ರಂಜಾನ್‌: ಹಣ್ಣುಗಳಿಗೆ ಭಾರೀ ಬೇಡಿಕೆ; ಗ್ರಾಹಕರಿಗೆ ದುಬಾರಿಯಾದ ಹಣ್ಣುಗಳು

ಸರಕು ಸಾಗಾಣಿಕೆ ಮಾಡಿಕೊಂಡು ಬರಲು ದುಬಾರಿ ವೆಚ್ಚ ಭರಿಸಬೇಕಾಗಿದೆ

Team Udayavani, Apr 21, 2022, 5:49 PM IST

ರಂಜಾನ್‌: ಹಣ್ಣುಗಳಿಗೆ ಭಾರೀ ಬೇಡಿಕೆ; ಗ್ರಾಹಕರಿಗೆ ದುಬಾರಿಯಾದ ಹಣ್ಣುಗಳು

ದೇವನಹಳ್ಳಿ: ಮುಸ್ಲಿಮರ ಪವಿತ್ರ ಹಬ್ಬವಾದ ರಂಜಾನ್‌ ಒಂದು ತಿಂಗಳು ಉಪವಾಸ ಇರುವುದರಿಂದ ಹಣ್ಣು-ಹಂಪಲು ತಿನ್ನುವುದರ ಮೂಲಕ ಉಪವಾಸ ಬಿಡುವುದರಿಂದ ಜಿಲ್ಲಾದ್ಯಂತ ಹಣ್ಣುಗಳಿಗೆ ಎಲ್ಲಿಲ್ಲದ ಬೇಡಿಕೆ ಹೆಚ್ಚಾಗಿದೆ. ಗ್ರಾಹಕರು ದುಬಾರಿ ಹಣ ಕೊಟ್ಟು ಹಣ್ಣುಗಳನ್ನು ಖರೀದಿಸುತ್ತಿದ್ದಾರೆ.

ರಂಜಾನ್‌ ತಿಂಗಳಿನಲ್ಲಿ ಮುಸ್ಲಿಮರು ಒಂದು ತಿಂಗಳು ಬೆಳಗ್ಗೆ ಊಟ ಮಾಡಿದರೆ, ಸಂಜೆಯ ವರೆಗೆ ನೀರು ಸಹ ಕುಡಿಯದೆ ಉಪವಾಸ ಇರುವುದರಿಂದ ಸಂಜೆ ಹಣ್ಣು, ಜ್ಯೂಸ್‌ ಕುಡಿಯುವುದರ ಮೂಲಕ ಉಪವಾಸ ವನ್ನು ಬಿಡಲಿದ್ದಾರೆ. ರಂಜಾನ್‌ ಉಪವಾಸ ಪ್ರಾರಂಭವಾದಾಗಿನಿಂದಲೂ ಮುಗಿಯು ವವರೆಗೂ ಒಂದು ತಿಂಗಳು ಹಣ್ಣುಗಳ ಬೆಲೆ ಏರಿಕೆ ಹೆಚ್ಚಾಗಿ ರುತ್ತದೆ. ಒಂದೊಂದು ಹಣ್ಣುಗಳು ಒಂದೊಂದು ರೀತಿ ಬೆಲೆ ಏರಿಕೆ ಆಗಿದೆ. ಮುಸ್ಲಿಮರು ಒಂದು ಬಾರಿಗೆ 500 ರಿಂದ 600 ರೂ. ಬೆಲೆಯ ಹಣ್ಣು ಖರೀದಿ ಸುತ್ತಾರೆ.ಕರ್ಜೂರ, ಹೆಚ್ಚಾಗಿ ಬಳಸುವುದರಿಂದ ಅದರ ಬೆಲೆಯೂ ದುಬಾರಿಯಾಗಿದೆ.

