ವಿಶಕ್ವೆ ಹಿಂದೂ ಧರ್ಮ ಸಾರಿದ ಮಹಾಪುರುಷ ಶಂಕರಾಚಾರ್ಯ

ಮಹಾನ್‌ ಚೇತನ ವಾಣಿಯನ್ನು ಉಪಯೋಗಿಸಿಕೊಳ್ಳುವ ಅವಕಾಶವನ್ನು ಸರ್ಕಾರ ನಮಗೆ ಕಲ್ಪಿಸಿಕೊಟ್ಟಿದೆ

Team Udayavani, May 7, 2022, 5:46 PM IST

ವಿಶಕ್ವೆ ಹಿಂದೂ ಧರ್ಮ ಸಾರಿದ ಮಹಾಪುರುಷ ಶಂಕರಾಚಾರ್ಯ

ದೇವನಹಳ್ಳಿ: ಶಾರದಾಂಬೆಯ ಭಕ್ತರಾಗಿದ್ದ ಆದಿಗುರು ಶಂಕರಾಚಾರ್ಯರು ಅದ್ವೈತ ಸಿದ್ಧಾಂತದ ಪ್ರವರ್ತಕರಾಗಿ ಸಮಾಜದ ಏಳಿಗೆಗಾಗಿ ಶ್ರಮಿಸಿದರು ಎಂದು ಶಾಸಕ ಎಲ್‌. ಎನ್‌. ನಾರಾಯಣಸ್ವಾಮಿ ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿಯ ನ್ಯಾಯಾಲಯದ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ನಡೆದ ಶಂಕರಾಚಾರ್ಯರ ಜಯಂತಿಯಲ್ಲಿ ಮಾತನಾಡಿ, ಹಿಂದೂ ಧರ್ಮ ಹಾಗೂ ಪರಂಪರೆ ಹಿರಿಮೆಯನ್ನು ವಿಶ್ವಕ್ಕೆ ಸಾರಿದವರು ಶಂಕರಾಚಾರ್ಯರು. ನಾವೆಲ್ಲರೂ ಶಂಕರಾಚಾರ್ಯರ ತತ್ವಾದರ್ಶ ಅಳವಡಿಸಿಕೊಂಡು ಮುನ್ನಡೆಯೋಣ ಎಂದರು.

ಧಾರ್ಮಿಕ ಜಾಗೃತಿ: ಮಹಾನ್‌ ಚೇತನ ವಾಣಿಯನ್ನು ಉಪಯೋಗಿಸಿಕೊಳ್ಳುವ ಅವಕಾಶವನ್ನು ಸರ್ಕಾರ ನಮಗೆ ಕಲ್ಪಿಸಿಕೊಟ್ಟಿದೆ. ಶಂಕರಾಚಾರ್ಯರು ಧಾರ್ಮಿಕ ವಿಚಾರಗಳನ್ನು ಜಾಗೃತಗೊಳಿಸಿದ್ದು, ಅವು ಇಂದಿಗೂ ತಮ್ಮ ಮೌಲ್ಯ ಕಾಪಾಡಿಕೊಂಡಿದೆ. ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ನಾವು ಸಹ ದೈವವನ್ನು ನಂಬಿದ್ದೇವೆ. ಶೃಂಗೇರಿ ಶಾರದಾಪೀಠಕ್ಕೆ ದೇವೇಗೌಡರು ಸಾಕಷ್ಟು ಬಾರಿ ಭೇಟಿ ನೀಡಿ ಧಾರ್ಮಿಕತೆಗೆ ಹೆಚ್ಚಿನ ಒತ್ತನ್ನು ನೀಡಿದ್ದಾರೆ ಎಂದರು.

ಕಾರ್ಯಕ್ರಮ ಆಯೋಜಿಸಿ: ತಾಲೂಕಿನ ಎಲ್ಲಾ ಬ್ರಾಹ್ಮಣ ಸಮುದಾಯದವರನ್ನು ಒಂದೆಡೆ ಸೇರಿಸಿ ಗೀತೊಪನಿಷತ್ತು, ವೇದಗಳ ಮಂತ್ರ ಒಂದೇ ಬಾರಿ ಪಾರಾಯಣವಾಗುವ ಒಂದು ಕಾರ್ಯಕ್ರಮ ಆಯೋಜಿಸುವಂತಾಗಬೇಕು. ಶಂಕರಾಚಾರ್ಯರ ತತ್ವಾದರ್ಶ ಅಳವಡಿಸಿಕೊಂಡಿದ್ದೇನೆ. ಹರಿಜನ ಎಂದು ಬಂದಿರುವುದು ಮುಕ್ಕೋಟಿ ದೇವರುಗಳಿಂದ ಬಂದಿರುತ್ತದೆ. ಲೋಕಕಲ್ಯಾಣಕ್ಕಾಗಿ ಶಂಕರಾಚಾರ್ಯರು ಶ್ರಮಿಸಿದರು ಎಂದರು.

