ಕಸ ವಿಲೇವಾರಿ ಘಟಕದ ವಿರುದ್ಧ ಜನ ಜಾಗೃತಿ

ಇಲ್ಲಿಯವರೆಗೂ ಕಸ ವಿಲೇವಾರಿ ಘಟಕದ ಮಾಲೀಕರ ವಿರುದ್ಧ ಯಾವುದೇ ಕ್ರಮ ಇಲ್ಲ

Team Udayavani, Apr 2, 2022, 5:53 PM IST

ಕಸ ವಿಲೇವಾರಿ ಘಟಕದ ವಿರುದ್ಧ ಜನ ಜಾಗೃತಿ

ದೊಡ್ಡಬಳ್ಳಾಪುರ: ಚಿಗರೇನಹಳ್ಳಿಯ ಎಂಎಸ್‌ಜಿಪಿ ಬಿಬಿಎಂಪಿ ಕಸ ವಿಲೇವಾರಿ ಘಟಕದಿಂದ ತೊಂದರೆಗೆ ಒಳಗಾಗಿರುವ ಗ್ರಾಮಗಳಲ್ಲಿ ಗ್ರಾಮಸಭೆ ನಡೆಸಲಾಗುತ್ತಿದೆ. ಜನಾಭಿಪ್ರಾಯ ಸಂಗ್ರಹದ ಆಧಾರದ ಮೇಲೆ ಮುಂದಿನ ಹೋರಾಟದ ರೂಪುರೇಷ ಸಿದ್ಧ ಪಡಿಸಲಾಗುವುದು ಎಂದು ಕೊರಟಗೆರೆ ಎಲೆರಾಂ ಪುರದ ಕುಂಚಿಟಿಗರ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಹನುಮಂತನಾಥ ಸ್ವಾಮೀಜಿ ಹೇಳಿದರು.

ತಾಲೂಕಿನ ಮೂಡ್ಲಕಾಳೇನಹಳ್ಳಿ ಗ್ರಾಮದ ಅರ ಸಮ್ಮದೇವಿ ದೇವಾಲಯದ ಆವರಣದಲ್ಲಿ ನಡೆದ ಗ್ರಾಮ ಸಭೆಯಲ್ಲಿ ಮಾತನಾಡಿ, ಇಲ್ಲಿಯವರೆಗೂ ಹಲವಾರು ಸುತ್ತಿನ ಹೋರಾಟ ನಡೆದಿವೆ. ಆದರೆ, ಅಧಿಕಾರಿಗಳ ಹಾಗೂ ಜನ ಪ್ರತಿನಿಧಿಗಳ ಭರವಸೆಗಳ ನಂಬಿ ಇಲ್ಲಿನ ಜನ ತೊಂದರೆ ಅನುಭವಿಸುವಂತಾಗಿದೆ. ಈಗ ಚಿಗರೇನಹಳ್ಳಿಯಲ್ಲಿನ ಎಂಎಸ್‌ ಜಿಪಿ ಕಸ ವಿಲೇವಾರಿ ಘಟಕದ ವಿರುದ್ಧ ಎಲ್ಲಾ ಜನರ ಅಭಿಪ್ರಾಯದಂತೆ ಹೋರಾಟ ರೂಪಿಸುವ ಮೂಲಕ ಇಲ್ಲಿಗೆ ಮತ್ತೆ ಕಸ ಬಾರದಂತೆ ತಡೆಯಬೇಕಿದೆ.

ಕಸ ವಿಲೇವಾರಿ ಘಟಕದ ಸುತ್ತಲಿನ ಎಲ್ಲ ಗ್ರಾಮಗಳಲ್ಲೂ ಇನ್ನು ಒಂದು ವಾರ ಸಭೆಗಳನ್ನು ನಡೆಸಲಾಗುವುದು. ಗ್ರಾಮಸಭೆ ಮುಕ್ತಾಯವಾದ ನಂತರ ಎಲ್ಲ ಸಂಘಟನೆಗಳು, ರಾಜಕೀಯ ಪಕ್ಷ ಒಳಗೊಂಡ ಹೋರಾಟ ಸಮಿತಿ ರಚಿಸಿಕೊಂಡು ಮುಂದಿನ ಹೋರಾಟವನ್ನು ವ್ಯವಸ್ಥಿತವಾಗಿ ನಡೆಸಲಾಗುವುದು ಎಂದರು.

