ನಿರ್ವಹಣೆ ಇಲ್ಲದೆ ಸೊರಗುತ್ತಿರುವ ಕೆರೆ-ಕಟ್ಟೆಗಳು


Team Udayavani, Oct 17, 2021, 3:01 PM IST

ನಿರ್ವಹಣೆ ಇಲ್ಲ ದೆ ಸೊರಗುತ್ತಿರುವ ಕೆರೆ-ಕಟ್ಟೆಗಳು

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಉತ್ತಮ ಮಳೆಯಾಗಿ ಮಳೆ ನೀರು ಬಂದು ಕೆರೆಗಳು ತುಂಬುತ್ತಿರುವ ಹರ್ಷ ರೈತರಿಗಾದರೆ ಸೂಕ್ತ ನಿರ್ವಹಣೆ ಇಲ್ಲದೇ ಕೆರೆಗಳಲ್ಲಿ ನೀರು ನಿಲ್ಲಲು ಆಗದೇ ಮುಂದೆ ಬೇಸಿಗೆಯಲ್ಲಿ ನೀರಿನ ಪಾಡು ಏನು ಎಂದು ಗ್ರಾಮಸ್ಥರು ಯೋಚಿಸು ವಂತಾಗಿದೆ. ತಾಲೂಕಿನ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಾಲಿನ ಹೆಗ್ಗಡಿಹಳ್ಳಿ ಕೆರೆಯ ಕೋಡಿ ಕಲ್ಲುಗಳು ಕಿತ್ತುಹೋಗಿವೆ.

ಕೆರೆಯಲ್ಲಿ ಸಂಗ್ರಹವಾಗಿರುವ ಮಳೆ ನೀರು ದೊಡ್ಡಪ್ರಮಾಣದಲ್ಲಿ ಹೋರ ಹೋಗಿ ಕೆರೆ ಬರಿದಾಗುವ ಅಪಾಯವಿದೆ. ಹೀಗಾಗಿ ಸ್ಥಳೀಯ ರೈತರು ಮಣ್ಣು ಹಾಕುವ ಮೂಲಕ ನೀರನ್ನು ತಡೆ ಹಿಡಿದಿದ್ದಾರೆ. ಆದರೆ ಮಳೆ ಹೆಚ್ಚಾದರೆ ಈ ಮಣ್ಣು ಕೊಚ್ಚಿ ಹೋಗಿ ಕೆರೆಯಲ್ಲಿನ ನೀರು ಖಾಲಿಯಾಗಲಿದೆ ಎನ್ನುವ ಆತಂಕ ರೈತರದ್ದು.

ದಂಡುದಾಸನಕೊಡಿಗೇಹಳ್ಳಿ ಕೆರೆ ಸಹ ಸೂಕ್ತ ನಿರ್ವಹಣೆ ಇಲ್ಲದೆ ಕೆರೆ ಏರಿಯ ಮಣ್ಣು ಸಡಿಲಗೊಂಡು ಸೋರುತ್ತಿದೆ. ಈ ಸೋರುವಿಕೆ ದೊಡ್ಡ ಪ್ರಮಾಣವಾದರೆ ಕೆರೆಯ ಏರಿಯ ಕಟ್ಟೆ ಹೊಡೆಯುವ ಅಪಾಯ ಎದುರಾಗಿದೆ. ಕಣಿವೆಪುರ ಕೆರೆ ನೀರು ಹರಿದು ಹೊಗುವ ಕೋಡಿಯ ರಾಜಕಾಲುವೆಯಲ್ಲಿ ನಂದಿ ಬೆಟ್ಟದ ತಪ್ಪಲಿನ ಸ್ಟಾರ್‌ ಹೋಟೆಲ್‌ಗ‌ಳ ತ್ಯಾಜ್ಯವನ್ನು ಪ್ಲಾಸ್ಟಿಕ್‌ ಚೀಲಗಳಲ್ಲಿ ತಂದು ರಾಶಿ ಹಾಕಿ ಸುಡಲಾಗಿದೆ.

ಇದನ್ನೂ ಓದಿ:- ಗಮನ ಸೆಳೆದ ವಿಶಿಷ್ಟ ವಿನ್ಯಾಸದ ಬಸ್‌ ಶೆಲ್ಟರ್‌

ಈ ತ್ಯಾಜ್ಯವು ನೀರಿನಲ್ಲಿ ಹರಿದು ಬಂದು ಈಗ ಕಣಿವೆಪುರ ಗ್ರಾಮದ ಮುಂದಿನ ಕೆರೆಗಳಲ್ಲಿನ ನೀರಿನ ಒಡಲನ್ನು ಸೇರುತ್ತಿದೆ. ಇದರಿಂದ ಕೆರೆಯಲ್ಲಿನ ಜಲಚರಗಳ ಸಾವಿಗೆ ಕಾರಣವಾಗುವುದಲ್ಲದೆ ನೀರು ಸಹ ಕಲುಸಿತವಾಗುವ ಅಪಾಯಗಳಿವೆ ಎಂದು ಸ್ಥಳೀಯ ನಿವಾಸಿ ಮಂಜುನಾಥ್‌ ದೂರಿದ್ದಾರೆ.

ಅರ್ಕಾವತಿ ನದಿ ಪಾತ್ರದಲ್ಲಿ ಬರುವ ಕೆರೆಗಳು ಸೂಕ್ತ ನಿರ್ವಹಣೆ ಇಲ್ಲದೆ ಕೆರೆಯ ಏರಿಗಳಲ್ಲಿ ನೀರು ಸೋರಿಕೆ ಆರಂಭವಾಗಿದೆ. ನಂದಿ ಬೆಟ್ಟದಲ್ಲಿ ಹುಟ್ಟಿ ಪಶ್ಚಿಮಾಭಿಮುಖವಾಗಿ ಅರ್ಕಾವತಿ ನದಿ ಹರಿಯುವುದೇ ಸಾಲು ಸಾಸಲು ಕೆರೆಗಳ ಮೂಲಕ. ಈ ಕೆರೆಗಳು ಒಂದೊಕ್ಕೊಂದು ತುಂಬಿ ಕೋಡಿ ಬೀಳುತ್ತ ಹೆಸರಘಟ್ಟ ಸೇರುತ್ತವೆ. ಅಲ್ಲಿಂದ ಮುಂದೆ ಮಾಗಡಿ ಸಮೀಪದ ಮಂಚನಬೆಲೆ ಡ್ಯಾಂ, ಆ ನಂತರ ರಾಮನಗರ ಮೂಲಕ ಕನಕಪುರದ ಸಂಗಮದಲ್ಲಿ ಕಾವೇರಿ ನದಿ ಸೇರಿ ಮುಂದೆ ಸಮುದ್ರದತ್ತ ಸಾಗುತ್ತದೆ. ಇತ್ತೀಚೆಗೆ ಬಹಳಷ್ಟು ಬತ್ತಿ ಹೋಗಿದ್ದ ಅರ್ಕಾವತಿ ನದಿ ಈಗ ಮೂತುಂಬಿಕೊಳ್ಳುತ್ತಿದ್ದು ನೀರಿನ ಮೂಲಗಳನ್ನು ಉಳಿಸಿಕೊಳ್ಳಬೇಕಿದೆ ಎನ್ನುತ್ತಾರೆ ಪರಿಸರಪ್ರೇಮಿಗಳು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.