Ram mandir: ಶ್ರೀರಾಮ ವನವಾಸಕ್ಕೆ ಹಾದುಹೋಗಿದ್ದ ಸ್ಥಳ ನಮ್ಮೂರು ಆಗಿರುವುದೇ ಹೆಮ್ಮೆ
Team Udayavani, Jan 23, 2024, 1:04 PM IST
ನೆಲಮಂಗಲ: ಮರ್ಯಾದ ಪುರುಷೋತ್ತಮ ಶ್ರೀರಾಮ ವನವಾಸಕ್ಕೆ ತೆರಳಿದ್ದು ನಮ್ಮ ಗ್ರಾಮಗಳ ಮುಖಾಂತರ ಎಂಬ ಕಥೆಯನ್ನು ಹಿರಿಯರು ನಮಗೆ ತಿಳಿಸಿದ್ದಾರೆ. ಈ ವಿಚಾರ ನಮಗೆಲ್ಲಾ ಹೆಮ್ಮೆ ಎಂದು ಶ್ರೀಆಂಜನೇಯ ಸ್ವಾಮಿ ಸೇವಾ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷ ಹನುಮಂತರಾಯಪ್ಪ ಸಂತಸ ವ್ಯಕ್ತಪಡಿಸಿದರು.
ಅಯೋಧ್ಯೆಯಲ್ಲಿ ಶ್ರೀ ರಾಮನ ವಿಗ್ರಹ ಪ್ರತಿಷ್ಠಾಪನೆ ಹಿನ್ನೆಲೆ ತಾಲೂಕಿನ ಕುಂಟಬೊಮ್ಮನಹಳ್ಳಿಯಲ್ಲಿ ಗ್ರಾಮದ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ, ಅಲಂಕಾರ, ಪ್ರಸಾದ ವಿತರಣೆ ಇನ್ನಿತರ ಧಾರ್ಮಿಕ ಕಾರ್ಯಕ್ರಮದಲ್ಲಿ ನೇತೃತ್ವ ವಹಿಸಿ ಮಾತನಾಡಿದರು.
ಶ್ರೀ ರಾಮ, ಲಕ್ಷ್ಮಣ, ಸೀತಾ ಮಾತೆ ಸಮೇತ ವನವಾಸಕ್ಕೆ ತೆರಳುವಾಗ, ತುಮಕೂರಿನ ದೇವರಾಯನದುರ್ಗ ಬಳಿಯ ನಾಮದ ಚಿಲುಮೆಯಲ್ಲಿ, ಜಲಪಾನ ಮಾಡಿದ್ದರು. ಇಂದು ಗ್ರಾಮದ ಎಲ್ಲರೂ ಸೇರಿ ಶ್ರೀರಾಮನ ಧ್ಯಾನ ಮಾಡಿದ್ದೇವೆ. ನಮ್ಮ ಗ್ರಾಮದ ಆಂಜನೇಯ ಸ್ವಾಮಿ ರಾಮನ ಭಂಟ, ಆದ್ದರಿಂದ ಪೂಜೆ ಸಲ್ಲಿಸಿದ್ದೇವೆ, ಕಳೆದ 4 ವರ್ಷಗಳ ಹಿಂದೆ ದೇವಾಲಯ ಜೀರ್ಣೋದ್ಧಾರಗೊಂಡಿತು, ಮೇ 29 ರಂದು 5ನೇ ವರ್ಷದ ವಾರ್ಷಿಕೋತ್ಸವ ನಡೆಸುತ್ತೇವೆ ಎಂದರು.ವಿಜ್ಞಾನಿ ಕೆ.ಎನ್ .ತಿಮ್ಮಯ್ಯ, ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಹನುಮಂತರಾಜು, ಕಾರ್ಯದರ್ಶಿ ಟಿ. ಹನುಮಂತರಾಜು, ನಿವೃತ್ತ ಶಿಕ್ಷಕ ರೇಣುಕಾರಾಧ್ಯ, ಶಿವಕುಮಾರಯ್ಯ, ನಿವೃತ್ತ ಪ್ರಾಂಶುಪಾಲ ಚೌಡಯ್ಯ, ಗ್ರಾಪಂ ಸದಸ್ಯ ಹಾಗೂ ಮಾಜಿ ಉಪಾಧ್ಯಕ್ಷ ನರಸಿಂಹಮೂರ್ತಿ, ಎಸ್ಎಲ್ಆರ್ ಶಾಲೆ ಮುಖ್ಯಸ್ಥ ನರಸಿಂಹಯ್ಯ, ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