದ ಸರ್ಕಾರಿ ಹೆಣ್ಣು ಮಕ್ಕಳ ಪಾಠಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಶಾಲಾ ಮಕ್ಕಳಿಗೆ ಬಿಸಿಯೂಟ ಬಡಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲಿ ಸರ್ಕಾರ ಬಿಸಿಯೂಟ ಯೋಜನೆ ಸ್ಥಗಿತಗೊಳಿಸಿತ್ತು. ಶಾಲೆಗಳಲ್ಲಿ ಮಧ್ಯಾಹ್ನದ ಊಟ ನಿಲ್ಲಿಸಿದರೂ ಮಕ್ಕಳಿಗೆ ಅಕ್ಕಿ, ಬೇಳೆ ಪೂರೈಕೆ ಮಾಡಲಾಗುತ್ತಿತ್ತು.

18ತಿಂಗಳ ನಂತರ ಬಿಸಿಯೂಟ ಯೋಜನೆಯನ್ನು ಸರ್ಕಾರ ಮಾಡುತ್ತಿ ರುವುದು. ಶಾಲಾ ಮಕ್ಕಳಿಗೆ ಇದೊಂದು ಅನುಕೂಲವಾಗಿದೆ. ಸರ್ಕಾರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಬಿಸಿಯೂಟ ಯೋಜನೆಯನ್ನು ಜಾರಿಗೆ ತಂದಿತ್ತು. ಪ್ರತಿ ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶವುಳ್ಳ ಆಹಾರವನ್ನು ನೀಡಬೇಕು. ಚೆನ್ನಾಗಿ ಊಟ ಮಾಡಿ ವಿದ್ಯಾರ್ಥಿಗಳು ತಮ್ಮ ಆರೋಗ್ಯ ವೃದ್ಧಿಸಿಕೊಳ್ಳಬೇಕು ಎಂದರು.

ಹಳೇ ದಾಸ್ತಾನು ಉಪಯೋಗಿಸಬೇಡಿ: ಕ್ಷೇತ್ರ ಶಿಕ್ಷಣಾ ಧಿಕಾರಿ ಅಶ್ವಥನಾರಾಯಣ ಮಾತನಾಡಿ, ತಾಲೂಕಾದ್ಯಂತ ಎಲ್ಲ ಶಾಲೆಗಳಲ್ಲಿ ಆರರಿಂದ ಹತ್ತನೇ ತರಗತಿವರೆಗೆ ಬಿಸಿಯೂಟ ಯೋಜನೆ ಜಾರಿಗೆಗೊಳಿ ಸಲಾಗಿದೆ. ಬಿಸಿಯೂಟ ತಯಾರಿಗೆ ಸಂಬಂಧಪಟ್ಟಂತೆ ಪೂರ್ವಭಾವಿ ಸಭೆಗಳನ್ನು ನಡೆಸಿ ಅಚ್ಚುಕಟ್ಟಾಗಿ ಮಾಡುವಂತೆ ಸೂಚನೆ ನೀಡಲಾಗಿದೆ. ಶಾಲೆಯಲ್ಲಿ ಬಿಸಿಯೂಟ ನೀಡುವಿಕೆಗೆ ತೊಂದರೆ ಯಾಗದಂತೆ ಕ್ರಮವಹಿಸಲಾಗಿದೆ.

ಬಿಸಿಯೂಟಕ್ಕೆ ಹಳೇ ದಾಸ್ತಾನು ಉಪಯೋಗಿಸುವಂತಿಲ್ಲ. ಅಂಗಡಿ ಯಿಂದ ಖರೀದಿಸಿ ಸ್ವತ್ಛಗೊಳಿಸಬೇಕು. ಗುಣಮಟ್ಟದ ಅಕ್ಕಿ, ತರಕಾರಿ, ಬೇಳೆ, ಎಣ್ಣೆ ಬಳಸುವಂತೆ ಸೂಚನೆ ನೀಡಿದ್ದೇವೆ ಎಂದು ಹೇಳಿದರು. ತಾಲೂಕು ಜೆಡಿಎಸ್‌ ಅಧ್ಯಕ್ಷ ಆರ್‌.ಮುನೇಗೌಡ, ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ಪ್ರಚಾರಸಮಿತಿ ಅಧ್ಯಕ್ಷ ನೆರಗನಹಳ್ಳಿ ಶ್ರೀನಿವಾಸ್‌, ತಾಲೂಕು ಯುವ ಜೆಡಿಎಸ್‌ ಅಧ್ಯಕ್ಷ ಆರ್‌.ಭರತ್‌ ಕುಮಾರ್‌, ಟೌನ್‌ ಜೆಡಿಎಸ್‌ ಅಧ್ಯಕ್ಷ ಮುನಿನಂಜಪ್ಪ, ಪುರಸಭಾ ಸ್ಥಾಯಿಸಮಿತಿ ಅಧ್ಯಕ್ಷ ಎಸ್‌.ನಾಗೇಶ್‌, ಸದಸ್ಯ ವೈ.ಆರ್‌.ರುದ್ರೇಶ್‌, ಪುರಸಭೆ ಮಾಜಿ ಸದಸ್ಯ ಸೊಸೈಟಿ ಕುಮಾರ್‌, ಮುಖಂಡ ಲಕ್ಷ್ಮೀನಾರಾ ಯಣ್‌, ನಟರಾಜ್‌, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಇಸಿಒ ಮಂಜುನಾಥ್‌, ಮುಖ್ಯಶಿಕ್ಷಕಿ ಬೊಮ್ಮಕ್ಕ ಮತ್ತಿತರರು ಇದ್ದರು.

