ನಾಳೆಯಿಂದಲೇ ಶಾಲೆಗಳ ಪುನಾರಂಭ; ಕೋವಿಡ್‌ ನಿಯಮದಡಿ ಶಾಲೆ ಶುರು

ಶಾಲೆಗಳಲ್ಲಿ ಸ್ಯಾನಿಟೈಸರ್‌ ಅಳವಡಿಸಿ ಮುಂಜಾಗ್ರತಾ ಕ್ರಮ

Team Udayavani, Sep 5, 2021, 2:48 PM IST

ನಾಳೆಯಿಂದಲೇ ಶಾಲೆಗಳ ಪುನಾರಂಭ; ಕೋವಿಡ್‌ ನಿಯಮದಡಿ ಶಾಲೆ ಶುರು

ದೇವನಹಳ್ಳಿ: ಕೋವಿಡ್‌ ದಿಂದ ಸತತ 20ತಿಂಗಳುಗಳಿಂದ ಬಂದ್‌ ಆಗಿದ್ದ ಶಾಲೆಗಳು ಸೆ.6ರಿಂದ ಆರಂಭಗೊಳ್ಳಲಿದೆ. ಮಕ್ಕಳ ಸ್ವಾಗತಕ್ಕೆ
ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ನಾಳೆಯಿಂದಲೇ ಶಾಲೆ ಆರಂಭ: ಆನ್‌ಲೈನ್‌ ತರಗತಿಯಲ್ಲಿದ್ದ ವಿದ್ಯಾರ್ಥಿಗಳು ಭೌತಿಕ ತರಗತಿ ಹಾಜರಿಗೆ ಎದುರು ನೋಡುತ್ತಿದ್ದರು.6-8 ನೇ ತರಗತಿಯ ವರೆಗೆ ಪುನಾರಾರಂಭಕ್ಕೆ ಸರ್ಕಾರ ಹಸಿರು ನಿಶಾನೆ ತೋರಿದೆ. ಶಾಲೆಗಳಲ್ಲಿ ಮಕ್ಕಳ ಕಲರವ ಕೇಳಿ ಬರಲಿದೆ. ಶಾಲೆಗಳ ಆರಂಭ ಪೋಷಕರಿಗೆ ಖುಷಿ ತಂದಿದೆ.

ಸವಾಲು: ಶೈಕ್ಷಣಿಕ ಪ್ರಗತಿಗೆ ಕೋವಿಡ್‌ ದೊಡ್ಡ ಆಘಾತ ನೀಡಿತ್ತು. 6, 7, ಮತ್ತು 8ನೇ ತರಗತಿ ಮಕ್ಕಳು ರಜೆಗೆ ಒಗ್ಗಿಕೊಂಡಿದ್ದು ಪುನ:ತರಗತಿಗೆ ಆಗಮಿಸಿ ಮೊದಲಿನಂತೆ ಶೇ.100ರಷ್ಟು ಹಾಜರಾತಿ ಪಡೆಯುವುದೇ ಶಿಕ್ಷಣ ಇಲಾಖೆಗೆ ಹೆಚ್ಚಿನ ಸವಾಲಾಗಿ ಪರಿಣಮಿಸಿದೆ.

ಕೋವಿಡ್‌ ಮಾರ್ಗಸೂಚಿ ಪಾಲನೆ: ಜಿಲ್ಲೆಯಲ್ಲಿ ಸೆ.6ರಿಂದ508 ಶಾಲೆಗಳು ತೆರೆಯಲಿದೆ. ಶಾಲಾ ಆಡಳಿತ ಮಂಡಳಿ ಕೋವಿಡ್‌ ಮಾರ್ಗಸೂಚಿ
ಅನ್ವಯ ಎಲ್ಲ ಮುನ್ನೆಚ್ಚರಿಕೆ ತೆಗೆದುಕೊಂಡಿದೆ. ಜಿಲ್ಲೆಯಾ ದ್ಯಂತ ಈಗಾಗಲೇ ಎಲ್ಲಾ ಶಾಲಾ ಶಿಕ್ಷಕರಿಗೆ ಕೋವಿಡ್‌ ಲಸಿಕೆ ಹಾಕಿಸಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಇದನ್ನೂ ಓದಿ:ಸಾರ್ವಜನಿಕ ಗಣೇಶ ಹಬ್ಬಕ್ಕೆ ಗ್ರೀನ್ ಸಿಗ್ನಲ್ ನೀಡಿದ ಸರ್ಕಾರ; ಷರತ್ತುಗಳು ಅನ್ವಯ

ವಿದ್ಯಾರ್ಥಿಗಳು ಆತಂಕವಿಲ್ಲದೆ ಶಾಲೆಗೆ ಬರಬಹುದು. ಸುರಕ್ಷತೆ ದೃಷ್ಟಿಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋವಿಡ್‌ ನಿಯಮ ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
– ಎಂಟಿಬಿ ನಾಗರಾಜ್‌, ಜಿಲ್ಲಾ ಉಸ್ತುವಾರಿ ಸಚಿವ.

ಮಕ್ಕಳ ಸುರಕ್ಷತೆಗೆ ಏನೆಲ್ಲಾ ಅಗತ್ಯವಿದೆಯೋ ಎಲ್ಲವನ್ನು ಸಿದ್ಧಗೊಳಿಸಲಾಗಿದೆ. ಯಾವುದೇ ಆತಂಕವಿಲ್ಲದೆ ವಿದ್ಯಾರ್ಥಿಗಳು ಹಾಜರಾಗಬಹುದು.
– ಎಂ.ಆರ್‌.ರವಿಕುಮಾರ್‌, ಜಿಪಂ ಸಿಇಒ

ಪ್ರಸಕ್ತ ಸಾಲಿನಲ್ಲಿ 6 ರಿಂದ 8ನೇ ತರಗತಿಯ 48325 ವಿದ್ಯಾರ್ಥಿಗಳು ಹಾಜರಾಗುವ ನಿರೀಕ್ಷೆಯಲ್ಲಿದ್ದೇವೆ. ಉಳಿದಂತೆ ಎಲ್ಲಾ ಶಾಲೆಗಳಿಗೆ ಕೋವಿಡ್‌ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪೋಷಕರು ಧೈರ್ಯವಾಗಿ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಿಕೊಡಬಹುದಾಗಿದೆ.
– ಗಂಗಮಾರೇಗೌಡ, ಉಪನಿರ್ದೇಶಕರು,
ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ.

ಕೋವಿಡ್‌ ದಿಂದಾಗಿ ಶಾಲೆಗಳನ್ನು ಮುಚ್ಚಿದ್ದರಿಂದ ಆನ್‌ ಲೈನ್‌ನಲ್ಲಿಯೇ ಹೆಚ್ಚು ಪಾಠ ಕೇಳಲು ಕಷ್ಟವಾಗುತ್ತಿತ್ತು. ಸರ್ಕಾರ ಇದೀಗ ಶಾಲೆಗಳನ್ನು ತೆರೆಯುತ್ತಿರುವುದು ಶಾಲೆಯಲ್ಲಿ ಕುಳಿತು ಪಾಠ ಕೇಳಲು ಅನುಕೂಲವಾಗುತ್ತಿದೆ. ಖುಷಿಯಿಂದ ಶಾಲೆಗಳಿಗೆ ಸೋಮವಾರದಿಂದ ಹೋಗುತ್ತೇನೆ.
– ರಾಹುಲ್‌, 8ನೇ ತರಗತಿ ವಿದ್ಯಾರ್ಥಿ

-ಎಸ್‌.ಮಹೇಶ್‌

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.