ಬೆಲೆ ಏರಿಕೆ ನಡುವೆ ಸಂಕ್ರಾಂತಿ ಸಂಭ್ರಮ


Team Udayavani, Jan 14, 2023, 11:32 AM IST

ಬೆಲೆ ಏರಿಕೆ ನಡುವೆ ಸಂಕ್ರಾಂತಿ ಸಂಭ್ರಮ

ದೇವನಹಳ್ಳಿ: ಸತತ ಮಳೆ ಮತ್ತು ಬೆಲೆ ಏರಿಕೆ ನಡುವೆಯೂ ಸುಗ್ಗಿಹಬ್ಬ ಸಂಕ್ರಾಂತಿಗೆ ಸಿದ್ಧತೆಗಳು ನಡೆಯುತ್ತಿದೆ. ಮಾರುಕಟ್ಟೆಗಳಲ್ಲಿ ಬೆಲೆ ಏರಿಕೆಯಾಗಿದ್ದರೂ, ವಸ್ತುಗಳ ಖರೀದಿ ಭರಾಟೆ ಜೋರಾಗಿದೆ.

ಬೆಲೆ ಏರಿಕೆಗೂ ಜಗ್ಗದೇ ಸಂಕ್ರಾಂತಿ ಹಬ್ಬದ ಸಂಭ್ರಮಕ್ಕೆ ನಾಗರಿಕರು ಸಕಲ ಸಿದ್ಧತೆ ನಡೆಸುತ್ತಿದ್ದು, ಅವರೇಕಾಯಿ, ಕಡಲೇಕಾಯಿ, ಗೆಣಸು, ಕಬ್ಬು, ಹೂವು ಹಾಗೂ ಅಗತ್ಯ ದಿನಬಳಕೆ ವಸ್ತುಗಳ ಬೆಲೆ ದುಬಾರಿಯಾಗಿದ್ದರೂ, ಗ್ರಾಹಕರು ಖರೀದಿ ಮಾಡಿದರು. ಈಗಾಗಲೇ ಮಾರುಕಟ್ಟೆಗೆ ಗೆಣಸು, ಕಬ್ಬು, ಅವರೇಕಾಯಿ, ಕಡಲೇಕಾಯಿ, ಹೂಹಣ್ಣು, ಎಳ್ಳುಬೆಲ್ಲ ದಾಳಿ ಮಾಡಿದ್ದು, ಖರೀದಿ ಭರಾಟೆಯೂ ಜೋರಾಗಿದೆ.

ಹಬ್ಬದ ದಿನದಂದು ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆಯಲಿವೆ. ಕಳೆದ ಎರಡು ವರ್ಷಗಳಿಂದ ಕೊರೊನಾ ದಿಂದ ಸಂಕ್ರಾಂತಿ ಹಬ್ಬದ ಕಳೆಯನ್ನೇ ಕಿತ್ತುಕೊಂಡಿತ್ತು. ಈ ಬಾರಿ ಕೊರೊನಾ ಇಳಿಮುಖ ಆಗಿದ್ದು, ಜಿಲ್ಲಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸಂಕ್ರಾಂತಿ ಹಬ್ಬ ಕಳೆಗಟ್ಟುವಂತೆ ಮಾಡಲಾಗುತ್ತಿದೆ. ಅಕಾಲಿಕ ಮಳೆಯಿಂದ ಬೆಳೆ ನಾಶವಾಗಿ ಈ ಬಾರಿ ಮಾರುಕಟ್ಟೆಗೆ ಅವರೇಕಾಯಿ ಮತ್ತು ಕಡಲೇಕಾಯಿ ಕಡಿಮೆ ಪ್ರಮಾಣದಲ್ಲಿ ಬಂದಿದ್ದು, ಬೆಲೆಯೂ ಹೆಚ್ಚಳವಾಗಿದೆ. ಕಳೆದ ಕೆಲ ದಿನಗಳಿಂದ ನೂರು ರೂ.ಗೆ ಎರಡು ಕೆ.ಜಿ. ಮಾರಾಟವಾಗುತ್ತಿದ್ದ ಅವರೇಕಾಯಿ ಒಂದೂವರೆ ಕೆ.ಜಿ.ಗೆ 100 ರೂ.ಗಳಿಗೆ ಮಾರಾಟವಾಗುತ್ತಿದೆ.

