28ರಂದು ಅಂಗಡಿ ಮುಗ್ಗಟ್ಟು ಬಂದ್‌


Team Udayavani, Feb 26, 2020, 4:36 PM IST

br-tdy-1

ದೊಡ್ಡಬಳ್ಳಾಪುರ:ನಗರದಲ್ಲಿ ತಲೆ ಎತ್ತುತ್ತಿರುವ ಮಾಲ್‌ಗ‌ಳು, ಆನ್‌ಲೈನ್‌ ಕಂಪನಿಗಳಿಂದ ವ್ಯಾಪಾರಸ್ಥರಿಗೆ ಹೊಡೆತ ಬೀಳುತ್ತಿದೆ. ಇದಕ್ಕೆ ಪೂರಕವಾದ ಸರ್ಕಾರದ ನೀತಿಗಳ ವಿರುದ್ಧ ಹಾಗೂ ವ್ಯಾಪಾರಸ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 28ರಂದು ತಾಲೂಕಿನಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್‌ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ದಿನಸಿ ವರ್ತಕರ ಸಂಘದ ಅಧ್ಯಕ್ಷ ಜಿ.ಎಸ್‌.ಸೋಮರುದ್ರ ಶರ್ಮಾ ತಿಳಿಸಿದರು.

ದಿನಸಿ ವರ್ತಕರ ಸಂಘದ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ದುಬಾರಿ ಬಾಡಿಗೆ, ಜೀವನ ವೆಚ್ಚಗಳಿಂದ ವ್ಯಾಪಾರಸ್ಥರು ನಷ್ಟ ಅನುಭವಿಸುತ್ತಿರುವುದು ಹೆಚ್ಚಾಗಿದೆ. ಇದಕ್ಕೆ ರಿಯಾಯಿತಿ ಎಂಬ ಹೆಸರಿನಲ್ಲಿ ದೊಡ್ಡ ಮಾಲ್‌ಗ‌ಳ ಸೆಳೆತ ಕಾರಣವಾಗಿದೆ. ಆದರೆ, ರಿಯಾಯಿತಿ ದರದಲ್ಲಿ ನೀಡುವ ದಿನಸಿ, ಇತರೆ ಸಾಮಾನು ಕಳಪೆ ಗುಣಮಟ್ಟದ್ದಾಗಿರುತ್ತದೆ ಎನ್ನುವುದನ್ನು ಗ್ರಾಹಕರು ಅರ್ಥ ಮಾಡಿಕೊಳ್ಳಬೇಕಿದೆ ಎಂದರು.

ರಿಯಾಯಿತಿ ಮೋಸದ ಜಾಲ ನಿಯಂತ್ರಣಕ್ಕೆ ಕ್ರಮ, ವ್ಯಾಪಾರಸ್ಥರ ಉಳಿವು ಹಿತ ಕಾಪಾಡಲು ಸರ್ಕಾರ ನಿಗಮ ಮಂಡಳಿ ಅಸ್ತಿತ್ವಕ್ಕೆ ತರಬೇಕು, ವ್ಯಾಪಾರಿಗಳ ಪ್ರತಿನಿಧಿಗಳಿಗೆ ವಿಧಾನ ಪರಿಷತ್ತಿನಲ್ಲಿ ಅವಕಾಶ ಕಲ್ಪಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು.

ದಿನಸಿ ವರ್ತಕರ ಸಂಘದ ಕಾರ್ಯದರ್ಶಿ ಎಂ.ಸಿ.ರಘುನಾಥ್‌ ಮಾತನಾಡಿ, ನಗರ ಪ್ರದೇಶಗಳಲ್ಲಿದ್ದ ಮಾಲ್‌ಗ‌ಳು ಇಂದು ತಾಲೂಕು ಮಟ್ಟಕ್ಕೂ ವ್ಯಾಪಿಸಿದ್ದು, ವ್ಯಾಪಾರವನ್ನು ನೆಮ್ಮದಿ ಹದಗೆಡಿಸುತ್ತಿವೆ. ಇತ್ತೀಚಿನ ವರದಿಯಂತೆ ಮಾಲ್‌ ಗಳಲ್ಲಿನ ವಹಿವಾಟಿನಲ್ಲಿ ಸಹಸ್ರಾರು ರೂ.ನಷ್ಟ ತೋರಿಸುತ್ತಿವೆ. ಕೊಂಡ ಬೆಲೆಗಿಂತಲೂ ಕಡಿಮೆ ಮಾರಾಟ ಮಾಡಿ, ಗ್ರಾಹಕರನ್ನು ಸೆಳೆದು ನಂತರ ಇಡೀ ಮಾರುಕಟ್ಟೆಯನ್ನು ಆಕ್ರಮಿಸುವ ಹುನ್ನಾರ ಇದಾಗಿದೆ.

