ಶ್ರೀಗಂಧ ಮರಗಳ ಮಾರಣಹೋಮ


Team Udayavani, Jan 1, 2022, 3:33 PM IST

ಶ್ರೀಗಂಧ ಮರಗಳ ಮಾರಣಹೋಮ

ನೆಲಮಂಗಲ: ಪರಿವೀಕ್ಷಣಾ ಮಂದಿರದಲ್ಲಿ ಬೆಳೆಸಲಾಗಿದ್ದ ಶ್ರೀಗಂಧ ಮರಗಳ ಕಳ್ಳತನ ಪ್ರಕರಣ ದಾಖಲಾಗಿ 6 ದಿನದಲ್ಲೇ ಮತ್ತೆ ಕಳ್ಳತನ ನಡೆದಿದ್ದು, ಖದೀಮರ ಅಟ್ಟಹಾಸಕ್ಕೆ ಲಕ್ಷಾಂತರ ಬೆಲೆ ಬಾಳುವ ಶ್ರೀಗಂಧ ಮರಗಳ ಮಾರಣ ಹೋಮ ನಡೆದಿದೆ. ನಗರದ ಹೃದಯಭಾಗದಲ್ಲಿರುವ ಪರಿವೀಕ್ಷಣಾ ಮಂದಿರದ ವ್ಯಾಪ್ತಿಯಲ್ಲಿ ಹತ್ತಕ್ಕೂ ಹೆಚ್ಚು ಶ್ರೀಗಂಧ ಮರಗಳು 10 ರಿಂದ 12ವರ್ಷಗಳಿಂದ ಬೆಳೆಸಲಾಗಿದೆ.

ಆದರೆ, ಒಂದು ವಾರದಿಂದ ನಾಲ್ಕು ಮರಗಳನ್ನು ಕಟಾವು ಮಾಡಿ ಕಳ್ಳರು ಸಾಗಿಸಿದರೆ, ಈ ಹಿಂದೆ ಕಳ್ಳತನವಾದಾಗ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ದೂರು ನೀಡದೆ ಬೇಜವ್ದಾರಿಯಾಗಿ ವರ್ತಿಸಿದ್ದಾರೆ. ಸಾರ್ವಜನಿಕರ ದೂರಿನ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದೂರು ದಾಖಲಿಸಿಕೊಂಡರೂ, ಒಂದೇ ವಾರದಲ್ಲಿ ಮತ್ತೆರಡು ಮರಗಳು ಕಳ್ಳರ ಕೈನಿಂದ ಬಲಿಯಾಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಅಧಿಕಾರಗಳ ನಡೆ ನಿಗೂಢ: ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಶ್ರೀಗಂಧ ಮರಗಳ ಕಳ್ಳತ ನವಾದಾಗ ನಾಲ್ಕು ದಿನ ದೂರು ನೀಡಿರಲಿಲ್ಲ, ನಂತರ ಅರಣ್ಯ ಇಲಾಖೆ ಅಧಿಕಾರಿಗಳು ದೂರು ದಾಖಲುಮಾಡಿದರು. ಅಧಿಕಾರಿಗಳ ಒತ್ತಡದಿಂದ ತನಿಖೆ ಚುರುಕು ಪಡೆಯದೇ ಇದ್ದ ಪರಿಣಾಮ ಮತ್ತೆ ಎರಡು ಶ್ರೀಗಂಧ ಮರಗಳ ಕಳ್ಳತನವಾಗಿದ್ದು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ನಮಗೆಗೊತ್ತಿಲ್ಲ ಎಂದು ಹೇಳುವ ಮೂಲಕ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಸಿಸಿಟೀವಿ ಹಾಗೂ ಕಾವಲುಗಾರರು ಇರುವ ಪರಿವೀಕ್ಷಣಾಮಂದಿರದಲ್ಲಿಯೇ ಈ ರೀತಿ ನಡೆದರೂ, ಅಧಿಕಾರಿಗಳು ನಡೆದುಕೊಳ್ಳುತ್ತಿರುವ ನಡೆ ನಿಗೂಢವಾಗಿದೆ.

ಸಿಸಿಟಿವಿ ಎದುರೇ ಕಳ್ಳತನ: ಪರಿವೀಕ್ಷಣಾ ಮಂದಿರವಲ್ಲದೇ ಕೆಲವು ಸರ್ಕಾರಿ ಕಚೇರಿಗಳ ಆವರಣದಲ್ಲಿಯೂ ಶ್ರೀಗಂಧ ಮರಗಳಿವೆ. ಆದರೆ, ಖದೀಮರು ಪರಿವೀಕ್ಷಣಾ ಮಂದಿರದಲ್ಲಿ ಸಿಸಿಟೀವಿ ಕ್ಯಾಮೆರಾದ ಎದುರಿನಲ್ಲಿಯೇ ಶ್ರೀಗಂಧ ಮರವನ್ನು ಕಟಾವು ಮಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಸಿಸಿಟೀವಿ ಪರೀಕ್ಷೆ ಮಾಡುವುದಾಗಿಅಧಿಕಾರಿಗಳು ಹೇಳಿದ್ದು, ಸತ್ಯತೆಯ ಬಗ್ಗೆ ಮಾತ್ರ ಮಾಹಿತಿ ನೀಡಿಲ್ಲ.

ಪ್ರತಿಭಟನೆ: ಶ್ರೀಗಂಧ ಮರಗಳನ್ನು ಪದೇ ಪದೆ ಕಳ್ಳತನ ಮಾಡುತ್ತಿದ್ದರೂ ಕ್ರಮಕೈಗೊಳ್ಳದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ನಮ್ಮ ಕರ್ನಾಟಕ ಜನಸೈನ್ಯ ಹಾಗೂ ಕರವೇ ಪ್ರವೀಣ್‌ಕುಮಾರ್‌ ಶೆಟ್ಟಿ ಬಣದ ಕಾರ್ಯಕರ್ತರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ನರಸಿಂಹಯ್ಯ, ನವೀನ್‌,ಕರವೇ ಹನುಮಂತರಾಜು, ಶಿವಕುಮಾರ್‌, ಮಂಜುಳಾ ಮತ್ತಿತರರಿದ್ದರು.

ಪ್ರಾಮಾಣಿಕ ತನಿಖೆ ಅನಿವಾರ್ಯ :

10 ರಿಂದ 12 ವರ್ಷದ ಶ್ರೀಗಂಧ ಮರಗಳನ್ನು ಸರ್ಕಾರಿ ಅಧಿಕಾರಿಗಳು ಕಚೇರಿಯ ಆವರಣದಲ್ಲಿಯೇ ಮಾರಣಹೋಮ ಮಾಡಿರುವುದು ದುರಂತ. ಪ್ರಾಮಾಣಿಕ ತನಿಖೆ ನಡೆದು ಆರೋಪಿ ಗಳನ್ನು ಬಂಧನ ಮಾಡಿದರೇ ಮಾತ್ರ ಅರಣ್ಯ ಇಲಾಖೆ ಉಳಿದ ಮರಗಳನ್ನು ರಕ್ಷಣೆ ಮಾಡಲುಸಾಧ್ಯ. ಇಲ್ಲದಿದ್ದರೆ ಖದೀಮರ ಅಟ್ಟಹಾಸಕ್ಕೆಉಳಿದ ಮರಗಳು ಕಳೆದುಕೊಳ್ಳಬೇಕಾಗುತ್ತದೆ ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.