ಮಾರುಕಟ್ಟೆಯಲ್ಲಿ ವಾಹನಗಳ ದಟ್ಟಣೆ: ಹಬ್ಬದ ದಿನದಂದು ಕಡಲೆಕಾಯಿ ಮತ್ತು ಅವರೆಕಾಯಿ ಬೇಯಿಸಿ ತಿನ್ನುವ ಸಂಪ್ರದಾಯವಿದ್ದು, ಕಬ್ಬು, ಗೆಣಸು, ಎಳ್ಳು-ಬೆಲ್ಲ ಹಂಚುತ್ತಾರೆ. ಕಡಲೇಕಾಯಿ ಕೆ.ಜಿ.ಗೆ 150 ರೂಪಾಯಿ, ಸೊಗಡು ಅವರೇಕಾಯಿ 70 ರೂ., ಕಬ್ಬು ಒಂದು ಜೊಲ್ಲೆಗೆ 60 ರೂ., ಗೆಣಸು 40 ರೂ.ಗಳಂತೆ ಮಾರಾಟವಾಗುತ್ತಿದ್ದು, ಹೂವು, ಹಣ್ಣು ಬೆಲೆ ಗಗನಕ್ಕೇರಿದೆ. ಹಬ್ಬದ ವಿಶೇಷಕ್ಕಾಗಿ ಗ್ರಾಹಕರು ಉತ್ಸಹದಿಂದ ವ್ಯಾಪಾರ ನಡೆಸುತ್ತಿದ್ದರು. ಬಜಾರ್‌ ರಸ್ತೆಯಲ್ಲಿ ಸಂಕ್ರಾಂತಿ ಹಬ್ಬದ ಹಿನ್ನೆಲೆ ಕಬ್ಬು, ಕಡಲೇಕಾಯಿ, ಗೆಣಸು ಹಾಗೂ ಇತರೆ ಪೂಜಾ ಸಾಮಾಗ್ರಿ ಖರೀದಿಸಲು ಹಲವಾರು ಜನರು ಬರುತ್ತಿರುವುದರಿಂದ ವಾಹನಗಳ ದಟ್ಟಣೆಯಿಂದ ಟ್ರಾಫಿಕ್‌ ಹೆಚ್ಚಾಗಿತ್ತು.

ರಾಸುಗಳಿಗೆ ಸಿಂಗಾರ, ಧಾನ್ಯಗಳಿಗೆ ಪೂಜೆ :

ಗ್ರಾಮೀಣ ಪ್ರದೇಶಗಳಲ್ಲಿ ರಾಸುಗಳಿಗೆ ಸಿಂಗಾರ ಮಾಡಿ, ಮೆರವಣಿಗೆ ಮಾಡುವ ಪದ್ಧತಿ ಇದೆ. ಅವುಗಳನ್ನು ಸಿಂಗರಿಸಲು ಅಲಂಕಾರಿಕ ವಸ್ತುಗಳನ್ನು ತೆಗೆದುಕೊಂಡು ಹೋಗಲಾಗುತ್ತಿತ್ತು. ಹೊಸದಾಗಿ ದವಸ, ಧಾನ್ಯಗಳಿಗೆ ಸುಗ್ಗಿಯ ಕಾಲದಲ್ಲಿ ಪೂಜೆ ಮಾಡುವ ಪದ್ಧತಿ ಇಂದಿಗೂ ನಡೆದು ಬಂದಿದೆ. ಆಗಿನ ಕಾಲದ ಹಬ್ಬದ ವಾತಾವರಣವೇ ಬೇರೆ ಇತ್ತು. ಆಧುನಿಕ ಪದ್ಧತಿ ಬೆಳೆದಂತೆ ಹಬ್ಬದ ಸಂಭ್ರಮ ಬದಲಾಗುತ್ತಿದೆ ಎಂದು ಹಿರಿಯರು ಅಭಿಪ್ರಾಯ ಹಂಚಿಕೊಂಡರು.

ರೈತರಿಗೆ ಸಂಕ್ರಾಂತಿ ಸುಗ್ಗಿ ಹಬ್ಬವಾಗಿದೆ. ಈಗ ಹಬ್ಬದ ಕಲೆಯೇ ಕಾಣುತ್ತಿಲ್ಲ. ಆ ದಿನಗಳಲ್ಲಿ ಹಬ್ಬವೆಂದರೆ ಗ್ರಾಮಗಳಲ್ಲಿ ಹಸಿರು ತೋರಣ ಕಟ್ಟಿ ರಾಸುಗಳನ್ನು ಶೃಂಗರಿಸಿ ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಿದ್ದರು. ಈಗ ಹಬ್ಬಕ್ಕೆ ಆ ಕಳೆ ಇಲ್ಲದಾಗಿದೆ. -ನಾರಾಯಣಸ್ವಾಮಿ, ರೈತ

ಸಂಕ್ರಾಂತಿ ಹಬ್ಬ ಸುಗ್ಗಿ ಹಬ್ಬದ ರೀತಿ ಆಚರಿಸುತ್ತೇವೆ. ಮಾರುಕಟ್ಟೆಗೆ ಅಗತ್ಯ ವಸ್ತುಗಳು, ಹೂವು, ಹಣ್ಣುಗಳ ಬೆಲೆ ಹೆಚ್ಚಾಗಿದೆ. ಅವರೇಕಾಯಿ, ಕಬ್ಬು, ಗೆಣಸು, ಎಳ್ಳೂ-ಬೆಲ್ಲ ದರ ಹೆಚ್ಚಾಗಿದ್ದು, ಎಷ್ಟೇ ಬೆಲೆ ಏರಿಕೆಯಾದರೂ ಹಬ್ಬ ಮಾಡುವುದು ನಿಲ್ಲಿಸಲು ಆಗುವುದಿಲ್ಲ. – ಗಾಯತ್ರಿ, ಗೃಹಿಣಿ

ಟಾಪ್ ನ್ಯೂಸ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.