ಮಳೆ ನೀರು ಕೊಯ್ಲು ಕಡ್ಡಾಯ

ಜಿಲ್ಲಾಧಿಕಾರಿ ಸೂಚನೆ ಪಾಲಿಸದಿದ್ದರೆ ಕಟ್ಟಡಗಳ ಪರವಾನಗಿ ರದ್ದು: ಪೌರಾಯುಕ್ತ ಮಂಜುನಾಥ್‌

Team Udayavani, May 27, 2019, 12:43 PM IST

br-tdy-3..

ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಮಂದಿರ ಹಾಗೂ ಚಿತ್ರಮಂದಿರಗಳ ಮಾಲಿಕರ ಸಭೆಯಲ್ಲಿ ನಗರಸಭೆ ಪೌರಾಯುಕ್ತ ಆರ್‌.ಮಂಜುನಾಥ್‌ ಮಾತನಾಡಿದರು.

ದೊಡ್ಡಬಳ್ಳಾಪುರ: ನಗರಸಭೆ ನಿಗದಿಪಡಿಸಿರುವ ಹೆಚ್ಚಿನ ಅಳತೆಯ ಕಟ್ಟಡಗಳ ಮಾಲಿಕರು ಮಳೆ ನೀರು ಕೊಯ್ಲು ವ್ಯವಸ್ಥೆ ಮಾಡಿಕೊಳ್ಳದಿದ್ದರೆ ಜಿಲ್ಲಾಧಿಕಾರಿಗಳ ಸೂಚನೆಯಂತೆ ಕಟ್ಟಡಗಳ ಪರವಾನಗಿ ರದ್ದುಪಡಿಸಲು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ನಗರಸಭೆಆರ್‌.ಮಂಜುನಾಥ್‌ ಎಚ್ಚರಿಕೆ ನೀಡಿದರು.

ನಗರಸಭೆ ಸಭಾಂಗಣದಲ್ಲಿ ನಡೆದ ಕಲ್ಯಾಣ ಮಂದಿರ, ಚಿತ್ರಮಂದಿರಗಳ ಮಾಲಿಕರ ಸಭೆಯಲ್ಲಿ ಅವರು ಮಾತನಾಡಿದರು.

ಕಟ್ಟಡದ ಪರವಾನಗಿ ರದ್ದು: ನಗರದಲ್ಲಿ ಪ್ರಮುಖ ಕಲ್ಯಾಣ ಮಂದಿರ, ಚಿತ್ರಮಂದಿರ ಗಳು ಮಳೆ ನೀರು ಕೊಯ್ಲು ವ್ಯವಸ್ಥೆ ಮಾಡಿಕೊಂಡಿರುವ ಕುರಿತು ಸಭೆಯಲ್ಲಿ ಮಾಹಿತಿ ನೀಡಿದ ಅವರು, ಮಳೆ ನೀರು ಕೊಯ್ಲು ವ್ಯವಸ್ಥೆ ಮಾಡಿಕೊಳ್ಳುವಂತೆ ಕಲ್ಯಾಣ ಮಂದಿರ, ಚಿತ್ರಮಂದಿರಗಳ ಮಾಲಿಕರಿಗೆ ಈಗಾಗಲೇ ನೊಧೀಟಿಸ್‌ಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳ ಸೂಚನೆ ಪಾಲಿಸಿ: ನೊಧೀಟಿಸ್‌ ನೀಡಿದ್ದರೂ ಇನ್ನೂ ಕೆಲವು ಕಟ್ಟಡಗಳ ಮಾಲಿಕರು ಮಳೆ ನೀರು ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಂಡಿಲ್ಲ. ಕೆಲವು ಕಟ್ಟಡಗಳ ಮಾಲಿಕರು ಕಟ್ಟಡದ ಅಳತೆಗೆ ಅನುಗುಣವಾಗಿ ವ್ಯವಸ್ಥೆ ಮಾಡಿಕೊಳ್ಳದಿರುವುದು ಕಂಡು ಬಂದಿದೆ. ಆದ್ದರಿಂದ, ಅದನ್ನು ಸರಿಪಡಿಸಿಕೊಳ್ಳುವಂತೆ ಸೂಚಿಸಿದರು.

ಕಟ್ಟಡದ ಪರವಾನಗಿರದ್ದು: ಮಳೆ ನೀರು ಕೊಯ್ಲು ವ್ಯವಸ್ಥೆ ಅಳವಡಿಸಿಕೊಳ್ಳದೇ ಇರುವವರು ಶೀಘ್ರದಲ್ಲಿಯೇ ಅಳವಡಿಸಿಕೊಳ್ಳ ದಿದ್ದರೆ ಅಂತಹವರ ಕಟ್ಟಡದ ಪರವಾನಗಿರದ್ದು ಮಾಡಲಾಗುವುದು ಎಂದು ಖಡಕ್‌ ಎಚ್ಚರಿಕೆ ನೀಡಿದರು.

