ಶಾಸಕರ ದರ್ಪದ ಮಾತಿಗೆ ಸಾರ್ವಜನಿಕರ ಆಕ್ರೋಶ


Team Udayavani, Oct 16, 2021, 11:54 AM IST

Public outrage over legislators’ dirty talk – issue at Nelamangala

ನೆಲಮಂಗಲ: ರಸ್ತೆ ಸಮಸ್ಯೆ ನಿಮಗೆ ತಿಳಿದಿದೆ ಸಮಸ್ಯೆ ಬಗೆಹರಿಸಿಕೊಡಿ ಸರ್‌ ಎಂದು ಕೇಳಿದ ಗ್ರಾಮದ ಯುವಕನಿಗೆ ಶಾಸಕರು ದರ್ಪದ ಉತ್ತರ ನೀಡಿರುವ ಆಡಿಯೋ ವೈರಲ್‌ ಆಗಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ತಾಲೂಕಿನ ಶ್ರೀನಿವಾಸಪುರ ಗ್ರಾಪಂ ಭೈರಸಂದ್ರದ ತೊರೆಪಾಳ್ಯ ಗ್ರಾಮ, ನಗರದಿಂದ 7ಕಿಮೀ ದೂರವಿದ್ದು ಉತ್ತಮ ರಸ್ತೆ ಇಲ್ಲದೆ ಕೆಸರುಗದ್ದೆ ಹಾಗೂ ಗುಂಡಿಬಿದ್ದು ಸಮಸ್ಯೆ ಎದುರಾಗಿತ್ತು.

ಅನೇಕ ಬಾರಿ ಮನವಿ ಮಾಡಿದರು ಸಮಸ್ಯೆ ಬಗೆಹರಿಸದ ಕಾರಣ ಶಾಸಕರ ವಿರುದ್ಧ ಅ.11ರಂದು ತೊರೆಪಾಳ್ಯಗ್ರಾಮದ ಜನರು ವಿನೂತನ ಪ್ರತಿಭಟನೆ ಮಾಡಿ ಶಾಸಕರೇ ನಮ್ಮ ಗ್ರಾಮಕ್ಕೆ ರಸ್ತೆ ಮಾಡಿಸಿಕೊಡಿ ನಿಮ್ಮ ಪಾದಪೂಜೆ ಮಾಡುವೆವು ಎಂದು ಮಾಧ್ಯಮದ ಮೂಲಕ ಮನವಿ ಮಾಡಿದ್ದರು. ಅನಂತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಮಾಡಿ ವಾಸ್ತವತೆ ಮನಗಂಡಿದ್ದರು.

ಇದನ್ನೂ ಓದಿ:- ಜನ ನನ್ನ ಕೈ ಬಿಡಲ್ಲ: ರಮೇಶ ಭೂಸನೂರ

ಕೆಸರಲ್ಲಿ ಸಿಲುಕಿದ ಕಾರು: ಪತ್ರಿಕಾ ಮಾಧ್ಯಮದಲ್ಲಿ ಸುದ್ದಿಯಾದ ತಕ್ಷಣ ಸ್ಥಳಕ್ಕೆ ಬಂದ ತಾಪಂ ಅಧಿಕಾರಿಗಳು ಹಾಗೂ ಗ್ರಾಪಂ ಅಧ್ಯಕ್ಷರು ರಸ್ತೆ ಪರಿಶೀಲನೆ ಮಾಡಿ ಹೋಗುವಾಗ ಅವರ ಕಾರು ಕೆಸರಿನಲ್ಲಿ ಸಿಲುಕಿತು. ಗ್ರಾಮಸ್ಥರು ಟ್ರ್ಯಾಕ್ಟರ್‌ಮೂಲಕ ಕಾರನ್ನು ಎಳೆದು ಹೊರಗೆ ತೆಗೆದ ಘಟನೆ ನಡೆದಿದ್ದು ಗ್ರಾಮದ ರಸ್ತೆ ಸಮಸ್ಯೆಅಧಿಕಾರಿಗಳಿಗೆ ಸ್ಥಳದಲ್ಲಿ ಅರಿವಾಗಿದೆ.

 ಜಿಲ್ಲಾಧಿಕಾರಿ ಬರುವಂತೆ ಮನವಿ: ನೆಲಮಂಗಲ ದಲ್ಲಿ ಈ ಬಾರಿ ಡಿಸಿ ನಡೆ ಹಳ್ಳಿ ಕಡೆ ಕಾರ್ಯಕ್ರಮವಿದ್ದು ಜಿಲ್ಲಾಧಿಕಾರಿಗಳು ತೊರೆಪಾಳ್ಯ ಗ್ರಾಮಕ್ಕೆ ಬಂದು ರಸ್ತೆ ಸಮಸ್ಯೆ ಬಗೆಹರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ಸಾಮಾಜಿಕ ಜಾಲತಾಣದಲ್ಲಿ ಜಿಲ್ಲಾಧಿಕಾರಿಗಳು ಯಾವಾಗ ಬರುತ್ತೀರಾ ತೊರಪಾಳ್ಯಕ್ಕೆ ಎಂಬ ಸಂದೇಶ ವೈರಲ್‌ ಆಗಿದೆ.

