ಎನ್‌ಎಸ್‌ಎಸ್‌ನಿಂದ ಸೇವಾ ಮನೋಭಾವ


Team Udayavani, Oct 11, 2020, 2:03 PM IST

BR-TDY-2

ವಿಜಯಪುರ: ಎನ್‌ಎಸ್‌ಎಸ್‌ ಶಿಬಿರದಿಂದ ಕಾಲೇಜು ವಿದ್ಯಾರ್ಥಿಗಳಿಗೆ ಸೇವಾ ಮನೋಭಾವ ಬೆಳೆಯುತ್ತದೆ ಎಂದು ಚನ್ನರಾಯಪಟ್ಟಣ ಠಾಣೆ ಪಿಎಸ್‌ಐ ಶರಣಪ್ಪ ತಿಳಿಸಿದರು.

ಚನ್ನರಾಯಪಟ್ಟಣ ಹೋಬಳಿ ಐಬಸಾಪುರ ಗ್ರಾಮದಲ್ಲಿ ಐಐಬಿಎಸ್‌ ಕಾಲೇಜು ವತಿಯಿಂದ ನಡೆದ ಎನ್‌ಎಸ್‌ಎಸ್‌ ಶಿಬಿರ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರಿಗೆ ಸ್ವಚ್ಛತೆ, ಪರಿಸರದ ಬಗ್ಗೆ ಅರಿವು ಮೂಡಿಸಬೇಕು. ಜತೆಗೆ ಕೋವಿಡ್ ಬಗ್ಗೆಯೂ ಹೆಚ್ಚಿನ ಅರಿವು ಮೂಡಿಸಬೇಕು.ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯವಾಗಿ ಧರಿಸುವಂತೆ ತಿಳಿ ಹೇಳಬೇಕು ಎಂದು ತಿಳಿಸಿದರು.

ಹಾಗೆಯೇ ಶಿಬಿರದಲ್ಲಿ ಹಲವಾರು ರೀತಿಯ ಆರೋಗ್ಯ ತಪಾಸಣೆ ಕಾರ್ಯ ಕ್ರಮಗಳನ್ನು ಆಯೋಜಿಸಿದರೆ ಬಡ ಜನತೆಗೆ ಅನುಕೂಲವಾಗುತ್ತದೆ ಎಂದರು.

ಎಂಪಿಸಿಎಸ್‌ ಮಾಜಿ ಅಧ್ಯಕ್ಷ ರಾಜಣ್ಣ ಮಾತನಾಡಿ, ನಮ್ಮ ಗ್ರಾಮದಲ್ಲಿ ಇಂತಹ ಶಿಬಿರಗಳನ್ನು ಆಯೋಜಿಸಿದರೆ ಗ್ರಾಮಕ್ಕೂಒಳ್ಳೆಯ ಕೆಲಸಗಳಾಗುತ್ತವೆ. ಈ ಶಿಬಿರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಸಿ ನೆಟ್ಟರೆಪರಿಸರ ಕಾಪಾಡಬಹುದು. ವಿದ್ಯಾರ್ಥಿಗಳು ನಮ್ಮ ಗ್ರಾಮವನ್ನು ಆಯ್ಕೆ ಮಾಡಿಕೊಂಡಿರುವುದು ಅಭಿನಂದನಾರ್ಹ. ಶಿಬಿರಾರ್ಥಿಗಳಿಗೆ ನಮ್ಮ ಗ್ರಾಮಸ್ಥರೆಲ್ಲರೂ ಸಹಕಾರ ನೀಡುತ್ತೇವೆಂದರು .

ಐಐಬಿಎಸ್‌ಕಾಲೇಜು ಪ್ರಾಂಶುಪಾಲ ರಾದ ಡಾ.ತ್ರಿಪುರಾನೇಮಿಜಗ್ಗ, ಡಾ.ಬಸವ ರಾಜ್, ಐ.ಎಸ್‌. ಆನಂದ್‌, ಆಂಜಿನಪ್ಪ, ಟಿ. ರಾಮೇಗೌಡ, ಶಂಕರಪ್ಪ,ಪಿಡಿಒಆಶಾ ರಾಣಿ,ಮಂಡಿಬೆಲೆಪಿಡಿಒ ಮುನಿರಾಜು, ಗ್ರಾಪಂ ಮಾಜಿಸದಸ್ಯ ವೆಂಕಟೇಶ್‌, ವಿದ್ಯಾರ್ಥಿಗಳು, ಗ್ರಾಮಸ್ಥರು ಇದ್ದರು.

