25 ವರ್ಷದಿಂದ ಉಚಿತ ಯೋಗ ಶಿಕ್ಷಣ ನೀಡುತ್ತಿರುವ ರಮಾ


Team Udayavani, Jun 21, 2023, 2:46 PM IST

25 ವರ್ಷದಿಂದ ಉಚಿತ ಯೋಗ ಶಿಕ್ಷಣ ನೀಡುತ್ತಿರುವ ರಮಾ

ವಿಜಯಪುರ: ಯೋಗ ಮಾಡಿದರೆ ಅನಾರೋಗ್ಯ ದೂರ ಎಂಬ ಮಾತಿದೆ. ಇಲ್ಲೊಬ್ಬ ಸಾಧಕಿಯೊಬ್ಬರು ಸುಮಾರು 25 ವರ್ಷಗಳಿಂದಲೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉಚಿತವಾಗಿ ಯೋಗ ಶಿಕ್ಷಣವನ್ನು ಹೇಳಿ ಕೊಡುತ್ತಿದ್ದು ಪ್ರಶಂಸೆಗೂ ಪಾತ್ರ ವಾಗಿದ್ದಾರೆ.

ನಗರದ 11ನೇ ವಾರ್ಡ್‌ನ ಧರ್ಮ ರಾಯ ಸ್ವಾಮಿ ದೇವಾಲಯ ರ ಸ್ತೆ ನಿವಾಸಿ ರಮಾ ನಟರಾಜ್ ಯೋಗ  ‌ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಮಾರು 62 ವರ್ಷ ವಯಸ್ಸಿನವರಾ ಗಿರುವ ಇವರು, ಈಗಲೂ ಲವ ಲವಿಕೆಯಿಂದ ಯೋಗಾಭ್ಯಾಸದ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ.

“ಯೋಗಾಭ್ಯಾಸ ಮಾಡಿದಷ್ಟೂ ಉತ್ತಮ ಆರೋಗ್ಯ ಲಭಿಸುತ್ತದೆ. ಧ್ಯಾನದಿಂದ ಮನಃ ಶಾಂತಿಯೂ ಸಿಗಲಿದೆ’ ಎನ್ನುವ ಯೋಗ ಶಿಕ್ಷಕಿ ರಮಕ್ಕ, ಮನೋ ನಿಯಂತ್ರಣ, ಇಂದ್ರಿಯ ನಿಗ್ರಹ, ಅಧಿಕ ಕಾರ್ಯೋತ್ಸಾಹ ಮೊದಲಾದ ಸಾಮರ್ಥ್ಯಗಳನ್ನು ಬೆಳೆಸಿಕೊಳ್ಳಬಹುದು ಎನ್ನುತ್ತಾರೆ.

ಗವಿಯಲ್ಲಿ ವಾಸ: ಸಿದ್ಧರಬೆಟ್ಟದಲ್ಲಿ 5 ದಿನ ಕಚ್ಚಾ ಆಹಾರದ ಸೇವನೆ, ಗವಿಯಲ್ಲಿ ವಾಸ, ತಣ್ಣೀರಿನ ಸ್ನಾನ, 5 ದಿನ ಸಂಪೂರ್ಣ ಮೌನಾಚರಣೆ ಹೀಗೆ ಪಡೆದ ಶಿಕ್ಷಣವನ್ನು ಬೇರೆ ಬೇರೆ ಊರುಗಳಿಗೆ ಹೋಗಿ ಶಿಕ್ಷಣ ನೀಡುತ್ತಾರೆ. ಈ ವೇಳೆ, ಊರಿನ ಮುಖಂಡರು, ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಪ್ರಯಾಣ ಭತ್ಯೆ ಮತ್ತು ಪ್ರಸಾದದ ವ್ಯವಸ್ಥೆ ಮಾಡಿಕೊಳ್ಳುತ್ತಾರೆ. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಮುಖ್ಯ ಕೇಂದ್ರ ತುಮಕೂರಿನಲ್ಲಿ 50 ವರ್ಷದಿಂದ ಇದ್ದು ಶ್ರೀ ರಾಮಸ್ವಾಮಿ ಅಣ್ಣನವರು ಸಾವಿರಾರು ಜನರನ್ನು ಯೋಗ ಶಿಕ್ಷಕರನ್ನಾಗಿ ತಯಾರು ಮಾಡಿದ್ದಾರೆ. ಹಾಗೆಯೇ ಬಿಕೆಎಸ್‌ ಅಯ್ಯಂಗಾರ್‌ ಅವರು ನಮಗೆ 2 ಬಾರಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಶಿಬಿರ ತೆಗೆದುಕೊಂಡಿದ್ದರು. ಯೋಗದಲ್ಲಿ ಸಾಧನೆ ಮಾಡಿದ ಓಂಕಾರ್‌, ಮುರಳೀಧರ್‌, ರಾಘವೇಂದ್ರ ಶೆಣೈ ಇವರೊಂದಿಗೆ ಯೋಗ ಶಿಬಿರಗಳಲ್ಲಿ ಭಾಗವಹಿಸುವುದು ನಿಜಕ್ಕೂ ಉತ್ತಮ ಅನುಭವ ಹಾಗೂ ನಮಗೆ ಮತ್ತಷ್ಟು ಉತ್ತೇಜನ ನೀಡುತ್ತದೆ ಎಂದು ತಿಳಿಸಿದ್ದಾರೆ.