ತೆರಿಗೆಯೂ ವಂಚಿಸಲಾಗುತ್ತಿದೆ. ಇದರಿಂದ ಸಣ್ಣ ಹಾಗೂ ಮಧ್ಯಮ ವರ್ಗದ ಜನ ಬೀದಿಪಾಲಾಗುತ್ತಿದ್ದು, ವ್ಯಾಪಾರಿಗಳ ಹಾಗೂ ಗ್ರಾಹಕರ ನಡುವಿನ ಬಾಂಧವ್ಯ ಮರೆಯಾಗಲಿದೆ. 28ರಂದು ನಗರದ ನೆಲದಾಂಜನೇಯಸ್ವಾಮಿ ದೇವಾಲಯ ಬಳಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಈ ಕಾರ್ಯಕ್ರಮಕ್ಕೆ ತಾಲೂಕು ವಿತರಕರ ಸಂಘ, ಔಷಧಿ ವ್ಯಾಪಾರಿಗಳ ಸಂಘ, ಬಟ್ಟೆ ವ್ಯಾಪಾರಿಗಳ ಸಂಘ, ಫ್ಯಾನ್ಸಿ ಸ್ಟೋರ್ ಮೊದಲಾದ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದರು.

ಹಿರಿಯ ವರ್ತಕ ಎಂ.ಜೆ. ರಾಜಶೇಖರ ಶೆಡ್ಡಿ ಮಾತನಾಡಿ, ಮಾಲ್‌ನಲ್ಲಿ ಇತ್ತೀಚೆಗೆ ಖರೀದಿಸಿದ್ದ ಜನಪ್ರಿಯ ಬ್ಯಾಂಡ್‌ನ‌ ಸೋಪಿನ ಗುಣಮಟ್ಟ ತೀರಾ ಕಳಪೆಯಾಗಿದ್ದ ಆರೋಪ ಕೇಳಿ ಬಂದಿದೆ. ಮಾಲ್‌ಗ‌ಳ ಉತ್ಪನ್ನಗಳ ಗುಣಮಟ್ಟದ ಸರಿಯಾದ ತನಿಖೆಯಾಗಬೇಕು. ವರ್ತಕರು ತೆರಿಗೆ ಕಟ್ಟುವ ಮೂಲಕ ಸರ್ಕಾರಕ್ಕೆ ಆಸರೆಯಾಗಿದೆ. ಆದರೆ ಮಾರ್ಟ್ ಗಳು ತೆರಿಗೆ ಕೂಡ ವಂಚಿಸುತ್ತಿದ್ದು, ವ್ಯಾಪಾರಸ್ತರ ಹಿತ ಕಾಪಾಡಲು ಸರ್ಕಾರ ಮುಂದಾಗಬೇಕು ಎಂದರು.

ಸಭೆಯಲ್ಲಿ ದಿನಸಿ ವರ್ತಕರ ಸಂಘದ ಖ ಜಾಂಚಿ ಡಿ.  ಎ ನ್‌. ರಾ ಮಯ್ಯ ಶೆಟ್ಟಿ,ನಿರ್ದೇಶಕರಾದ ಸಿ . ಎ .ರವಿ ಪ್ರಸಾದ್ , ವಿ . ಎಸ್ . ರಾಜೇಶ್,  ಕೆ.ಜಿ.ನಂಜುಂಡಯ್ಯ, ಮಾಜಿ ಅಧ್ಯಕ್ಷ ಆರ್‌.ವಿ.ಶಿವಣ್ಣ, ವಿತರಕರ ಸಂಘದ ಅಧ್ಯಕ್ಷ ಕೆ.ಎನ್‌.ಪ್ರಭಾಕರ್‌, ಕಾರ್ಯದರ್ಶಿ ಪ್ರಕಾಶ್‌, ನಿರ್ದೇಶಕರಾದ ಸಿ.ಎನ್‌. ಗಿರೀಶ್‌, ಮಹೇಶ್‌ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.