ಸಂಕಷ್ಟದಲ್ಲಿ ರೇಷ್ಮೆ ನೂಲು ತಯಾರಕರು


Team Udayavani, Apr 9, 2020, 2:22 PM IST

br-tdy-1

ಸಾಂದರ್ಭಿಕ ಚಿತ್ರ

ದೊಡ್ಡಬಳ್ಳಾಪುರ: ಕೋವಿಡ್ 19 ಸಂಕಷ್ಟದ ನಡುವೆಯೂ ಸರ್ಕಾರ ರೈತರಿಗೆ ರೇಷ್ಮೆ ಗೂಡು ಮಾರಾಟ ಮಾಡಲು ಅವಕಾಶ ಮಾಡಿಕೊಟ್ಟಿರುವುದು ನೂಲು ತಯಾರಿಕರಿಗೆ ಸಮಾಧಾನ ತಂದಿದೆ. ಆದರೆ ತಯಾರಾದ ರೇಷ್ಮೆ ನೂಲಿಗೆ ಸೂಕ್ತ ಮಾರುಕಟ್ಟೆಯಿಲ್ಲದೇ ಇರುವುದರಿಂದ ಮುಂದೇನು ಎನ್ನುವ ಚಿಂತೆ ರೇಷ್ಮೆ ನೂಲು ತಯಾರಕರನ್ನು ಕಾಡುತ್ತಿದೆ.

ರಾಜ್ಯದಲ್ಲಿ 15 ಸಾವಿರ ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆಯಾಗುತ್ತಿದ್ದು, ಕೋವಿಡ್ 19  ಪರಿಣಾಮ ರೇಷ್ಮೆ ತಯಾರಿಕೆ ಕುಸಿಯುತ್ತಿದೆ. ರೇಷ್ಮೆ ಕೃಷಿ ಮುಖ್ಯವಾಗಿ ಕೋಲಾರ, ರಾಮ ನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸುತ್ತಮುತ್ತಲ ಪ್ರದೇಶ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಾಗಿ ಮಾಡಲಾಗುತ್ತಿದೆ. ಇತ್ತೀಚೆಗಷ್ಟೇ ರಾಮನಗರ, ಚೆನ್ನಪಟ್ಟಣದಲ್ಲಿ ರೇಷ್ಮೆ ರೀಲರ್‌ಗಳು ತಮಗೆ ಮಾರುಕಟ್ಟೆ ಸಮಸ್ಯೆ ಇದ್ದು, ರೇಷ್ಮೆ ಗೂಡುಗಳನ್ನು ನಾವು ಖರೀದಿ ಮಾಡುವುದಿಲ್ಲ ಎಂದು ಮಾರುಕಟ್ಟೆಯಿಂದ ಹಿಂದೆ ಸರಿದಿದ್ದರು. ರೇಷ್ಮೆ ಗೂಡು ಖರೀದಿದಾರರೇ ಇಲ್ಲವೆಂದರೆ ಗೂಡು ಕೊಳ್ಳುವವರು ಯಾರು. ಮಾರಾಟವಾಗದ ರೇಷ್ಮೆ ಗೂಡು ಒಣಗಿಸಿಟ್ಟುಕೊಂಡರೆ ರೈತರಿಗೆ ಹೆಚ್ಚು ನಷ್ಟವಾಗಲಿದೆ. ರೇಷ್ಮೆ ಗೂಡುಗಳಿಗಾಗಿ ಹಿಪ್ಪು ನೇರಳೆ ಬೆಳೆಯುವ ರೈತರಿಗೂ ಪರಿಣಾಮ ತಟ್ಟಲಿದೆ.

