ಮಳೆಯಿಂದ ಸೂರು ಕಳಕೊಂಡವರಿಗೆ ಪರಿಹಾರ


Team Udayavani, May 9, 2019, 3:00 AM IST

sooru

ನೆಲಮಂಗಲ: ಚಂಡಮಾರುತದ ಪರಿಣಾಮ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಸಂಪೂರ್ಣ ಹಾನಿಯಾಗಿದ್ದ ತಾಲೂಕಿನ ಮಲ್ಲಾಪುರ ಗ್ರಾಮದ 13 ಮನೆಗಳಿಗೆ ಬುಧವಾರ ತಹಶೀಲ್ದಾರ್‌ ಭೇಟಿ ನೀಡಿ ಪರಿಹಾರದ ಭರವಸೆ ನೀಡಿದರು.

ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಈ ಹಿಂದೆ ಸುರಿದ ಭಾರೀ ಮಳೆಯಿಂದ ಅನೇಕ ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿ ಉಂಟಾಗಿತ್ತು. ಮತ್ತೆ ಸಮಸ್ಯೆ ಮರುಕಳಿಸದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಾಲೂಕು ಆಡಳಿತ ಭರವಸೆ ನೀಡಿತ್ತು.

ಆದರೆ, ಯಾವುದೇ ಪ್ರಯೋಜನವಾಗಿರಲಿಲ್ಲ. ಈಗ ಮತ್ತೆ ಅದೇ ಗ್ರಾಮದಲ್ಲಿ ಧಾರಾಕಾರ ಮಳೆಯಿಂದ ಹತ್ತಾರು ಮರಗಳು ಮನೆಗಳ ಮೇಲೆ ಉರುಳಿ ಬಿದ್ದಿವೆ. ಬಿರುಗಾಳಿಯ ರಭಸಕ್ಕೆ 13 ಮನೆಗಳ ಮೇಲ್ಛಾವಣಿ ಧರೆಗುರುಳಿದ್ದು, ಗ್ರಾಮದ ಜನರು ಆತಂಕದಲ್ಲಿದ್ದಾರೆ.

ಗಂಭೀರ ಗಾಯ: ಮಲ್ಲಾಪುರ ಗ್ರಾಮದ ಶಿವಣ್ಣ ಎಂಬುವ‌ರ ಮನೆಯ ಗೋಡೆ ಮತ್ತು ಮೇಲ್ಛಾವಣಿಯ ಶೀಟುಗಳು ಗಾಳಿಯ ರಭಸಕ್ಕೆ ಬಿದ್ದು ಮನೆಯಲ್ಲಿದ್ದ ರಾಕೇಶ್‌(14)ಹಾಗೂ ಬಿಂದು(7)ಎಂಬ ಮಕ್ಕಳಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ ತಹಶೀಲ್ದಾರ್‌ ಕೆ.ಎನ್‌.ರಾಜಶೇಖರ್‌, ಮಕ್ಕಳ ಬಗ್ಗೆ ಮಾಹಿತಿ ಪಡೆದು, ಸಮಾಧಾನ ಹೇಳಿದರು. ಅಲ್ಲದೇ, ಚಿಕಿತ್ಸೆಯ ವೆಚ್ಚ ಭರಿಸುವ ಭರವಸೆಯನ್ನು ನೀಡಿದ್ದಾರೆ.

ಅಪಾಯದಿಂದ ಪಾರು: ಮಲ್ಲಾಪುರ ಗ್ರಾಮದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಿಂದ ದಾದಾಪೀರ್‌, ಹನುಮಂತರಾಯಪ್ಪ, ಅಂಬಿಕಾರಾಜು ಸೇರಿದಂತೆ 6ಕ್ಕೂ ಹೆಚ್ಚು ಮನೆಗಳ ಮೇಲೆ ಮರಗಳು ಬಿದ್ದು ಮೇಲ್ಛಾವಣಿ ಮತ್ತು ಗೋಡೆಗಳಿಗೆ ಹಾನಿಯಾಗಿದೆ.

