ದುರಸ್ತಿ ಆಗದ ರೈಲ್ವೆ ಅಂಡರ್‌ಪಾಸ್‌: ಪರದಾಟ


Team Udayavani, Jan 24, 2022, 3:03 PM IST

ದುರಸ್ತಿ ಆಗದ ರೈಲ್ವೆ ಅಂಡರ್‌ಪಾಸ್‌: ಪರದಾಟ

ದೊಡ್ಡಬಳ್ಳಾಪುರ: ನಗರದ ಖಾಸ್‌ಬಾಗ್‌ನಲ್ಲಿನ ರೈಲ್ವೆ ಅಂಡರ್‌ಪಾಸ್‌ನಲ್ಲಿ ಗುಂಡಿ ಬಿದ್ದು, ರಸ್ತೆ ಕಿರಿದಾಗಿರುವುದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮತ್ತೂಂದು ಅಂಡರ್‌ಪಾಸ್‌ ನಿರ್ಮಾಣದ ಕಾಮಗಾರಿ ಸಹ ನನೆಗುದಿಗೆಬಿದ್ದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಹಳೆಯ ರೈಲ್ವೆ ಅಂಡರ್‌ಪಾಸ್‌: ಸ್ವಾತಂತ್ರ್ಯಪೂರ್ವದಲ್ಲಿ ಬೆಂಗಳೂರಿನಿಂದ ದೊಡ್ಡಬಳ್ಳಾಪುರಮಾರ್ಗವಾಗಿ ರೈಲ್ವೆ ಹಳಿ ಹಾಕಿದ್ದ ಸಂದರ್ಭದಲ್ಲಿನಿರ್ಮಾಣವಾಗಿರುವ ರೈಲ್ವೆ ಅಂಡರ್‌ಪಾಸ್‌ನಲ್ಲಿ ನಿತ್ಯ ಸಹಸ್ರಾರು ವಾಹನಗಳು ಸಂಚರಿಸುತ್ತಿವೆ. 20 ಅಡಿ ಅಗಲದ ಈ ರೈಲ್ವೆ ಅಂಡರ್‌ಪಾಸ್‌ನಲ್ಲಿಬೆಂಗಳೂರು ಸೇರಿ ನಗರದ ಹೊರಭಾಗದಕೈಗಾರಿಕಾ ಪ್ರದೇಶಕ್ಕೆ ಹೋಗುವ ಕಾರ್ಮಿಕರುಹೋಗಿ ಬರುತ್ತಿದ್ದಾರೆ. ಹೀಗಾಗಿ ಒಂದಿಷ್ಟು ಸಮಯ ಕಾದು ನಿಂತಾದರೂ ಆಟೋ, ಬೈಕ್‌ಸೇರಿ ಎಲ್ಲಾ ವಾಹನಗಳು ಈ ಅಂಡರ್‌ಪಾಸ್‌ ಮೂಲಕವೇ ಸಂಚರಿಸಬೇಕಿದೆ.

ನಿತ್ಯ ಬೆಳಿಗ್ಗೆ ಹಾಗೂ ಸಂಜೆ ವೇಳೆ ಕೈಗಾರಿಕಾ ಪ್ರದೇಶಕ್ಕೆ ತೆರಳುವ ಹಾಗೂ ಕೆಲಸ ಮುಗಿಸಿ ಬರುವಕಾರ್ಮಿಕರು, ವಿವಿಧ ಉದ್ಯೋಗಿಗಳುಸಂಚರಿಸುವ ಈ ಮಾರ್ಗದಲ್ಲಿ ವಾಹನ ದಟ್ಟಣೆಹೆಚ್ಚಾಗಿ ರೈಲ್ವೆ ನಿಲ್ದಾಣದ ವೃತ್ತದ ಹೆದ್ದಾರಿಯಲ್ಲಿಯೂವಾಹನ ದಟ್ಟಣೆ ಸಾಮಾನ್ಯವಾಗಿದೆ.

ಹೊಸ ರೈಲ್ವೆ ಅಂಡರ್‌ಪಾಸ್‌ ನಿರ್ಮಾಣಕ್ಕೆ ಗ್ರಹಣ: ರೈಲ್ವೆ ಅಂಡರ್‌ಪಾಸ್‌ ದುರಸ್ತಿ ಮಾಡುವಂತೆ ಹಾಗೂ ಮತ್ತೂಂದು ಅಂಡರ್‌ಪಾಸ್‌ ನಿರ್ಮಿಸುವಂತೆ ಒತ್ತಾಯಿಸುತ್ತಿದ್ದರೂಮತ್ತೂಂದು ಅಂಡರ್‌ಪಾಸ್‌ ನಿರ್ಮಾಣ ಮಾತ್ರಆಗಿಲ್ಲ. ಈಗ ಇರುವ ಅಂಡರ್‌ಪಾಸ್‌ ಜೊತೆಗೆಮತ್ತೂಂದು ಕೆಳಸೇತುವೆ ನಿರ್ಮಿಸಲು ಕಾಮಗಾರಿಆರಂಭವಾಗಿ ಎರಡು ವರ್ಷ ಕಳೆದಿದೆ. ಕಾಮಗಾರಿ ಮಾತ್ರ ಮುಕ್ತಾಯವಾಗಿಯೇ ಇಲ್ಲ.