ಯೋಗ ಶಿಕ್ಷ ಕರಾಗಲು ಬಯಸಿದರೆ ಮಾರ್ಗದರ್ಶನವನ್ನೂ ನೀಡುತ್ತಾರೆ : ಯೋಗ ಶಿಕ್ಷಕಿಯಾಗಿ ರಾಯಚೂರು, ದಾವಣಗೆರೆ, ತುಮಕೂರು, ಮೈಸೂರು, ಹುಬ್ಬಳ್ಳಿ, ದೇವನಹಳ್ಳಿ, ದೊಡ್ಡಬಳ್ಳಾಪುರ ಹೀಗೆ ಸುಮಾರು 20 ಜಿಲ್ಲೆ ಸೇರಿ ತಾಲೂ ಕುಗಳಲ್ಲಿಯೂ ಯೋಗ ಶಿಕ್ಷಕಿಯಾಗಿ ರಮಕ್ಕ ಉಚಿತ ಸೇವೆ ಸಲ್ಲಿಸಿದ್ದಾರೆ. ಸನ್ಮಾನ, ಅಭಿನಂದನೆ ಸೇರಿ ಪ್ರಶಸ್ತಿಗಳಿಗೂ ಭಾಜನರಾಗಿದ್ದಾರೆ. ಶ್ರೀ ಪತಂಜಲಿ ಯೋಗ ಶಿಕ್ಷಣ ವತಿಯಿಂದ ನೀಡುವ ಯೋಗ ಶಿಕ್ಷಣ ಉಚಿತವಾಗಿ ಇರುವು ದರಿಂದ ವಿಜಯಪುರದಲ್ಲಿ 25 ವರ್ಷ ದಿಂದಲೂ ಸರ್ಕಾರಿ ಮಾದರಿ ಬಾಲಕಿ ಯರ ಶಾಲೆಯಲ್ಲಿ ಯೋಗಾಭ್ಯಾಸಕ್ಕೆ ಸ್ಥಳಾವಕಾಶ ನೀಡಿದ್ದಾರೆ. ಯೋಗಾ ಭ್ಯಾಸಕ್ಕೆ ಬರುವವರು ಶಿಕ್ಷಕರಾಗಲು ಬಯಸಿದರೆ ಅವರಿಗೆ ಪ್ರಾಂತ ಪ್ರಶಿಕ್ಷಣ ನೀಡಿ ಮುಂದಿನ ಹಂತ ಪೂರೈಸಿಕೊಳ್ಳಲು ಮಾರ್ಗದರ್ಶನವನ್ನೂ ನೀಡುತ್ತಾರೆ.

ಯೋಗ ಶಿಕ್ಷಣವನ್ನು ಹೀಗಳೆಯದಿರಿ… : ಯೋಗ ಶಿಕ್ಷಣ ಸಾಂಪ್ರದಾಯಿಕ ಶಿಕ್ಷಣವೆಂಬ ಕಾರಣದಿಂದ ಅನೇಕರು ಹೀಗಳೆ ಯುವುದು ಉಂಟು. ಆದರೆ, ಯೋಗದ ಮಹತ್ವ ಅರಿತ ಅನೇಕ ದೇಶಗಳು ಯೋಗ ಶಿಕ್ಷಣವನ್ನು ತಮ್ಮ ನೆಲದಲ್ಲಿ ಅಳವಡಿಸಿಕೊಂಡಿವೆ. ಇಂದು ಭಾರತ ಅನೇಕ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಯೋಗ ಶಿಕ್ಷಣವನ್ನು ಕಡ್ಡಾಯಗೊಳಿಸಿದೆ. ಯೋಗಾಭ್ಯಾಸ ಮಾಡಿದರೆ, ಇಡೀ ದೇಶ ಎದುರಿಸುತ್ತಿರುವ ಅನೇಕ ನೈತಿಕ ಸವಾಲುಗಳನ್ನು ಎದುರಿಸಲು ಸಾಧ್ಯವೆಂದು ಯೋಗ ಶಿಕ್ಷಕಿ ರಮಾ ನಟರಾಜ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.