ರಸ್ತೆ ಬಂದ್: ಸಾರ್ವಜನಿಕರ ಪರದಾಟ
Team Udayavani, Apr 24, 2020, 4:13 PM IST
ದೊಡ್ಡಬಳ್ಳಾಪುರ: ಲಾಕ್ಡೌನ್ ಜಾರಿಗೆ ಬಂದ ಒಂದೆರೆಡು ದಿನಗಳ ಕಾಲ ಗ್ರಾಮೀಣ ಪ್ರದೇಶದ ಯಾವುದೇ ಹಳ್ಳಿಗೆ ಹೊರಗಿನವರು ಬರದಂತೆ ರಸ್ತೆಗಳಿಗೆ ಅಡ್ಡಲಾಗಿ ಬೇಲಿ ಹಾಕಿದ್ದನ್ನು, ರಸ್ತೆಗೆ ಅಡ್ಡಲಾಗಿ ಜೆಸಿಬಿ ಮೂಲಕ ಕಾಲುವೆ ತೋಡಲಾಗಿತ್ತು. ಈಗ ನಗರದಲ್ಲಿಯೂ ಸಹ ರಸ್ತೆಗನ್ನು ಬಂದ್ ಮಾಡಲಾಗುತ್ತಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ.
ನಗರದ ಬಿಎಸ್ಎನ್ಎಲ್ ಕಚೇರಿ ರಸ್ತೆ (ಮುಕ್ತಾಂಬಿಕ ರಸ್ತೆ), ವಡ್ಡರಪೇಟೆ ಸೇರಿದಂತೆ ಹತ್ತಾರು ಕಡೆ ಎÇÉೆಂದರಲ್ಲಿ ರಸ್ತೆಗಳಿಗೆ ಅಡ್ಡಲಾಗಿ ಹಳೆಯ ಬೀರುಗಳು, ಹಳೆಯ ಕಬ್ಬಿಣದ ಸಾಮಾನುಗಳು ಸೇರಿದಂತೆ ಕೈಗೆ ಸಿಕ್ಕ ವಸ್ತುಗಳನ್ನು ಅಡ್ಡಲಾಗಿ ಹಾಕಿ ಬಂದ್ ಮಾಡಲಾಗಿದೆ.
ನಗರದಲ್ಲಿಯೇ ಮುಖ್ಯ ರಸ್ತೆಗಳಲ್ಲಿ ಮುಕ್ತಾಂಬಿಕ ರಸ್ತೆಯು ಒಂದಾಗಿದೆ. ಈ ರಸ್ತೆಯಲ್ಲಿ ಹಳೆಯ ಬಸ್ ನಿಲ್ದಾಣ, ತರಕಾರಿ ಮಾರುಕಟ್ಟೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ದಿನಸಿ ಅಂಗಡಿಗಳಿಗೆ ಹೋಗುವವರಿಗೆ ಈ ರಸ್ತೆಗಳು ಮುಖ್ಯವಾಗಿವೆ. ಇಂತಹ ರಸ್ತೆಗಳನ್ನೇ ಸ್ಥಳೀಯ ಜನರು ತಮಗಿಷ್ಟ ಬಂದ ರೀತಿಯಲ್ಲಿ ಬಂದ್ ಮಾಡಿಕೊಂಡರೆ ಸಾರ್ವಜನಿಕರ ಹಾಗೂ ಸರ್ಕಾರಿ ಅಧಿಕಾರಿಗಳ ಓಡಾಟಕ್ಕೂ ತೊಂದರೆಯಾಗುತ್ತಿದೆ.
ರಸ್ತೆ ಬಂದ್ ಮಾಡಲೇ ಬೇಕಾದ ತುರ್ತು ಅಗತ್ಯ ಇದ್ದರೆ ಪೊಲೀಸರು ಬ್ಯಾರಿಕೇಡ್ಳನ್ನು ಹಾಕಿ ಬಂದ್ ಮಾಡುತ್ತಾರೆ. ಆದರೆ ಸ್ಥಳೀಯರು ಕೈಗೆ ಸಿಕ್ಕ ವಸ್ತುಗಳಿಂದ ಬಂದ್ ಮಾಡುವುದು ಎಷ್ಟು ಸರಿ ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್ ಸಮಸ್ಯೆ
Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ
Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್ ಸ್ಪರ್ಧೆ
Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ
Road Dispute: ರಸ್ತೆ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