ಸೂಕ್ತ ಕ್ರಮ ಕೈಗೊಂಡಿಲ್ಲ: ಒಂದು ವರ್ಷದ ಹಿಂದೆ ಎಂಎಸ್‌ಜಿಪಿ ಕಸ ವಿಲೇವಾರಿ ಘಟಕದಲ್ಲಿ ಸೂಕ್ತ ದಾಖಲೆ ಇಲ್ಲದ ಹತ್ತಾರು ಬೈಕ್‌ ಸಿಕ್ಕಿದ್ದವು. ಬಾಂಗ್ಲಾದೇಶ ಸೇರಿ ವಿವಿಧಡೆಗಳಿಂದ ಅಕ್ರಮವಾಗಿ ಬಂದು ಇಲ್ಲಿ ನೆಲೆಸಿದ್ದ ಬಗ್ಗೆ ಜಿಲ್ಲಾಧಿಕಾರಿ, ರಾಜ್ಯ ಸಪಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರು ಭೇಟಿ ನೀಡಿದ್ದ ಸಂದರ್ಭದಲ್ಲಿ ಬೆಳಕಿಗೆ ಬಂದಿದ್ದವು.

ಇಷ್ಟೆಲ್ಲ ಅಕ್ರಮ ಪತ್ತೆಯಾಗಿದ್ದರು. ಇಲ್ಲಿಯವರೆಗೂ ಕಸ ವಿಲೇವಾರಿ ಘಟಕದ ಮಾಲೀಕರ ವಿರುದ್ಧ ಯಾವುದೇ ಕ್ರಮ ಇಲ್ಲ. ಸೂಕ್ತ ರೀತಿಯಲ್ಲಿ ಕಸ ವಿಲೇವಾರಿ ಮಾಡದೇ ಇದ್ದ ಕುರಿತಂತೆ ಎಫ್‌ ಐಆರ್‌ ದಾಖಲಾಗಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಹೋರಾಟ ಅನಿವಾರ್ಯ: ಹಲವರ ಪಾಪದ ಕೂಸಾಗಿ ತಾಲೂಕಿಗೆ ಒಕ್ಕರಿಸಿರುವ ಬಿಬಿಎಂಪಿ ಕಸದ ವಿರುದ್ಧ ಜನ ಜಾಗೃತಿಮೂಡಿಸಿ ಎಲ್ಲರನ್ನು ಒಳಗೊಂಡಂತೆ ಹೋರಾಟ ಮಾಡುವ ತುರ್ತು ಪರಿಸ್ಥಿತಿ ಎಲ್ಲರ ಜವಾಬ್ದಾರಿಯಾಗಿದೆ. ಇಂದು ನಾವು ಒಂದಿಷ್ಟು ಎಚ್ಚರ ತಪ್ಪಿ ಯಾರದೋ ಮುಲಾಜಿಗೆ ಒಳಗಾಗಿ ಕಸ ಕಂಟಕದ ವಿರುದ್ಧ ಧ್ವನಿ ಎತ್ತದೇ ಹೋದರೆ ನಾವು ಮತ್ತು ನಮ್ಮ ಮಕ್ಕಳು ಇಲ್ಲಿ ಆರೋಗ್ಯವಂತ ಜೀವನ ನಡೆಸುವ ವಾತಾವರಣ ಕಣ್ಮರೆಯಾಗಲಿದೆ ಎಂದು ಎಚ್ಚರಿಸಿದರು.

ಜನ ಭಯಪಡುವಂತಹ ಸ್ಥಿತಿ ನಿರ್ಮಾಣ: ಈಗಾಗಲೇ ಕಸ ವಿಲೇವಾರಿ ಘಟಕದ ಸುತ್ತಮುತ್ತಲಿನ ಗ್ರಾಮಗಳಿಂದ ದನ, ಕರು, ಮೇಕೆ, ಕುರಿಗಳಂತಹ ಸಾಕು ಪ್ರಾಣಿ, ಹಣ್ಣು, ತರಕಾರಿ ಖರೀದಿ ಮಾಡಲು ಜನ ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದರು. ಸಿಪಿಐಎಂ ತಾಲೂಕು ಕಾರ್ಯದರ್ಶಿ ರುದ್ರಾ ರಾಧ್ಯ, ಟಿಎಪಿಎಂಸಿಎಸ್‌ ನಿರ್ದೆಶಕ ಡಿ. ಸಿದ್ದರಾಮ ಯ್ಯ, ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ವಿ.ಎಸ್‌. ರವಿ ಕುಮಾರ್‌, ಕರವೇ ರಾಜ್ಯ ಕಾರ್ಯದರ್ಶಿ ರಾಜ ಘಟ್ಟ ರವಿ, ಕಾಡತಿಪ್ಪೂರು ಗ್ರಾಪಂ ಅಧ್ಯಕ್ಷ ಸಿದ್ದಲಿಂಗಯ್ಯ, ಮುಖಂಡ ರಾಜಣ್ಣ, ಶಿವ ಕುಮಾರ್‌, ಮುತ್ತು ರಾಜ್‌, ರುದ್ರಮೂರ್ತಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.