ಗಗನಕ್ಕೇರಿದ ಹಣ್ಣಿನ ಬೆಲೆ: ರಂಜಾನ್‌ ಮಾಸ ಪ್ರಾರಂಭವಾಗಿದೆ. ಈ ತಿಂಗಳಲ್ಲಿ ಉಪವಾಸ ಕಡ್ಡಾಯವಾಗಿದೆ. ಒಂದು ತಿಂಗಳು ಪೂರ್ತಿ ಉಪವಾಸ ಮಾಡುವ ಮೂಲಕ ಅಲ್ಲಾಹನ ಸ್ಮರಣೆ ಮಾಡುವ ಹಾಗೂ ಎಲ್ಲರೂ ಸಂಭ್ರಮಿಸುವ ಬಹುದೊಡ್ಡ ಹಬ್ಬವಾಗಿದೆ. ಹಣ್ಣಿನ ಗಾಡಿಗಳಿಗೆ ಇಫ್ತಾರ್‌ ವೇಳೆ ಬಿಡುವಿಲ್ಲದ ಕೆಲಸ. ಅದುವರೆಗೆ ಹಸಿದಿದ್ದವರನ್ನು ತಣಿಸುವುದು ಇದೇ ಅಂಗಡಿಗಳು. ಪಪ್ಪಾಯ, ಬಾಳೆಹಣ್ಣು, ಮೋಸಂಬಿ, ಆರೆಂಜ್‌, ಅನಾನಸ್‌, ಸೇಬು, ಕರಬೂಜ, ಕಲ್ಲಂಗಡಿ ಹಣ್ಣು, ದ್ರಾಕ್ಷಿ, ಶರಬತ್ತು, ಸೌತೇಕಾಯಿ, ಆಷ್‌, ಇತರೆ ಹೆಚ್ಚಿನ ಹಣ್ಣು ಹೆಚ್ಚಾಗಿ ರಂಜಾನ್‌ ಸಂದರ್ಭದಲ್ಲಿ ಉಪಯೋಗಿಸುತ್ತಾರೆ.ಅದಕ್ಕಾಗಿ ಹಣ್ಣಿನ ಬೆಲೆ ಗಗನಕ್ಕೇರಿದೆ.

ದುಬಾರಿ ವೆಚ್ಚ ಭರಿಸಬೇಕು: ಪೆಟ್ರೋಲ್‌, ಡೀಸೆಲ್‌ ಅಗತ್ಯ ವಸ್ತುಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಒಂದೊಂದು ಬೆಲೆಯೂ ದುಬಾರಿ ಆಗುತ್ತಿದೆ. ಪೆಟ್ರೋಲ್‌, ಡೀಸೆಲ್‌ ಹೆಚ್ಚಾಗಿರುವುದರಿಂದ ಬೆಂಗಳೂರು ಇತರೆ ಕಡೆಗಳಿಂದ ಸರಕು ಸಾಗಾಣಿಕೆ ಮಾಡಿಕೊಂಡು ಬರಲು ದುಬಾರಿ ವೆಚ್ಚ ಭರಿಸಬೇಕಾಗಿದೆ ಎಂದು ವ್ಯಾಪಾರಸ್ಥರು ಹೇಳುತ್ತಾರೆ.

ಆರ್ಥಿಕ ಸಂಕಷ್ಟದಿಂದ ಪಾರು: ಕಳೆದ ಎರಡು ವರ್ಷಗಳಿಂದ ಕೊರೊನಾ ಇದ್ದಿದ್ದರಿಂದ ಹಣ್ಣಿನ ವ್ಯಾಪಾರಿಗಳಿಗೆ ಲಾಕ್‌ಡೌನ್‌, ಸೀಲ್‌ಡೌನ್‌ಗಳು ರಂಜಾನ್‌ ಮಾಸದಲ್ಲಿ ಇದಿದ್ದರಿಂದ ವ್ಯಾಪಾರಸ್ಥರಿಗೆ ಆರ್ಥಿಕ ನಷ್ಟ ಎದುರಿಸುವಂತಾಗಿತ್ತು. ಈ ಬಾರಿ ಕೊರೊನಾ ಇಳಿಮುಖ ಆಗಿರುವುದರಿಂದ ಹಣ್ಣಿನ ವ್ಯಾಪಾರಿಗಳು ಆರ್ಥಿಕ ಸಂಕಷ್ಟದಿಂದ ಪಾರಾಗುವಂ ತಾಗಿದೆ ಎಂದು ಹಣ್ಣಿನ ವ್ಯಾಪಾರಿಗಳು ಹೇಳುತ್ತಾರೆ.

