ಸಾಲ ಸೌಲಭ್ಯದಲ್ಲಿ ಬ್ಯಾಂಕ್‌ಗಳ ನಿಯಮ ಸರಳೀಕರಿಸಿ

ಡಿಜಿಟಲ್‌ ಬ್ಯಾಂಕಿಂಗ್‌ನ ಮೋಸಗಳ ಕುರಿತು ಜಾಗೃತರಾಗಿ.

Team Udayavani, Jun 10, 2022, 1:40 PM IST

ಸಾಲ ಸೌಲಭ್ಯದಲ್ಲಿ ಬ್ಯಾಂಕ್‌ಗಳ ನಿಯಮ ಸರಳೀಕರಿಸಿ

ದೇವನಹಳ್ಳಿ: ನಮ್ಮ ದೇಶ ಆರ್ಥಿಕವಾಗಿ ಸದೃಢರಾಗಬೇಕಾದರೆ, ಪ್ರತಿಯೊಬ್ಬರ ಆರ್ಥಿಕತೆ ಬಲಗೊಳ್ಳ ಬೇಕು. ಸಾಲ ಸೌಲಭ್ಯ ವಿತರಿಸುವ ರಾಷ್ಟ್ರೀಕೃತ ಬ್ಯಾಂಕುಗಳು ನಿಯಮಾವಳಿ ಮತ್ತಷ್ಟು ಸರಳೀಕರಣಗೊಳ್ಳಬೇಕು ಎಂದು ಜಿಪಂ ಸಿಇಒ ರೇವಣಪ್ಪ ತಿಳಿಸಿದರು.

ಪಟ್ಟಣದ ಗಿರಿಯಮ್ಮ ವೃತ್ತದಲ್ಲಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ 75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ “ಸಾಲ ಸಂಪರ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಆರ್ಥಿಕತೆ ಅಭಿವೃದ್ಧಿಯಲ್ಲಿ ಬ್ಯಾಂಕುಗಳ ಪಾತ್ರ ಮಹತ್ವದಾಗಿದೆ. ಗ್ರಾಮೀಣ ಪ್ರದೇಶದ ಕಟ್ಟಕಡೆಯ ವ್ಯಕ್ತಿಗೂ ಹಣಕಾಸು ಸೇವೆಗಳನ್ನು ದೊರಕಿಸುವ ಮೂಲಕ ದೇಶದ ಆರ್ಥಿಕ ಸ್ಥಿತಿ ವೃದ್ಧಿ ಆಗುತ್ತದೆ.

ಬ್ಯಾಂಕುಗಳು ಗ್ರಾಹಕರೊಡನೆ ಸಂಪರ್ಕ ಹೆಚ್ಚಿಸಿಕೊಂಡು ಹಣಕಾಸು ಸೇರ್ಪಡೆ ಯೋಜನೆಗಳ ಮೂಲಕ ಕಟ್ಟಕಡೆಯ ವ್ಯಕ್ತಿಗೂ ಜೀವನೋಪಾಯ ಮಾರ್ಗಕ್ಕಾಗಿ ಹಾಗೂ ಕೌಶಲ್ಯಾಭಿವೃದ್ಧಿಗೆ ಹಣಕಾಸು ಸೌಲಭ್ಯ ನೀಡಬೇಕು. ಇದರಿಂದ ಬ್ಯಾಂಕಿನ ಸರಪಳಿ ವ್ಯವಸ್ಥೆ ಬಲವಾಗಿ ಆದಾಯ ಹೆಚ್ಚಾಗಲಿದೆ ಎಂದರು.