ಮನೆಯಲ್ಲಿದ್ದ ಜನರು ಅಪಾಯದಿಂದ ಪಾರಾಗಿದ್ದಾರೆ. ಕೆಲವು ಮನೆಗಳಲ್ಲಿ ಶೀಟುಗಳು ಮುರಿದು ಬಿದ್ದು ಕೆಲವರಿಗೆ ಗಾಯಗಳಾಗಿವೆ. ಇನ್ನೂ ಅಂಬಿಕಾರಾಜು ಎಂಬವರ ಎರಡು ಬೈಕ್‌ಗಳ ಮೇಲೆ ಮರ ಬಿದ್ದ ಪರಿಣಾಮ ಬೈಕ್‌ಗಳು ಜಖಂಗೊಂಡು ಸಂಪೂರ್ಣ ಹಾಳಾಗಿವೆ.

ಭರವಸೆ: ಮಲ್ಲಾಪುರ ಗ್ರಾಮದಲ್ಲಿ ಸುರಿದ ಭಾರೀ ಮಳೆಯಿಂದ ಹಾನಿಯಾಗಿರುವ 13 ಮನೆಗಳಿಗೆ ಸರ್ಕಾರ ಸೂಚಿಸುವ ಪರಿಹಾರವನ್ನು ನೀಡಲಾಗುವುದು. ವಾಜರಹಳ್ಳಿ ಗ್ರಾಮ ಪಂಚಾಯತಿ ವತಿಯಿಂದ ವಸತಿ ಯೋಜನೆಯಡಿ ಮನೆಗಳ ನಿರ್ಮಾಣ ಮಾಡಲು ತಿಳಿಸಲಾಗುತ್ತದೆ.

ಮಲ್ಲಾಪುರ ಗ್ರಾಮದಲ್ಲಿ ಪದೇ ಪದೆ ಈ ರೀತಿಯ ಘಟನೆಗಳು ಸಂಭವಿಸಿದ್ದು, ಮುಂದೆ ಈ ರೀತಿ ಆಗದಂತೆ ಕ್ರಮ ಕೈಗೊಳ್ಳುತ್ತೇನೆ ಎಂದು ಹಾನಿಯಾಗಿರುವ ಮನೆಗಳಿಗೆ ಭೇಟಿ ನೀಡಿದ ತಹಶೀಲ್ದಾರ್‌ ಭರವಸೆ ನೀಡಿದರು.

ಧರೆಗುರುಳಿದ ಕಂಬಗಳು: ಧಾರಾಕಾರ ಮಳೆಯಿಂದಾಗಿ ಪಟ್ಟಣದ ಹೊರವಲಯದಲ್ಲಿರುವ ದೇವಣ್ಣನ ಪಾಳ್ಯ ಸೇರಿದಂತೆ ಮತ್ತಿತರ ಬಡಾವಣೆಗಳಲ್ಲಿ ಮತ್ತು ಗ್ರಾಮಗಳಲ್ಲಿ ವಿದ್ಯುತ್‌ ಕಂಬಗಳು ನೆಲಕಚ್ಚಿದ್ದು, ರಾತ್ರಿಯಿಡೀ ವಿದ್ಯುತ್‌ ವ್ಯತ್ಯಯ ಉಂಟಾಗಿ ನಾಗರಿಕರು ಕತ್ತಲಲ್ಲಿ ರಾತ್ರಿ ಕಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.

ಈ ಸಂದರ್ಭದಲ್ಲಿ ವಾಜರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜಮ್ಮ, ಸದಸ್ಯರಾದ ಜಿ.ಶಿವಣ್ಣ, ಎಚ್‌.ಎಸ್‌ ಮಂಜುನಾಥ್‌, ವರಲಕ್ಷ್ಮೀ ಮಂಜುನಾಥ್‌, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪ್ರಶಾಂತ್‌, ರಾಜಸ್ವ ನಿರೀಕ್ಷಕ ಅಶ್ವತ್ಥ್, ಗ್ರಾಮಲೆಕ್ಕಾಧಿಕಾರಿ ರವಿಕುಮಾರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.