ಶಾಸಕರ ವಿರುದ್ಧ ಆಕ್ರೋಶ: ತೊರೆಪಾಳ್ಯಗ್ರಾಮದ ಯುವಕನೊಬ್ಬ ಶಾಸಕರಿಗೆ ಕರೆ ಮಾಡಿ, ಸರ್‌ ನಾನು ನೆಲಮಂಗಲ ತಾಲೂಕಿನ ತೊರೆಪಾಳ್ಯ ಗ್ರಾಮದವನು. ನಮ್ಮ ಗ್ರಾಮದಲ್ಲಿ ರಸ್ತೆ ಸಮಸ್ಯೆ ನಿಮಗೆ ತಿಳಿದಿದೆ. ಸರಿ ಪಡಿಸಿ ಸರ್‌ ಎಂದು ಕೇಳಿರುವುದಕ್ಕೆ ಶಾಸಕ ಡಾ.ಕೆ. ಶ್ರೀನಿವಾಸಮೂರ್ತಿ ಪ್ರತಿಕ್ರಿಯಿಸಿ ಮಾಧ್ಯಮದಲ್ಲಿ ತೋರಿಸಿ ಸುದ್ದಿ ಮಾಡಿದ್ದಾರಲ್ಲ, ಅವರ ಕೈಯಲ್ಲೇ ಮಾಡಿಸಿಕೊಳ್ಳಿ, ಮಾಧ್ಯಮದವರೇ ಬಂದು ಮಾಡುತ್ತಾರೆ ಡೋಂಟ್‌ವರಿ ಎಂದು ಹೇಳಿ ಕರೆ ಕಟ್‌ ಮಾಡಿರುವ ಆಡಿಯೋ ಜಾಲ ತಾಣದಲ್ಲಿ ವೈರಲ್‌ ಆಗಿದೆ.

ಇದಕ್ಕೆ ಸಾಮಾಜಿಕ ಜಾಲತಾಣ ಸೇರಿದಂತೆ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದೆ. ಸಮಸ್ಯೆ ವರದಿ ಮಾಡುವುದು ಮಾಧ್ಯಮದ ಕರ್ತವ್ಯ, ಹೋರಾಟ ಮಾಡಿ ಸಮಸ್ಯೆ ಬಗೆಹರಿಸುವಂತೆ ಕೇಳುವುದು ಸಂಘಟನೆಗಳ ಕರ್ತವ್ಯ, ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವುದು ಜನಪ್ರತಿನಿಧಿಯ ಕರ್ತವ್ಯ.

ಆದರೆ ಮಾಧ್ಯಮದವರೇ ಮಾಡಿಸಲಿ ಎಂಬ ಶಾಸಕರ ಬೇಜವಾಬ್ದಾರಿಯ ಹೇಳಿಕೆ ಸರಿಯಲ್ಲ, ಶಾಸಕರೇ ನಿಮ್ಮ ಕೈನಲ್ಲಿ ಆಗಲ್ಲ ಅಂದ್ರೆ ಹೇಳಿ ನಾವೇ ಭಿಕ್ಷೆಬೇಡಿ ರಸ್ತೆ ಮಾಡಿಸುತ್ತೇವೆ ಎಂದು ಕರ್ನಾಟಕ ಜನ ಸೈನ್ಯ, ಕರ್ನಾಟಕ ರಣಧೀರ ವೇದಿಕೆ ರಾಜ್ಯಾಧ್ಯಕ್ಷರು ಹಾಗೂ ರೈತಪರ ಸಂಘಟನೆಗಳು ಎಚ್ಚರಿಕೆ ನೀಡಿವೆ. ಮಾನವಿಯತೆ ಮರೆತ ಶಾಸಕ ಗ್ರಾಮದ ಜನರ ಮನವಿಗೆ ಸ್ಪಂದಿಸಿ ಸ್ಥಳ ಪರಿಶೀಲನೆ ಮಾಡಿ ಕಾಮಗಾರಿ ಮಾಡಬೇಕಾಗಿದ್ದ ಶಾಸಕರು ದರ್ಪದ ಮಾತುಗಳನ್ನು ಹೇಳುವ ಜತೆ ಕಾಮಗಾರಿ ಮಾಡಲು ಮುಂದಾಗದಿ ರುವುದು ದುರಂತವೇ ಸರಿ. ಅಧಿಕಾರಕ್ಕಾಗಿ ಮತ ಕೇಳಲು ಬರುವ ಶಾಸಕರು ಸಮಸ್ಯೆಗಳಿಗೆ ಬೆನ್ನು ತೋರಿಸಿರೋದಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.