ಗ್ರಾಹಕರೊಂದಿಗೆ ಸಮಾಲೋಚನೆ ಮಾಡಿ: ಸರ್ಕಾರದ ಜನರ ಆರ್ಥಿಕ ಜೀವನ ಸುಧಾರಣೆಯ ನಿಟ್ಟಿನಲ್ಲಿ ಸಾಕಷ್ಟು ಯೋಜನೆ ಜಾರಿ ಮಾಡಿದ್ದು, ಬ್ಯಾಂಕುಗಳಲ್ಲಿ ಕಾರ್ಯನಿರ್ವಹಣೆ ಮಾಡುವ ಅಧಿಕಾರಿಗಳ ನಕಾರಾತ್ಮಕ ಧೋರಣೆಯಿಂದ ಅದರ ಸಮಪರ್ಕ ಅನುಷ್ಠಾನ ಸಾಧ್ಯವಾಗುತ್ತಿಲ್ಲ. ದೇಶದಲ್ಲಿ ಉದ್ಯೋ ಗ ಸೃಷ್ಟಿಯ ಅವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಯುವಕರಿಗೆ ಸ್ವಯಂ ಉದ್ಯೋಗ, ಕಿರು ಉದ್ದಿಮೆ ಸ್ಥಾಪನೆಗೆ ಬ್ಯಾಂಕುಗಳು ಆರ್ಥಿಕ ಸಹಾಯ ಮಾಡುವತ್ತಾ ಚಿಂತಿಸಬೇಕು. ಪ್ರತಿ ವಾರಕೊಮ್ಮೆ ಗ್ರಾಹಕರೊಂದಿಗೆ ಸಮಾಲೋಚನೆ ಮಾಡಿ ಸಾಲ ಸೌಲಭ್ಯ ವಿತರಣೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಆರ್‌ಬಿಐನ ಅಧಿಕಾರಿ ಜೀವಿತಾ ಮಾತನಾಡಿ, ಡಿಜಿಟಲ್‌ ಬ್ಯಾಂಕಿಂಗ್‌ನ ಮೋಸಗಳ ಕುರಿತು ಜಾಗೃತರಾಗಿ. ಗ್ರಾಹಕರಿಗೆ ಉಂಟಾಗುವ ತೊಂದರೆ ಗಳ ಕುರಿತು ಆರ್‌ ಬಿಐಗೆ ದೂರು ಸಹ ನೀಡಬಹುದಾಗಿದ್ದು, ಪ್ರತಿಯೊಂದು ಬ್ಯಾಂಕ್‌ಗಳ ಕಾರ್ಯನಿರ್ವಹಣೆಯನ್ನು ನಾವು ಗಮನಿಸುತ್ತೇವೆ. ಗ್ರಾಹಕರ ರಕ್ಷಣೆಗಾಗಿ ಆರ್‌ಬಿಐ ಕಾವಲುಗಾರನಾಗಿ ಕಾರ್ಯನಿರ್ವಹಿಸುತ್ತದೆ ಎಂದರು.

ಸಾಕ್ಷರತೆಗೆ ಕೈಜೋಡಿಸಿ: ಕೆನರಾ ಬ್ಯಾಂಕಿನ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕಿ ಪಿ.ಮಾಲಿನಿ ಮಾತನಾಡಿ, “ದೇಶದ ಆರ್ಥಿಕತೆ ವೃದ್ಧಿಗೆ ಸರ್ಕಾರ ನೀಡಿರುವ ಪ್ರತಿಯೊಂದು ಯೋಜನೆಗಳಲ್ಲಿಯೂ ಸಾರ್ವಜನಿಕರು ಭಾಗಿಯಾಗಿ ಅದರ ಪ್ರಯೋಜನ ಪಡೆದುಕೊಳ್ಳಿ. ನಿಮಗೆ ತಿಳಿದಿರುವ ಮಾಹಿತಿಯನ್ನು ಎಲ್ಲರೊಂದಿಗೆ ಹಂಚಿಕೊಂಡು ಬ್ಯಾಂಕಿಂಗ್‌ ಸಾಕ್ಷರತೆಗೆ ಕೈಜೋಡಿಸಿ ಎಂದರು.

ಕನ್ನಡದಲ್ಲಿ ಮಾಹಿತಿ ನೀಡಿ: ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗ್ರಾಹಕರು, ಸ್ಥಳೀಯರು ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದ ಬ್ಯಾಂಕಿನ ಅಧಿಕಾರಿಗಳು ಕನ್ನಡದಲ್ಲಿ ಮಾಹಿತಿ ನೀಡಬೇಕು. ನಿಮ್ಮ ಮಾತುಗಳು ಅರ್ಥವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಾವು ಜೀವಿಸುತ್ತಿರುವುದು ಕರ್ನಾಟಕದಲ್ಲಿ, ಕನ್ನಡ ಭಾಷೆಯಲ್ಲಿ ನಮಗೆ ಸೇವೆ ನೀಡಿ, ಹಿಂದಿ, ಇಂಗ್ಲಿಷ್‌ ಭಾಷೆಯಲ್ಲಿ ಭಾಷಣ ಮಾಡಿದರೇ ಈ ಕಾರ್ಯಕ್ರಮ ವಿಫ‌ಲವಾಗುತ್ತದೆ ಎಂದು ಗದ್ದಲ ಸೃಷ್ಟಿಸಿದರು. ನಂತರ ಕನ್ನಡದಲ್ಲಿ ಅನುವಾದ ಮಾಡಿದರು. ಜಿಲ್ಲಾ ವೈದ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ, ಬ್ಯಾಂಕ್‌ ಅಧಿಕಾರಿ ಲತಾ ಕುರೂಪ್‌, ರಾಜಣ್ಣ, ಶೈಲಜಾ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.