ಕಾಮಗಾರಿ ಮುಗಿಯುತ್ತಲೇ ಇಲ್ಲ: ಜನರುಕಾಮಗಾರಿ ಇಂದು ಮುಗಿಯುತ್ತದೆ, ನಾಳೆಮುಗಿಯುತ್ತದೆ ಅಂದು ಕೊಂಡೇ ಹಾಳಾಗಿರುವ,ಕಿರಿದಾಗಿರುವ ರೈಲ್ವೆ ಅಂಡರ್‌ಪಾಸ್‌ನಲ್ಲಿಯೇಸಂಚರಿಸುತ್ತಿದ್ದಾರೆ. ಈಗ ಹೊಸದಾಗಿನಿರ್ಮಾಣವಾಗುತ್ತಿರುವ ಅಂಡರ್‌ಪಾಸ್‌ನಸಮೀಪ ಹೊಸ ರೈಲ್ವೆ ಹಳಿ ಹಾಕುತ್ತಿರುವ ಜಮೀನುಖಾಸಗಿ ವ್ಯಕ್ತಿಗಳಿಗೆ ಸೇರಿದ್ದು ಎನ್ನಲಾಗಿದ್ದು,ಕಾಮಗಾರಿ ಆರಂಭವಾದ ಕೆಲ ದಿನಗಳ ನಂತರ ಅಂಡರ್ಪಾಸ್‌ ನಿರ್ಮಿಸುತ್ತಿರುವ ಜಮೀನುನಮ್ಮದು ಎಂದು ಖಾಸಗಿ ವ್ಯಕ್ತಿಗಳು ಸೂಕ್ತ ದಾಖಲೆಗಳನ್ನು ನೀಡಿ ಅಂಡರ್‌ಪಾಸ್‌ ಹಾಗೂ ರೈಲ್ವೆ ಹಳಿ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದರು.

ಇದಾಗಿ ಒಂದೂವರೆ ವರ್ಷ ಕಳೆದರೂಇಲ್ಲಿಯವರೆಗೂ ಅಂಡರ್‌ಪಾಸ್‌ ನಿರ್ಮಾಣ ಕಾಮಗಾರಿ ಕೆಲಸ ಆರಂಭವಾಗಿಲ್ಲ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಗಂಭೀರ ಕ್ರಮ ವಹಿಸುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಪರ್ಯಾಯ ರಸ್ತೆ ಅಗತ್ಯ: ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗುತ್ತಿರುವ ಈ ದಿನಗಳಲ್ಲಿ ಪ್ರತ್ಯೇಕರೈಲ್ವೆ ಅಂಡರ್‌ಪಾಸ್‌ ನಿರ್ಮಾಣದ ಜೊತೆಗೆ ಈಗ ಖಾಸ್‌ಬಾಗ್‌ ಮೂಲಕ ಬೆಂಗಳೂರು ಹೆದ್ದಾರಿಗೆಸೇರುವ ಹಳೇ ಮಧುಗಿರಿ ರಸ್ತೆಯನ್ನುಅಭಿವೃದ್ಧಿಪಡಿಸಿದರೆ ಭವಿಷ್ಯದ ದಿನಗಳಲ್ಲೂವಾಹನ ಸಂಚಾರ ಸುಗುಮವಾಗಲಿದೆ. ಮೊದಲುಇಲ್ಲಿ ಹದಗೆಟ್ಟ ರಸ್ತೆಯನ್ನು ಸರಿಪಡಿಸಬೇಕಿದೆ. ರಸ್ತೆಅವ್ಯವಸ್ಥೆ ಬಗ್ಗೆ ಹೆಚ್ಚಿನ ದೂರುಗಳು ಬರುತ್ತಿದ್ದಹಿನ್ನೆಲೆಯಲ್ಲಿ ನವೆಂಬರ್‌ ತಿಂಗಳಿನಲ್ಲಿ ರಸ್ತೆಹಳ್ಳಗಳನ್ನು ರೆಡಿ ಕಾಂಕ್ರೀಟ್‌ ಹಾಕಿಮುಚ್ಚಲಾಯಿತು. ಆದರೆ, ಈವರೆಗೂ ಯಾವುದೇ ಶಾಶ್ವತ ಕಾಮಗಾರಿ ನಡೆದಿಲ್ಲ ಎನ್ನುತ್ತಾರೆ ಶ್ರೀನಗರ ಮನು.

 

ಇತ್ತೀಚೆಗಷ್ಟೆ ಸಚಿವ ವಿ.ಸೋಮಣ್ಣ ಅವರು ದೇವನಹಳ್ಳಿ – ಬೆಂಗಳೂರು ನಡುವಣ ರೈಲ್ವೆ ಅಂಡರ್‌ಪಾಸ್‌ಕಾಮಗಾರಿಗಳ ಪರಿಶೀಲನೆ ನಡೆಸಿದ್ದವೇಳೆ ಗಮನಕ್ಕೆ ತರಲಾಗಿದೆ. ಅಂಡರ್‌ಪಾಸ್‌ ಸಮೀಪದ ಜಮೀನಿನವಿವಾದವನ್ನು ಶೀಘ್ರವೇ ಬಗೆಹರಿಸಿ,ರೈಲ್ವೆ ಅಧಿಕಾರಿಗಳೊಂದಿಗೆ ಮಾತನಾಡಿಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. – ಟಿ.ವೆಂಕಟರಮಣಯ್ಯ, ಶಾಸಕ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.