ಕಾಡು, ಕಾಡು ಪ್ರಾಣಿಗಳ ಸಂರಕ್ಷಣೆ ನಾಗರಿಕರ ಜವಾಬ್ದಾರಿ


Team Udayavani, Feb 3, 2019, 7:20 AM IST

kladu.jpg

ಆನೇಕಲ್‌: ಕಾಡು, ಕಾಡು ಪ್ರಾಣಿಗಳ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಬೇಕು. ಅಲ್ಲದೇ, ಅದು ನಮ್ಮ ಹಕ್ಕು ಎಂದು ಭಾವಿಸಬೇಕು. ಆಗ ಮಾತ್ರ ಅರಣ್ಯ ಉಳಿಯುತ್ತದೆ ಎಂದು ಪರಿಸರ ಮತ್ತು ವನ್ಯಜೀವಿ ಹಿತರಕ್ಷಣಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಮಂಜುನಾಥ್‌ ಎನ್‌.ಬನ್ನೇರುಘಟ್ಟ ಹೇಳಿದರು.

ತಾಲೂಕಿನ ಶಾನುಭೋಗನಹಳ್ಳಿಯಲ್ಲಿ ಗ್ರಾಮ ಸ್ಥರು ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಹಾಗೂ ಪರಿಸರ ಮತ್ತು ವನ್ಯಜೀವಿ ಹಿತರಕ್ಷಣಾ ಸಮಿತಿ ಸಂಯುಕ್ತಾ ಶ್ರಯದಲ್ಲಿ ಕಾಡ್ಗಿಚ್ಚಿನ ಕುರಿತು ಹಮ್ಮಿಕೊಂಡಿದ್ದ ಜಾಗೃತಿ ಮೂಡಿಸುವ ಜಾಥಾದಲ್ಲಿ ಅವರು ಮಾತನಾಡಿದರು.

ಅರಣ್ಯ ನಾಶದಿಂದ ಆಪತ್ತು: ಮನುಷ್ಯ ನೆಮ್ಮದಿ ಯಾಗಿ ಬದುಕಬೇಕಾದರೆ ಅರಣ್ಯಗಳು ಪ್ರಮುಖ ಪಾತ್ರ ವಹಿಸುತ್ತವೆ. ಅಂತಹ ಅರಣ್ಯಗಳನ್ನು ನಾವು ನಾಶ ಮಾಡುತ್ತ ಬಂದಿದ್ದೇವೆ. ಅದರಿಂದಲೇ ಇಂದು ಕಾಲಕ್ಕೆ ತಕ್ಕಂತೆ ಮಳೆ ಆಗುತ್ತಿಲ್ಲ. ಮೃಗ ಮಾನವರ ಸಂಘರ್ಷ ಮಿತಿ ಮೀರುತ್ತಿದೆ. ಹಾಗಾಗಿ, ಇಂದಾದರೂ ಅರಣ್ಯಗಳ ಅವಶ್ಯಕತೆ ಬಗ್ಗೆ ನಾಗರಿಕರು ಅರಿಯಬೇಕಿದೆ ಎಂದು ಹೇಳಿದರು.

ಕಾಡಿನ ಮೊದಲ ಶತ್ರು ಕಾಡ್ಗಿಚ್ಚು: ಕಾಡಿನ ಮೊದಲ ಶತ್ರು ಕಾಡ್ಗಿಚ್ಚು. ಹಾಗಾಗಿ, ಕಾಡ್ಗಿಚ್ಚಿನಿಂದ ಕಾಡುಗಳನ್ನು ರಕ್ಷಿಸಬೇಕಾದರೆ ಜನರಲ್ಲಿ ಅದರಲ್ಲೂ ಕಾಡಂಚಿನ ಹಳ್ಳಿಗರಲ್ಲಿ ಜಾಗೃತಿ ಮೂಡಿಸು ವುದೊಂದೇ ದಾರಿ. ಆ ಕಾರಣದಿಂದ ನಮ್ಮ ಸಂಸ್ಥೆ ಕಾಡಂಚಿನ ಹಳ್ಳಿಗರಲ್ಲಿ ಕಾಡಿನ ಪ್ರಾಮುಖ್ಯತೆ, ಕಾಡಿನಲ್ಲಿ ಕಾಣಿಸಿಕೊಳ್ಳುವ ಬೆಂಕಿಗೆ ಕಾರಣ ಗಳೇನು?, ಕಾಡ್ಗಿಚ್ಚಿನಿಂದ ಕಾಡನ್ನು ಹೇಗೆ ರಕ್ಷಣೆ ಮಾಡಿಕೊಳ್ಳಬಹುದು ಎಂಬುದರ ಬಗ್ಗೆ ನಾಟದ ಮೂಲಕ ಅರಿವು ಮೂಡಿಸುತ್ತಿದ್ದೇವೆ ಎಂದರು.

ಪ್ರತಿ ವರ್ಷ ನಮ್ಮ ತಂಡ ಅರಣ್ಯ ಇಲಾಖೆ ಯೊಂದಿಗೆ ಸೇರಿ ಕಾಡಂಚಿನ ಹಳ್ಳಿಗರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಿ ಕೊಂಡು ಬರುತ್ತಿದೆ. ಇದಲ್ಲದೇ, ಶಾಲಾ, ಕಾಲೇಜು ವಿದ್ಯಾರ್ಥಿಗಳಲ್ಲೂ ಸಹ ವನ್ಯಜೀವಿಗಳ ಸಂರಕ್ಷಣೆ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

8 ಜನರ ತಂಡ 30 ನಿಮಿಷಗಳ ಕಾಲ ನಾಟಕದ ಮೂಲಕ ಜಾಗೃತಿ ಪ್ರದರ್ಶನ ನೀಡಿತು. ಬ್ಯಾಟರಾಯನದೊಡ್ಡಿ, ತಟ್ಟುಗುಪ್ಪೆ, ವೀವರ್ ಕಾಲೋನಿ ಶಾಲೆ ಹೀಗೆ ಹಲವು ಹಳ್ಳಿಗಳು ಮತ್ತು ಶಾಲೆಗಳಲ್ಲಿ ನಾಟಕ ಪ್ರದರ್ಶನ ನೀಡಿದರು. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ನಳಿನಿ ಬಿ.ಗೌಡ, ಅರಣ್ಯ ಇಲಾಖೆ ಉಪ ವಲಯ ಅರಣ್ಯಾ ಧಿಕಾರಿಗಳಾದ ಮಹೇಶ್‌, ಆಶಾ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.