ಆಷಾಢದಲ್ಲಿ ಮಾಡಿಸುತ್ತೇವೆ: ಸಭೆಯಲ್ಲಿ ಹಾಜರಿದ್ದ ಕಲ್ಯಾಣ ಮಂದಿರಗಳ ಮಾಲಿಕರು ಮಾತನಾಡಿ, ಈಗ ಕಲ್ಯಾಣ ಮಂದಿರಗಳಲ್ಲಿ ಮದುವೆ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ. ಇವು ಮೂರ್‍ನಾಲ್ಕು ತಿಂಗಳ ಹಿಂದೆಯೇ ಬುಕಿಂಗ್‌ ಆಗಿರುವುದರಿಂದ ಕಟ್ಟಡದ ಕೆಲಸ ಮಾಡಿಸಲು ಅನಾನುಕೂಲವಾಗುತ್ತದೆ. ಜುಲೈ ತಿಂಗಳ ಆಷಾಢ ಮಾಸದಲ್ಲಿ ಸಾಮಾನ್ಯವಾಗಿ ಶುಭ ಕಾರ್ಯಗಳಿರುವುದಿಲ್ಲ. ಆಗ ಸಂಪ್‌ ನಿರ್ಮಿಸಲು ಹಾಗೂ ಕಟ್ಟಡದ ದುರಸ್ತಿ ಮಾಡಿಸಲು ಅನುಕೂಲವಾಗುತ್ತದೆ. ಅಲ್ಲಿಯ ವರೆಗೆ ಅವಕಾಶ ನೀಡಬೇಕು ಎಂದು ಅವರು ಮನವಿ ಮಾಡಿದರು.

ಕೆಲವು ಕಟ್ಟಡಗಳ ಮಾಲಿಕರು ಸಂಪ್‌ ನಿರ್ಮಿಸಲು ಸ್ಥಳಾವಕಾಶದ ಕೊರತೆ, ವಾಸ್ತು ದೋಷದ ಸಮಸ್ಯೆಗಳನ್ನು ಮುಂದಿಟ್ಟರು. ದೊಡ್ಡ ಕಟ್ಟಡಗಳಲ್ಲಿ ಶೀಟ್ಗಳ ಸಮೀಪ ಸಾರಿವೆ ಕಟ್ಟಲು ಸಹ ತಾಂತ್ರಿಕ ಸಮಸ್ಯೆಯಾಗುತ್ತದೆ ಎಂದು ಸಮಸ್ಯೆಗಳನ್ನು ಹೇಳಿಕೊಂಡರು.

ಈ ಕುರಿತು ಪ್ರತಿಕ್ರಿಯಿಸಿದ ಪೌರಾಯುಕ್ತರು ಈಗಾಗಲೇ ಜಿಲ್ಲೆಯ ನಾಲ್ಕು ತಾಲೂಕಿನ ನಗರಸಭೆ ವ್ಯಾಪ್ತಿಯಲ್ಲೂ 30 x 40ಕ್ಕಿಂತಲೂ ಹೆಚ್ಚಿನ ವಿಸ್ತೀರ್ಣ ಹೊಂದಿರುವ ಕಟ್ಟಡಗಳು, ಕೈಗಾರಿಕಾ ಪ್ರದೇಶದ ಕಟ್ಟಡ ಸೇರಿದಂತೆ ಎಲ್ಲರು ಸಹ ಮಳೆ ನೀರು ಸಂಗ್ರಹ ಮಾಡಿಕೊಳ್ಳುವಂತೆ ನೋಟಿಸ್‌ ನೀಡಿ ಸಭೆ ಗಳನ್ನು ನಡೆಸಲಾಗಿದೆ. ತೀರಾ ಅನಿವಾರ್ಯವಾದರೆ ಸಮಯಾವಕಾಶ ನೀಡಲಾಗುವುದು. ಆದರೆ, ಹೆಚ್ಚು ವಿಳಂಬ ಮಾಡದೇ ಮಳೆ ನೀರು ಸಂಗ್ರಹ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಕಲ್ಯಾಣ ಮಂದಿರ, ಚಿತ್ರ ಮಂದಿರಗಳ ಮಾಲಿಕರು ಹಾಗೂ ನಗರಸಭೆ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.