ಒಂದು ಕೆಜಿ ರೇಷ್ಮೆ ನೂಲು ತಯಾರಿಕೆಗೆ 6 ರಿಂದ 7 ಕೇಜಿ ಗೂಡುಗಳ ಅಗತ್ಯವಿದೆ. ಡಿಸೆಂಬರ್‌ನಿಂದ ಫೆಬ್ರವರಿವರೆಗೂ ರೇಷ್ಮೆ ಗೂಡು ಕೇಜಿಗೆ 600 ರೂ.ಗಳಾಗಿ, ರೇಷ್ಮೆ ಬೆಲೆ 4 ಸಾವಿರದಾಟಿತ್ತು. ಆದರೆ ಈಗ ರೇಷ್ಮೆ ಗೂಡಿನ ಬೆಲೆ ಸರಾಸರಿ 300 ರೂಗಳಿಗೆ ಇಳಿದಿದೆ. ಒಂದು ದಿನ ಇದ್ದ ಬೆಲೆ ಇನ್ನೊಂದು ದಿನ ಇರಲ್ಲ. ರೇಷ್ಮೆ ಬೆಲೆ ಸಹ ಕಡಿಮೆ ಆಗಿದೆ. ಹೆಚ್ಚಿನ ಬೆಲೆಗೆ ಕೊಂಡ ಗೂಡುಗಳಿಂದ ತಯಾರಾದ ರೇಷ್ಮೆ ಹೊಸ ಬೆಲೆ ರೇಷ್ಮೆಯೊಂದಿಗೆ ಉಳಿದಿದೆ.

ಕೋವಿಡ್ 19 ಕಂಟಕ: ದೇಸಿ ರೇಷ್ಮೆ ಮುಖ್ಯವಾಗಿ ಆಂಧ್ರ, ತಮಿಳುನಾಡಿನಲ್ಲಿ ಹೆಚ್ಚು ಮಾರಾಟವಾಗುತ್ತಿತ್ತು. ಆದರೆ ಕೊರೊನಾ ಕಂಟಕದಿಂದಾಗಿ ರೇಷ್ಮೆ ಖರೀದಿ ಮಾಡುವವರೇ ಇಲ್ಲ. ಲಾಕ್‌ಡೌನ್‌ ಪರಿಣಾಮ ರೇಷ್ಮೆ ಮಾರಾಟದ ಅಂಗಡಿಗಳು ತೆರೆಯದೇ ಇರುವುದರಿಂದ ತಯಾರಾದ ರೇಷ್ಮೆ ಮಾರಾಟವಾಗುವುದು ಹೇಗೆ? ಎನ್ನುವ ಚಿಂತೆ ಕಾಡತೊಡಗಿದೆ. ದಿನಕ್ಕೊಂದು ಬೆಲೆಯಿಂದಾಗಿ ರೇಷ್ಮೆ ಮಾರುಕಟ್ಟೆಯಲ್ಲಿ ರೇಷ್ಮೆ ನೂಲನ್ನು ಮಾರಾಟ ಮಾಡುವುದೇ ಕಷ್ಟಕರವಾಗುತ್ತಿದೆ. ಜಾಕಿ ತಯಾರಿಕೆಗೆ ಇನ್ನು 15 ದಿನಕ್ಕಾಗುವಷ್ಟು ಮೊಟ್ಟೆಗಳಿದ್ದು, ಲಾಕ್‌ಡೌನ್‌ ಹೀಗೆಯೇ ಮುಂದುವರೆದರೆ, ಮುಂದೆ ಸರ್ಕಾರದಿಂದ ನೀಡಲಾಗುತ್ತಿದ್ದ ಮೊಟ್ಟೆಗಳ ಸರಬರಾಜು ಸ್ಥಗಿತಗೊಳ್ಳಲಿದೆ.

ಚೈನಾ ಆಮದು ಕಡಿಮೆಯಾಗಿ, ದೇಸಿ ರೇಷ್ಮೆಗೆ ಬೆಲೆ ಬಂದಿತ್ತು. ಈಗ ಚೈನಾದಿಂದ ರೇಷ್ಮೆ ಆಮದಾಗುವ ಸೂಚನೆ ಗಳಿದ್ದು, ದೇಸಿ ರೇಷ್ಮೆಗೆ ಹೊಡೆತ ಬೀಳಲಿದೆ. ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿದರೆ ಮಾತ್ರ ರೇಷ್ಮೆ ಉದ್ಯಮ ಉಳಿಯಲಿದೆ.– ಮೋಹನ್‌ ಕುಮಾರ್‌, ಶ್ರೀ ಸಾಯಿ ರೀಲರ್ ಮಾಲಿಕ

 

-ಡಿ.ಶ್ರೀಕಾಂತ

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.