ಶೀಘ್ರ ಮುಖ್ಯರಸ್ತೆ ಅಗಲೀಕರಣ


Team Udayavani, Sep 13, 2018, 1:05 PM IST

blore-g-2.jpg

ದೊಡ್ಡಬಳ್ಳಾಪುರ: ಬೆಳೆಯುತ್ತಿರುವ ನಗರಕ್ಕೆ ಪೂರಕವಾಗಿ ನಗರದ ಹೊರವಲಯದ ರಸ್ತೆಗಳು ಅಗಲೀಕರಣವಾಗುತ್ತಿದ್ದು, ನಗರದ ಮುಖ್ಯ ರಸ್ತೆಗಳ ಅಗಲೀಕರಣಕ್ಕೆ ಶೀಘ್ರ ಚಾಲನೆ ನೀಡಲಾಗುವುದು ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದ್ದಾರೆ.

ನಗರದ ಜಯಚಾಮರಾಜೇಂದ್ರ ವೃತ್ತದ ಬಳಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ರಂಗಪ್ಪ
ವೃತ್ತದಿಂದ ಗಾಂಧಿ ಚೌಕದವರೆಗೆ 1.5 ಕೋಟಿ ರೂ. ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ನಗರದಲ್ಲಿ ರಸ್ತೆ ಅಗಲೀಕರಣಕ್ಕೆ ಅನುದಾನ ಒದಗಿಸುವ ಕುರಿತು ಸರ್ಕಾರದ ಗಮನಕ್ಕೆ ತರಲಾಗಿದೆ. ಇದಕ್ಕೆ ನಗರಸಭೆ ಅಗತ್ಯ ಕ್ರಮ ಕೈಗೊಳ್ಳಬೇಕಿದ್ದು, ನಾಗರಿಕರ ಸಹಕಾರ ಸಹ ಅಗತ್ಯವಾಗಿದೆ ಎಂದು ತಿಳಿಸಿದರು.
 
 ನಗರದ ಖಾಸ್‌ಬಾಗ್‌ ರೇಲ್ವೆ ಅಂಡರ್‌ ಬ್ರಿಡ್ಜ್ 12 ಕೋಟಿ ರೂ., ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ವಾಹನಗಳ ಸುಗಮ
ಸಂಚಾರಕ್ಕೆ ಅನುಕೂಲವಾಗಲಿದೆ. ಇದರೊಂದಿಗೆ ನಗರದ ಡಿ.ಕ್ರಾಸ್‌ ವೃತ್ತದ ಬಳಿ ಸ್ಕೈವಾಕ್‌ ನಿರ್ಮಾಣ ಸೇರಿ ಬೆಂಗಳೂರು ಹಿಂದೂಪುರ ಹೆದ್ದಾರಿಯಲ್ಲಿ ಅಗತ್ಯ ಸರ್ವಿಸ್‌ ರಸ್ತೆ, ಬೆಲ್‌ ಮೌತ್‌ ರಸ್ತೆ ಮೊದಲಾದ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ನಗರಸಭೆ ಅಧ್ಯಕ್ಷ ಟಿ.ಎನ್‌.ಪ್ರಭುದೇವ್‌, ರಸ್ತೆ ಅಗಲೀಕರಣಕ್ಕೆ ಮರ ಕಡಿಯುವುದು ಅನಿವಾರ್ಯ. ಶಾಸಕರು ಕೈಗೊಂಡಿರುವ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ತಮ್ಮ ಸಹಕಾರವಿದೆ. ರಸ್ತೆ ಅಗಲೀಕರಣಕ್ಕೆ ನಾಗರಿಕರು ಸಹಕರಿಸಬೇಕೆಂದರು.  ನಗರಸಭೆ ಉಪಾಧ್ಯಕ್ಷೆ ಜಯಲಕ್ಷ್ಮಿ, ಪೌರಾಯುಕ್ತ ಆರ್‌.ಮಂಜುನಾಥ್‌, ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ ಮಂಜುನಾಥ್‌, ಸುಹಾಸ್‌, ನಗರ ಸಭಾ ಸದಸ್ಯರಾದ ಶಿವಕುಮಾರ್‌, ಭಾಗ್ಯ ಚೌಡರಾಜ್‌, ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆ.ಜಿ.ಅಶೋಕ್‌, ಕಾರ್ಯದರ್ಶಿ ಯೋಗ ನಟರಾಜ್‌, ಮುಖಂಡರಾದ ಸೋಮರುದ್ರಶರ್ಮ ಮತ್ತಿತರರಿದ್ದರು.

 ಕೊಳವೆಬಾವಿ ಕಾಮಗಾರಿಗೆ ಚಾಲನೆ: ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಗರದ ವಿವಿಧ ಕೊಳಗೇರಿಗಳಿಗೆ ಸುಮಾರು 60 ಲಕ್ಷ ರೂ., ವೆಚ್ಚದ ಕಾಂಕ್ರಿಟ್‌ ರಸ್ತೆ ಕಾಮಗಾರಿ ಹಾಗೂ ಕೊಳವೆಬಾವಿಗಳಿಗೆ ನಗರದ ವೀರಭದ್ರನ ಪಾಳ್ಯದಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಚಾಲನೆ ನೀಡಿದರು. ನಗರಸಭೆ ಅಧ್ಯಕ್ಷ ತ.ನ.ಪ್ರಭುದೇವ್‌, ನಗರಸಭೆ ಸದಸ್ಯೆ ಭಾಗ್ಯ ಚೌಡರಾಜ್‌, ನಾಮಿನಿ ಸದಸ್ಯ ಅಂಜನಮೂರ್ತಿ ಇದ್ದರು.

ಡಿ.ಕ್ರಾಸ್‌ ವೃತ್ತದಿಂದ ಗಾಂಧಿ ವೃತ್ತದವರೆಗೆ ರಸ್ತೆ ಅಗಲೀಕರಣ ಕಾಮಗಾರಿ ಬಹುತೇಕ ಮುಗಿದಿದ್ದು,
ಇಲ್ಲಿ ಸ್ವಲ್ಪ ದೂರ ಅಡಚಣೆಯಾಗಿದ್ದು, ಇದನ್ನು ಇತ್ಯರ್ಥ ಪಡಿಸಿ, ಕಾಮಗಾರಿ ಮುಂದುವರಿಸಲಾಗುವುದು.
 ಟಿ.ವೆಂಕಟರಮಣಯ್ಯ, ಶಾಸಕ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.