ಕವಾಡಿಮಠದ ರುದ್ರೇಶ್ವರಸ್ವಾಮಿ ವಿಜೃಂಭಣೆಯ ಉತ್ಸವ


Team Udayavani, Apr 21, 2019, 3:00 AM IST

kavadi

ನೆಲಮಂಗಲ: ಪಟ್ಟಣ ಮುಖ್ಯರಸ್ತೆಯಲ್ಲಿರುವ ಕವಾಡಿಮಠದ ವೀರಭದ್ರ ಸ್ವಾಮಿಯ ಬ್ರಹ್ಮರಥೋತ್ಸವ ದೇವಾಲಯ ನಿರ್ಮಾಣ ಪ್ರಗತಿಯಲ್ಲಿರುವುದರಿಂದಾಗಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಾಂಕೇತಿಕವಾಗಿ ವಿಜೃಂಭಣೆಯಿಂದ ನಡೆಯಿತು.

ರಥೋತ್ಸವದ ಅಂಗವಾಗಿ ಶ್ರೀವೀರಭದ್ರಸ್ವಾಮಿ ದೇವರಿಗೆ ಆರತಿ, ಅಗ್ನಿಕುಂಡಸೇವೆ ಮತ್ತಿತರ ಪೂಜೆ ಪುನಸ್ಕಾರಗಳನ್ನು ನೆರವೇರಿಸಲಾಯಿತು. ದೇವಾಲಯ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿರುವ ಕಾರಣಕ್ಕೆ ಈ ಬಾರಿ ರಥೋತ್ಸವವನ್ನು ವಿಜೃಂಭಣೆಯಿಂದ ಮಾಡದೇ ಕವಾಡಿಮಠದಿಂದ ಅಡೇಪೇಟೆಯಲ್ಲಿರುವ ರುದ್ರೇಶ್ವರ ಸ್ವಾಮಿ ದೇವಾಲಯದವರೆಗೂ ಉತ್ಸವಮೂರ್ತಿ ಮೆರವಣಿಗೆ ನಡೆಸಿದರು.

ಇದು ಒಂದೆಡೆಯಾದರೆ ಮತ್ತೂಂದೆಡೆ ಭಕ್ತರು ದವನ, ಬಾಳೆಹಣ್ಣು ರಥಕ್ಕೆ ಎಸೆದು ಹರಕೆ ತೀರಿಸಲಾಗದೆ, ಮುಂದೂಡುವಂತಾಯಿತು. ನಂಬಿದ ಭಕ್ತರು ಇಷ್ಟಾರ್ಥಗಳನ್ನು ಈಡೇರಿಸಿದ ರುದ್ರೇಶ್ವರಸ್ವಾಮಿ ದರ್ಶನ ಪಡೆದರು. ಇದೇ ವೇಳೆ ದೇವಸ್ಥಾನದ ಧರ್ಮದರ್ಶಿ ಗಂಗರಾಜು ಮಾತನಾಡಿ, ತಮ್ಮ ಪೂರ್ವಿಕರ ಕಾಲದಿಂದಲೂ ರಥೋತ್ಸವದ ನೇತೃತ್ವವಹಿಸಿಕೊಂಡು ಬರಲಾಗಿದೆ.

ತಾಲೂಕಿನ ಭಕ್ತರ ಸಹಕಾರದಿಂದಾಗಿ ದೇವರ ಕಾರ್ಯಗಳು ಯಶಸ್ವಿಯಾಗಿ ನಡೆಸಲಾಗುತ್ತಿದೆ. ಪಟ್ಟಣದಲ್ಲಿ ಜಾತ್ರೆ ಇತ್ಯಾದಿ ಕಾರ್ಯಗಳನ್ನು ಮಾಡುವುದರಿಂದ ಯುವಕರಲ್ಲಿ ಹೊಂದಾಣಿಕೆ ಮತ್ತು ಸೇವಾಮನೋಭಾವ ಬೆಳೆದು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ನಿರ್ಮಾಣ ಮಾಡಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಹಳೆಯ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡುತ್ತಿರುವುದರಿಂದಾಗಿ ರಥೋತ್ಸವವನ್ನು ಸಾಂಕೇತಿಕವಾಗಿ ದೇವರ ಉತ್ಸವದೊಂದಿಗೆ ಮಾಡಲಾಗಿದೆ. ನೂತನ ದೇವಸ್ಥಾನದ ನಿರ್ಮಾಣದಬಳಿಕ ಬ್ರಹ್ಮರಥೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ನೆರವೇರಿಸಲಾಗುತ್ತದೆ ಎಂದು ತಿಳಿಸಿದರು.