ಗ್ರಾಮೀಣ ಮಕ್ಕಳಿಗೆ ಬಿಸಿಯೂಟ ಯೋಜನೆ ವರದಾನ

ಗ್ರಾಮೀಣ ಪ್ರದೇಶದಿಂದ ಬರುವ ಶಾಲಾ ಮಕ್ಕಳಿಗೆ ಬಿಸಿಯೂಟ ಯೋಜನೆ ವರದಾನವಾಗಿದೆ. ಯಾವುದೇ ದೇಶ ಸರ್ವತೋಮುಖವಾಗಿ ಅಭಿವೃದ್ಧಿ ಆಗಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ. ಪ್ರತಿ ವಿದ್ಯಾರ್ಥಿಗಳು ಓದಿನಕಡೆ ಹೆಚ್ಚಿನ ಗಮನಹರಿಸಬೇಕು. ತಾವು ಶಾಲೆಗೆ ಹೋಗುವ ವೇಳೆ ಇಷ್ಟು ಸೌಲಭ್ಯಗಳು ಇರಲಿಲ್ಲ. ಈಗ ಸರ್ಕಾರ ಎಲ್ಲ ರೀತಿಯ ಸೌಲಭ್ಯ ನೀಡುತ್ತಿದೆ ಎಂದು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ಹೇಳಿದರು.

ವಿದ್ಯಾರ್ಥಿಗಳಿಗೆ ಊಟ ಬಡಿಸಿದ ಬಿಇಒ

ವಿದ್ಯಾರ್ಥಿಗಳಿಗೆ ಊಟ ಬಡಿಸಿದ ಬಿಇಒ

ದೊಡ್ಡಬಳ್ಳಾಪುರ: ಕೋವಿಡ್‌ ಹಿನ್ನೆಲೆ ಸ್ಥಗಿತಗೊಂಡಿದ್ದ ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಕಾರ್ಯಕ್ರಮ ಗುರುವಾರದಿಂದ ತಾಲೂಕಿನ ಶಾಲೆಗಳಲ್ಲಿ ಪುನಾರಂಭವಾಗಿವೆ. ನಗರದ ಸರ್ಕಾರಿ ಪ.ಪೂ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಅಕ್ಷರ ದಾಸೋಹ ಬಿಸಿಯೂಟ ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌.ವಿ. ಶುಭಮಂಗಳಾ ವಿದ್ಯಾರ್ಥಿಗಳಿಗೆ ಊಟ ಬಡಿಸುವ ಮೂಲಕ ಚಾಲನೆ ನೀಡಿದರು. ಮಕ್ಕಳು ಸಾಮಾಜಿಕ ಅಂತರದೊಂದಿಗೆ ಕುಳಿತು, ಶ್ಲೋಕ ಪಠಿಸಿ ಬಿಸಿಯೂಟ ಸೇವಿಸಿದರು. ಮೊದಲ ದಿನದ ಅಂಗವಾಗಿ ಸಿಹಿ ಹಾಗೂ ಖಾರಾ ಪೊಂಗಲ್‌ ಮಾಡಲಾಗಿತ್ತು. ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ನಡೆದು ಒಂದೂವರೆ ವರ್ಷ ಕಳೆದಿದ್ದು, ಕೊವಿಡ್‌ ಸಮಯದಲ್ಲಿ ಮಕ್ಕಳಿಗೆ ದಿನಸಿ ನೀಡಲಾಗುತ್ತಿತ್ತು. ಈಗ ಬಿಸಿಯೂಟ ಮತ್ತೆ ಆರಂಭಗೊಂಡಿದ್ದು, ಶಾಲೆಯಲ್ಲಿನ 730 ಮಕ್ಕಳು ನಿತ್ಯ ಊಟ ಮಾಡುವ ಮೂಲಕ ಹಸಿವನ್ನು ನೀಗಿಸಿಕೊಂಡು, ತರಗತಿಗಳಿಗೆ ಉತ್ಸಾಹದಿಂದ ಹಾಜರಾಗಲು ಸಹಕಾರಿಯಾಗಿದೆ ಎಂದು ಶಾಲೆಯ ಪ್ರಭಾರಿ ಉಪಪ್ರಾಂಶುಪಾಲ ಮಂಜುನಾಥ್‌ ಜಟ್ಟಯ್ಯ ತಿಳಿಸಿದರು. ನಗರ ಸಿಆರ್‌ಪಿ ಸಿ.ಎಚ್‌.ರಾಮಚಂದ್ರಯ್ಯ ಹಾಗೂ ಶಾಲೆಯ ಶಿಕ್ಷಕರು ಇದ್ದರು

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.