 

ಗುಣಮಟ್ಟದ ಹಾಲು ಸರಬರಾಜಿಗೆ ಆದ್ಯತೆ ನೀಡಿ :

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹಾಲು ಉತ್ಪಾದಕರ ಸಂಘದ2020-21ನೇ ಸರ್ವ ಸದಸ್ಯರ ಸಾಮಾನ್ಯ ಸಭೆ ಸಂಘದ ಅಧ್ಯಕ್ಷ ಆವಲಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಪಂ ಮಾಜಿ ಸದಸ್ಯ ಎನ್‌.ಅರವಿಂದ್‌ ಮಾತನಾಡಿ, ಹಾಲು ಉತ್ಪಾದಕರು ರಾಸುಗಳಿಗೆ ಹಸಿರು ಹಾಗೂ ಒಣ ವೇವು ಮತ್ತು ಪಶುಆಹಾರವನ್ನು ಸಮತೋಲನವಾಗಿ ನೀಡಿ ಗುಣಮಟ್ಟದ ಹಾಲು ಸರಬರಾಜು ಮಾಡಿದರೆ ಮಾತ್ರ ಸಂಘ ಬೆಳೆಯುತ್ತದೆ. ಸಂಘದ ಸದಸ್ಯರು ಪ್ರೋತ್ಸಾಧನ ಪಡೆಯಲು ತಮ್ಮ ಭ್ಯಾಂಕ್‌ ಖಾತೆಗೆ ಆಧಾರ್‌ಕಾರ್ಡ್‌ ಅನ್ನು ಲಿಂಕ್‌ ಮಾಡಿದರೆ ತಮ್ಮ ಖಾತೆಗೆ ಹಣ ನೇರವಾಗಿ ಸಂದಾಯವಾಗುತ್ತದೆ ಎಂದರು.

ಇದೇ ವೇಳೆ ಗ್ರಾಹಕರು ಸಂಘದಲ್ಲಿ ಹಾಲು ನೀಡಿದಾಗ ರಶೀದಿ ನೀಡುತ್ತಿಲ್ಲ ಎಂದು ಪ್ರಶ್ನಿಸಿದಾಗ, ಇದಕ್ಕೆ ಉತ್ತರಿಸಿದ ಕಾರ್ಯದರ್ಶಿ ಶ್ರೀನಿವಾಸ್‌ಕೆಲವು ತಾಂತ್ರಿಕಕಾರಣಗಳಿಂದ ಬಿಲ್‌ ನೀಡಲಾಗುತ್ತಿಲ್ಲ. ಇನ್ನು2-3 ದಿನಗಳಲ್ಲಿ ಇಲ್ಲಿರುವಯಂತ್ರ ಸರಿಪಡಿಸಿ ಬಿಲ್‌ ನೀಡುತ್ತೇವೆಂದರು. ಕಿಸಾನ್‌ಕಾರ್ಡ್‌ ಮೂಲಕ ರೈತರು ಅರ್ಜಿ ಸಲ್ಲಿಸಿದ್ದುಇದುವರೆಗೆ ಬ್ಯಾಂಕಿನ ಅಧಿಕಾರಿಗಳು ಯಾವುದೇ ರೀತಿಸ್ವಂದಿಸಿಲ್ಲ ಎಂದು ಗ್ರಾಹಕರ ದೂರಿಗಾಗಿ ಪ್ರತಿಕ್ರಿಯಿಸಿದ ಉಪ ವ್ಯವಸ್ಥಾಪಕ ಗೋಪಾಲಕೃಷ್ಣ, ಬ್ಯಾಂಕಿನ ಅಧಿಕಾರಿಗಳುಡಿಸೆಂಬರ್‌ ನಂತರ ಒಂದು ಡೇರಿಗೆ30 ಗ್ರಾಹಕರಂತೆ ಗುರುತಿಸಿ ಹಂತಹಂತವಾಗಿ ಸಾಲ ವಿತರಿಸುವುದಾಗಿ ತಿಳಿಸಿದ್ದಾರೆಂದರು. ಎಪಿಎಂಸಿ ನಿರ್ದೇಶಕ ಎಸ್‌.ಆರ್‌. ಮುನಿರಾಜು, ಹಾಲುಉತ್ಪಾದಕರ ಸಂಘದ ಅಧ್ಯಕ್ಷ ಆವಲಪ್ಪ, ಬೆಂಗಳೂರು ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಗೋಪಾಲಕೃಷ್ಣ, ಎಲ್‌.ವಿ.ನಾಗರಾಜು, ವಿಸ್ತರಣಾಧಿಕಾರಿ ಅನಿತಾ, ಗ್ರಾಪಂ ಸದಸ್ಯ ಟಿ.ವಿ.ವೆಂಕಟೇಶ್‌, ಗಂಗರಾಜು, ಸಂಘದಕಾರ್ಯದರ್ಶಿ ಶ್ರೀನಿವಾಸ, ನಿರ್ದೇಶಕರು ಇದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.