ಸರ್ವಜ್ಞ ವಿಚಾರಧಾರೆ ಮೈಗೂಡಿಸಿಕೊಳ್ಳಿ
Team Udayavani, Feb 21, 2021, 12:12 PM IST
ದೇವನಹಳ್ಳಿ: ಸಂತ ಕವಿ ಸರ್ವಜ್ಞ ವಿಚಾರಧಾರೆ ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಎಂದು ಶಿರಸ್ತೇದಾರ್ ನಾಗೇಶ್ ತಿಳಿಸಿದರು.
ನಗರದ ಮಿನಿವಿಧಾನಸೌಧದ ನ್ಯಾಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂತ ಕವಿ ಸರ್ವಜ್ಞ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಸಮಾಜದಲ್ಲಿ ತಾಂಡವಾಡುತ್ತಿದ್ದ ಮೂಢನಂಬಿಕೆ, ಜಾತಿ ಪದ್ಧತಿ, ಅಸಮಾನತೆ, ಆಚಾರ ವಿಚಾರ ಸೇರಿದಂತೆ ಹಲವಾರು ವಿಚಾರಗಳನ್ನು ತಮ್ಮದೇ ಆದ ಶೈಲಿಯಲ್ಲಿ ಪ್ರತಿನಿತ್ಯ ಜನರು ಬಳಸುವ ಆಡು ಬಾಷೆಯಲ್ಲಿ ಮೂರು ಸಾಲಿನ ತ್ರಿಪದಿ ಮೂಲಕ ತಿಳಿಸಿಕೊಟ್ಟಿರುವುದು ಇವರ ವೈಚಾರಿಕ ಸಿದ್ಧಾಂತ ಎಂದರು.
ತ್ರಿಪದಿ ಮೂಲಕ ಸಮಾಜದ ಅಂಕು ಡೊಂಕುಗಳ ಬಗ್ಗೆ ತಿಳಿಸಿಕೊಟ್ಟರು. ಮಹಾನೀಯರ ಆದರ್ಶ ವಿಚಾರಧಾರೆ ಮುಂದಿನ ಪೀಳಿಗೆಗೂ ಪರಿಚಯ ಮಾಡಿಸಿದಾಗ ಮಾತ್ರ ಜಯಂತಿಗೆ ನಿಜವಾದ ಅರ್ಥ ಬರುತ್ತದೆ. ಮಹಾನೀಯರು ಹಾಕಿಕೊಟ್ಟಂತಹ ದಾರಿಯಲ್ಲಿ ನಡೆಯುವಂತಾಗಬೇಕು ಎಂದರು.
ಶಿರಸ್ತೇದಾರ್ ಭರತ್ ಹಾಗೂ ತಾಲೂಕು ಕಚೇರಿ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