![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-415x252.jpg)
ರೌಡಿಶೀಟರ್ ಪುಟ್ಟರಾಜು ಬರ್ಬರ ಹತ್ಯೆ
Team Udayavani, May 7, 2019, 3:00 AM IST
![roedisheeter](https://www.udayavani.com/wp-content/uploads/2019/05/roedisheeter-367x465.jpg)
ನೆಲಮಂಗಲ: ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ರೌಡಿ ಶೀಟರ್ ಪುಟ್ಟರಾಜುನನ್ನು ಹಸಿರುವಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ ಹಂತಕರು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ತಾಲೂಕಿನ ತ್ಯಾಮಗೊಂಡ್ಲು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯ ಹಿನ್ನೆಲೆ: ಕಳೆದ 2 ವರ್ಷಗಳ ಹಿಂದೆ ಉಮೇಶ್ ಎಂಬಾತನಿಗೆ ಪುಟ್ಟರಾಜು ಚಾಕುಹಾಕಿದ್ದ ಎನ್ನಲಾಗಿದ್ದು ತನ್ನ ಹಳೆಯದ್ವೇಷ ತೀರಿಸಿಕೊಳ್ಳಲು ಸ್ನೇಹಿತರಾದ ಹನುಮಂತರಾಯಪ್ಪ ಹಾಗೂ ರಾಜೇಶ್ ಜೊತೆ ಸೇರಿ ಭಾನುವಾರ ರಾತ್ರಿ ಪುಟ್ಟರಾಜು ಮೇಲೆ ಜಗಳ ಮಾಡಿ ಗ್ರಾಮದ ಬಸ್ ನಿಲ್ದಾಣದ ಬಳಿ ಆತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕುತ್ತಿಗೆ ಭಾಗಕ್ಕೆ ಚಾಕುನಿಂದ ತಿವಿದು ಹತ್ಯೆಗೈದು ಪರಾರಿಯಾಗಿದ್ದಾರೆ.
ತ್ಯಾಮಗೊಂಡ್ಲು ಹೋಬಳಿಯ ಹಸಿರುಹಳ್ಳಿ ಗ್ರಾಮದ ನಿವಾಸಿ ಪುಟ್ಟರಾಜು ಕಳೆದ 5-6 ವರ್ಷಗಳಿಂದ ಗ್ರಾಮದಲ್ಲಿ ಅನೇಕ ಕೃತ್ಯಗಳನ್ನು ಮಾಡಿಕೊಂಡು ಗ್ರಾಮಸ್ಥರನ್ನು ಹೆದರಿಸಿಕೊಂಡಿದ್ದ. ಕಳೆದ 2 ವರ್ಷಗಳ ಹಿಂದೆ ಗ್ರಾಮದ ನಿವಾಸಿ ಉಮೇಶನಿಗೆ ಚಾಕು ಹಾಕಿ ಸಿಕ್ಕಿಹಾಕಿಕೊಂಡಿದ್ದ ಈತ, ನಂತರ 3-4 ಪ್ರಕರಣಗಳಲ್ಲಿ ಠಾಣೆ ಮೆಟ್ಟಿಲೇರಿದ್ದ. ಗ್ರಾಮದ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಿಂದ 2017ರಲ್ಲಿ ಈತನ ವಿರುದ್ಧ ತ್ಯಾಮಗೊಂಡ್ಲು ಠಾಣೆಯಲ್ಲಿ ಪೊಲೀಸರು ರೌಡಿಶೀಟ್ ತೆರೆದಿದ್ದರು.
ಗಡಿಪಾರಿಗೆ ಆಗ್ರಹಿಸಿದ್ದರು: ಕೊಲೆಯಾದ ಪುಟ್ಟರಾಜುನನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ತ್ಯಾಮಗೊಂಡ್ಲು ಠಾಣೆ ಪಿಎಸ್ಐ ಮಂಜೇಗೌಡ ಇಲಾಖೆ ಮೇಲಿನ ಅಧಿಕಾರಿಗಳಿಗೆ ಈ ಹಿಂದೆಯೇ ಪತ್ರ ಬರೆದಿದ್ದರು. ಆತನನ್ನು ಗಡಿಪಾರು ಮಾಡುವ ಮೊದಲೇ ರೌಡಿ ಪುಟ್ಟರಾಜು ಹತ್ಯೆಯಾಗಿ ಹೋಗಿದ್ದಾನೆ.
ಬಂಧನ: ರಾತ್ರಿ ಕೊಲೆಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿ ಉಮೇಶ್ ಸೋಮವಾರ ಮುಂಜಾನೆಯೇ ಪೊಲೀಸರು ಬೀಸಿದ ಬಲೆಗೆ ಬಿದ್ದಿದ್ದಾನೆ. ಇನ್ನು ಉಳಿದ ಆರೋಪಿಗಳಾದ ಜಕ್ಕನಹಳ್ಳಿ ರಾಜೇಶ ಮತ್ತು ಹನುಮಂತರಾಯಪ್ಪ ತಲೆ ಮರೆಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ತ್ಯಾಮಗೊಂಡ್ಲು ಪೊಲೀಸರು ಇನ್ನುಳಿದ ಆರೋಪಿಗಳಾದ ರಾಜೇಶ್ ಮತ್ತು ಹನುಮಂತರಾಯಪ್ಪನಿಗೆ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಕಾಂಗ್ರೆಸ್ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್ನಲ್ಲಿ ಉದ್ವಿಗ್ನ ಸ್ಥಿತಿ](https://www.udayavani.com/wp-content/uploads/2024/07/6-25-150x90.jpg)
Crime: ಕಾಂಗ್ರೆಸ್ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್ನಲ್ಲಿ ಉದ್ವಿಗ್ನ ಸ್ಥಿತಿ
![Ganja peddler: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್ಗೆ ಗುಂಡೇಟು; ಸೆರೆ](https://www.udayavani.com/wp-content/uploads/2024/07/Untitled-1-15-150x90.jpg)
Ganja peddler: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್ಗೆ ಗುಂಡೇಟು; ಸೆರೆ
![R.Ashok](https://www.udayavani.com/wp-content/uploads/2024/07/R.Ashok_-150x90.jpg)
Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್
![BRural](https://www.udayavani.com/wp-content/uploads/2024/06/BRural-150x90.jpg)
Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ
![Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್ ಅಡ್ಡೆಯಾದ ಹೆದ್ದಾರಿ!](https://www.udayavani.com/wp-content/uploads/2024/05/9-21-150x90.jpg)
Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್ ಅಡ್ಡೆಯಾದ ಹೆದ್ದಾರಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.