ದಲಿತ ಕೇರಿಗಿಲ್ಲ ಆಶ್ರಯ ಭಾಗ್ಯ


Team Udayavani, Dec 23, 2021, 11:19 AM IST

ದಲಿತರ ಕೇರಿ

ದೇವನಹಳ್ಳಿ: ತಾಲೂಕಿನ ಕುಂದಾಣ ಹೋಬಳಿ ಯ ಜಾಲಿಗೆ ಗ್ರಾಪಂ ವ್ಯಾಪ್ತಿಯ ಅರದೇಶನಹಳ್ಳಿಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಕಾಲೋನಿ ಯಲ್ಲಿ ಇದುವರೆಗೂ ಆಶ್ರಯ ಭಾಗ್ಯ ಕಲ್ಪಿಸುವಲ್ಲಿ ಈ ಭಾಗದ ಜನಪ್ರತಿನಿಧಿಗಳು ಮತ್ತು ಅಧಿ ಕಾರಿಗಳು ಸಂಪೂರ್ಣವಾಗಿ ವಿಫ‌ಲರಾಗಿದ್ದಾರೆ ಎಂಬುದು ದಲಿತ ಕೇರಿ ಜನರ ಆರೋಪವಾಗಿದೆ.

ಸರ್ಕಾರವು ದಲಿತರ ಕಾಲೋನಿಗಳ ಅಭಿವೃದ್ಧಿಗೆ ಕೋಟ್ಯಂತರ ರೂ.ಖರ್ಚು ಮಾಡುತ್ತಿದ್ದರೂ ಸಹ ಇಂದಿಗೂ ಸಹ ಮೂಲ ಸೌಕರ್ಯಗಳ ಕೊರತೆ ಹಾಗೂ ಒಂದೊಂದು ಮನೆಯಲ್ಲಿ ಮೂರ್‍ನಾಲ್ಕು ಕುಟುಂಬಗಳು ವಾಸಿಸುವ ಸ್ಥಿತಿ ಬಂದೊದಗಿದೆ. ಸರ್ಕಾರ ಆಶ್ರಯ ಯೋಜನೆಗಳಲ್ಲಿ ಹೆಚ್ಚಿನ ಮನೆ ನೀಡುತ್ತೇವೆ ಎಂದು ಹೇಳುತ್ತಾರೆ. ಕೇವಲ ಸರ್ಕಾರದ ಕಡತಗಳಲ್ಲಿ ಸೀಮಿತವಾಗುತ್ತಿದೆ. ಬಡವರಿಗೆ ನಿವೇಶನದ ಸೂರು ಕನಸಾಗಿಯೇ ಉಳಿಯುತ್ತಿದೆ ಎಂದು ದಲಿತ ಕುಟುಂಬಗಳ ಅಳಲಾಗಿದೆ.

ಡೀಸಿಗೂ ಸಹ ಮನವಿ: ಮಳೆಯಿಂದಾಗಿ ಕಾಲೋನಿಯಲ್ಲಿನ ಸುಮಾರು 3-4 ಮನೆಗಳು ಕುಸಿದಿದ್ದು, ಸ್ಥಳ ಪರಿಶೀಲನೆಗೆ ಅಧಿಕಾರಿಗಳು ಮೇಲ್ನೋಟಕ್ಕೆ ಬಂದು ಪರಿಶೀಲಿಸಿ ಹೋಗಿದ್ದಾರೆ. ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಸಂತ್ರಸ್ತರಿಗೆ ಪರಿಹಾರ ನೀಡಿಲ್ಲ. ಸುಮಾರು ವರ್ಷಗಳಿಂದ ಸ್ಮಶಾನ ಮತ್ತು ನಿವೇಶನಕ್ಕಾಗಿ ಹೋರಾಟ ಮಾಡಲಾಗುತ್ತಿದ್ದರೂ ಯಾವೊಬ್ಬ ಅಧಿಕಾರಿಯೂ ಇತ್ತ ಗಮನಹರಿಸುತ್ತಿಲ್ಲ.

ಇದನ್ನೂ ಓದಿ: ಜನರ ಉತ್ತಮ ಭವಿಷ್ಯದ ಬದುಕನ್ನು ನಿರ್ಮಿಸುವ ಸರಕಾರ ನಮ್ಮದು: ಸಿಎಂ ಬೊಮ್ಮಾಯಿ

ಈ ಬಗ್ಗೆ ಜಿಲ್ಲಾಧಿಕಾರಿಗೂ ಸಹ ಮನವಿ ಮಾಡಲಾಗಿದೆ ಎಂದು ದಲಿತ ಮುಖಂಡ ಅರದೇಶನಹಳ್ಳಿ ಕುಮಾರ್‌ ಅವರ ಆರೋಪವಾಗಿದೆ. ಈ ಕೇರಿ ಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಪರಿಶಿಷ್ಟ ಜಾತಿಯ 40 ಬಡ ಕುಟುಂಬಗಳು ಬಹುತೇಕ ಕಲ್ಲುಮನೆ, ಸೀಟುಗಳು, ಹೆಂಚಿನ ಮನೆಗಳಲ್ಲಿ ವಾಸವಿದ್ದು, 2 ಸಾವಿರ ಜನಸಂಖ್ಯೆ ಹೊಂದಿದೆ.

ಒತ್ತುವರಿ ಆರೋಪ: ಒಂದೊಂದು ಮನೆಯಲ್ಲಿ 3-4 ಕುಟುಂಬಗಳು ವಾಸವಿದ್ದಾರೆ. ದಲಿತ ಕೇರಿಗೆ ಸ್ಮಶಾನದ ಜಾಗವಿಲ್ಲ. ಸುಮಾರು 80-90 ವರ್ಷದ ಹಿಂದಿನಿಂದಲೂ 10 ಗುಂಟೆ ಜಾಗದ ಸರ್ವೆ ನಂ.57ರಲ್ಲಿ ಸ್ಮಶಾನದ ಜಾಗವಿತ್ತು. ಆ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದು, ಅದನ್ನು ಅಧಿಕಾರಿಗಳು ಮಂಜೂರು ಮಾಡಿಕೊಟ್ಟಿರುತ್ತಾರೆ.

ವಾಸ್ತವದಲ್ಲಿ ಅದು ಗೋಮಾಳ ಜಾಗವಾಗಿದೆ. ನಿವೇಶನಗಳಿಗಾಗಿ ಸರ್ವೆ ನಂ.69ರಲ್ಲಿ ಸರ್ಕಾರಿ ಜಮೀನು ಇದ್ದು, ಅದನ್ನು ಬಡವರಿಗೆ ನಿವೇಶನಕ್ಕಾಗಿ ಮಂಜೂರು ಮಾಡುವುದನ್ನು ಬಿಟ್ಟು ಆ ಜಾಗವನ್ನು ಸ್ಮಶಾನಕ್ಕಾಗಿ ಮೀಸಲಿಟ್ಟಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಗ್ರಾಮಸ್ಥರು ಆಕ್ರೊಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.