ಬೆಳಗ್ಗೆಯಿಂದಲೂ ವೀರಭದ್ರಸ್ವಾವಿಗೆ ಅಭಿಷೇಕ, ಹೋಮ ಹವನವಗಳನ್ನು ಇತ್ಯಾದಿ ವಿಶೇಷ ಪೂಜೆಗಳನ್ನು ನೆರವೇರಿಸಿದ ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವೀರಭದ್ರಸ್ವಾಮಿಯ ಉತ್ಸವ ಮೂರ್ತಿಯ ಮೆರವಣಿಗೆ ನಡೆಸಲಾಯಿತು.

ಅರವಟಿಗೆ: ದೇವಾಲಯದ ಸುತ್ತಮುತ್ತಲಿನಲ್ಲಿ ಶ್ರೀರುದ್ರೇಶ್ವರಯುವಕ ಸಮಿತಿಯಿಂದ ಅರವಟಿಗೆಗಳನ್ನು ಆಯೋಜಿಸಿ ಉತ್ಸವಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಪಾನಕ, ಮಜ್ಜಿಗೆ ಮತ್ತು ಕೋಸಂಬರಿ ಹಂಚುತ್ತಿದ್ದ ದೃಶ್ಯ ಸಾಮಾನ್ಯವಾಗಿ ಕಂಡುಬಂತು. ವೀರಭದ್ರ ಸ್ವಾಮಿಯ ಉತ್ಸವ ಮೂರ್ತಿಯನ್ನು ವಿವಿಧ ಬಗೆಯ ಹೂಗಳಿಂದ ಸಿಂಗರಿಸಿದ್ದು, ಭಕ್ತರ ಸಂತಸಕ್ಕೆ ಕಾರಣವಾಗಿತು.

ರಥೋತ್ಸವದಲ್ಲಿ ವೀರಶೈವ ಮಹಾಸಭಾದ ಜಿಲ್ಲಾ ಕಾರ್ಯದರ್ಶಿ ಎನ್‌.ಬಿ.ದಯಾಶಂಕರ್‌, ಎನ್‌.ಆರ್‌ಜಗದೀಶ್‌, ಹಿರಿಯ ನ್ಯಾಯವಾಧಿ ಎನ್‌.ಎಸ್‌.ರಾಜು, ತಾಲೂಕು ವೀರಶೈವ ಮಹಾಸಭಾ ಕಾರ್ಯದರ್ಶಿ ಎನ್‌.ರಾಜಶೇಖರ್‌, ಶ್ರೀರುದ್ರೇಶ್ವರಯುವಕ ಸಮಿತಿಯ ರೇಣುಕಾಪ್ರಸಾದ್‌. ಎನ್‌.ಯು.ದೀಪಕ್‌, ಎನ್‌.ಜಿ.ಲೋಹಿತ್‌, ಪ್ರಸನ್ನಕುಮಾರ್‌, ಎನ್‌.ಜಿ.ಪ್ರಶಾಂತ್‌, ಎನ್‌.ಜೆ.ದೀಪಕ್‌, ಪುನೀತ್‌ರಾಜ್‌ ಸೇರಿದಂತೆ ಸಾವಿರಾರು ಭಕ್ತರು ಆಗಮಿಸಿ ಸ್ವಾಮಿ ದರ್ಶನ ಪಡೆದು ಪುನೀತರಾದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.