ವಿವಿಧ ಹಣ್ಣಿಗಳ ಬೆಲೆ: ಸೇಬು ಒಂದು ಕೆ.ಜಿ.ಗೆ 200 ರೂ., ಸಪೋಟಾ 60 ರೂ., ಆರೆಂಜ್‌ 160 ರೂ., ಪಚ್ಚಬಾಳೆಹಣ್ಣು 30 ರೂ., ಏಲಕ್ಕಿ ಬಾಳೆಹಣ್ಣು 70 ರೂ., ದ್ರಾಕ್ಷಿ 100 ರೂ., ಮೋಸಂಬಿ 100 ರೂ., ದಾಳಿಂಬೆ 200 ರೂ., ಮಾವಿನಹಣ್ಣು 120 ರೂ., ಕರಬೂಜ 30ರೂ., ಕಲ್ಲಂಗಡಿ ಹಣ್ಣು 40 ರೂ., ಪಪ್ಪಾಯಿ 40ರೂ., ಅನಾನಸ್‌ 60 ರೂ. ಈ ರೀತಿ ಮಾರಾಟವಾಗುತ್ತಿದೆ.

ರಂಜಾನ್‌ ತಿಂಗಳ ವೇಳೆಯಲ್ಲಿ ಹಣ್ಣುಗಳ ಬೆಲೆ ಏರಿಕೆ ಹೆಚ್ಚಾಗಿ ಕಂಡು ಬರುತ್ತದೆ. ಹಣ್ಣುಗಳ ವ್ಯಾಪಾರ ಜೋರಾಗಿ ಮಾಡಲಾಗುತ್ತದೆ. ಎಲೆಕ್ಟ್ರಾನಿಕ್‌ ಸಿಟಿ ಹತ್ತಿರದ ಮಾರುಕಟ್ಟೆ, ಕೆ.ಆರ್‌.ಮಾರುಕಟ್ಟೆ, ರಸಲ್‌ ಮಾರುಕಟ್ಟೆ ಇತರೆ ಕಡೆಗಳಿಂದ ಹಣ್ಣನ್ನು ತರಲಾಗುತ್ತದೆ. ದುಬಾರಿ ವೆಚ್ಚದಲ್ಲಿ ಹಣ್ಣನ್ನು ತಂದು ಮಾರಾಟ ಮಾಡಲಾಗುತ್ತಿದೆ.
● ಬಾಬು, ಹಣ್ಣಿನ ವ್ಯಾಪಾರಿ

ರಂಜಾನ್‌ ವೇಳೆ ಹಣ್ಣಿನ ಬೆಲೆ ಎಷ್ಟೇ ದುಬಾರಿಯಾದರೂ ಹಣ್ಣನ್ನು ತಂದು ಸೇವನೆ ಮಾಡಬೇಕು. ರಂಜಾನ್‌ ನಮ್ಮ ಪವಿತ್ರ ಹಬ್ಬ. ಅದರ ಆಚರಣೆ ನಮಗೆ ಮುಖ್ಯವಾಗಿರುತ್ತದೆ. ಹಣ್ಣು-ಹಂಪಲು ತಿಂದು ಉಪವಾಸವನ್ನು ಬಿಡುತ್ತೇವೆ. ರಂಜಾನ್‌ ಹಬ್ಬ ಆಚರಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಇಫ್ತಾರ್‌ ವೇಳೆ ಎಲ್ಲ ರೀತಿ ಹಣ್ಣು ತೆಗೆದುಕೊಂಡು ಬರುತ್ತೇವೆ.
ಅಬ್ದುಲ್‌, ಗ್ರಾಹಕ

*ಎಸ್‌.ಮಹೇಶ್‌

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.