ಶಾರದಾ ಪೀಠ ಸ್ಥಾಪನೆ: ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ದೇ.ಸೂ. ನಾಗಾರಾಜ್‌ ಮಾತನಾಡಿ, ಭಾರತದ 4 ಕಡೆಗಳಲ್ಲಿ ಶಂಕರಾಚಾರ್ಯರು ಪೀಠಗಳನ್ನು ಸ್ಥಾಪಿಸಿದರು. ಅದರಲ್ಲೂ ನಮ್ಮ ಕರ್ನಾಟಕ ರಾಜ್ಯದ ಶೃಂಗೇರಿ ಶಾರದಾ ಪೀಠವನ್ನು ಪ್ರತಿಷ್ಠಾಪಿಸಿದರು. ಆತ್ಮ ಮತ್ತು ಪರಮಾತ್ಮನ ಬಗ್ಗೆ ಪ್ರತಿಪಾದಿಸುತ್ತಾ ಅವನತಿಯತ್ತ ಸಾಗುತ್ತಿದ್ದ ಸನಾತನ ಧರ್ಮ ಮತ್ತು ಸಂಸ್ಕೃತಿಯನ್ನು ಜಗತ್ತಿಗೆ ಸಾರಿದ್ದಾರೆ ಎಂದರು.

ಗ್ರೇಡ್‌-2 ತಹಶೀಲ್ದಾರ್‌ ಉಷಾ, ಶಿರಸ್ತೆದಾರ್‌ ಭರತ್‌, ಅರ್ಚಕರ ಸಂಘದ ಗೌರವಾಧ್ಯಕ್ಷ ಶ್ರೀಧರ್‌ ದೀಕ್ಷಿತ್‌, ಬ್ರಾಹ್ಮಣದ ಸಂಘದ ಟೌನ್‌ ಅಧ್ಯಕ್ಷ ಶಿವಪ್ರಕಾಶ್‌, ಬಿದಲೂರು ಎಂಪಿಸಿಎಸ್‌ ಮಾಜಿ ಅಧ್ಯಕ್ಷ ಶಶಿಧರ್‌, ಸಾದಹಳ್ಳಿ ಪ್ರೌಢಶಾಲೆ ಶಿಕ್ಷಕಿ ಪ್ರತಿಮಾ, ಮುಖಂಡ ದಂಡಿಗಾನಹಳ್ಳಿ ರಘು, ಸತೀಶ್‌, ಡಿ.ಕೆ. ಮಹೇಂದ್ರಕುಮಾರ್‌, ಶಂಕರ್‌, ವಿನೋದ್‌, ಹರ್ಷ ದೇ.ಸೂ. ನಾಗರಾಜು ಹಾಗೂ ಮತ್ತಿತರರಿದ್ದರು.

ದಾರ್ಶನಿಕರ ಚಿಂತನೆ ಜೀವನದಲ್ಲಿ ಅಳವಡಿಸಿಕೊಳ್ಳಿ
ಸಮಾಜ ಸುಧಾರಣೆಯಲ್ಲಿ ಶಂಕರಾಚಾರ್ಯರು ಪ್ರಮುಖ ಪಾತ್ರವಹಿಸಿದ್ದರು. ಸಮಾಜದಲ್ಲಿ ಬೇರೂರಿದ್ದ ಕಂದಾಚಾರ ಮೂಢನಂಬಿಕೆಗಳ ವಿರುದ್ಧ ಸಮರ ಸಾರಿದ್ದರು. ಶ್ರೇಷ್ಠ ವ್ಯಕ್ತಿಗಳ ಜಯಂತಿಯಿಂದ ಮೌಲ್ಯಯುತ ಅರ್ಥಪೂರ್ಣ ಸಂದೇಶ ಸಮಾಜಕ್ಕೆ ತಲುಪಲು ಸಾಧ್ಯ. ಮಹನೀಯರ, ದಾರ್ಶನಿಕರ ಚಿಂತನೆ ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ನಡೆಯಬೇಕು ಎಂದು ತಹಶೀಲ್ದಾರ್‌ ಶಿವರಾಜ್‌ ಹೇಳಿದರು.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.