ಉತ್ತಮ ಆರೋಗ್ಯಕ್ಕೆ ಕ್ರೀಡೆ ಪೂರಕ
Team Udayavani, Aug 28, 2019, 3:00 AM IST
ಆನೇಕಲ್: ಕ್ರೀಡೆಗಳಲ್ಲಿ ಭಾಗವಹಿಸುಕೆಯಿಂದ ದೈಹಿಕ-ಮಾನಸಿಕ ಚೈತನ್ಯ ಬೆಳವಣಿಗೆ ಜೊತೆಗೆ ಜನರಲ್ಲಿ ದೇಶಾಭಿಮಾನ ಮತ್ತು ಭಾವೈಕ್ಯತಾ ಮನೋಭಾವ ಮೂಡುತ್ತದೆ ಎಂದು ಶಾಸಕ ಸರ್ಜಾಪುರ ಗ್ರಾಪಂ ಮಾಜಿ ಅಧ್ಯಕ್ಷ ಶಂಭಯ್ಯ ಹೇಳಿದರು. ತಾಲೂಕಿನ ಸರ್ಜಾಪುರ ಗ್ರಾಮದ ಅಂಬೇಡ್ಕರ್ ಆಟದ ಮೈದಾನದಲ್ಲಿ ಜೈ ಭೀಮ್ ಕಬಡ್ಡಿ ಕಪ್ (ಕ್ಲಬ್) ವತಿಯಿಂದ ಆಯೋಜಿಸಿದ್ದ 19 ವಯಸ್ಸಿನ ಒಳಗಿನ ಜೂನಿಯರ್ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.
ಹಳ್ಳಿಯ ಸೊಗಡನ್ನು ಸೂಚಿಸುವ ಕಬಡ್ಡಿ ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗಿರಲು ಸಹಕಾರಿಯಾಗುತ್ತದೆ. ವಿಶೇಷವಾಗಿ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ಯಾವುದಾದರೊಂದು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳಬೇಕು. ಆದ್ದರಿಂದ ಭವಿಷ್ಯದಲ್ಲಿ ಉತ್ತಮ ಹುದ್ದೆಗಳು ಅರಸಿ ಬರುತ್ತವೆ ಎಂದರು.
ಜೈ ಭೀಮ್ ಕಬಡ್ಡಿ ಕಪ್ ಆಯೋಜಕರಾದ ನವೀನ್ ಮಾತನಾಡಿ, ಹೊಸ ಪ್ರತಿಭೆಗಳನ್ನು ಹೊರತರಲು ಕ್ರೀಡೆಗಳು ಅವಶ್ಯಕವಾಗಿದ್ದು, ಇದರ ಪೂರಕವಾಗಿ ಸರ್ಜಾಪುರದಲ್ಲಿ 19 ವಯಸ್ಸಿನ ಒಳಗಿನ ಜೂನಿಯರ್ ಕಬಡ್ಡಿ ಪಂದ್ಯಾವಳಿಯನ್ನು ತಾಲೂಕಿನಲ್ಲಿಯೇ ಪ್ರಥಮವಾಗಿ ರೂಪಿಸಿದ್ದು, ರಾಜ್ಯದ ನಾನಾ ಭಾಗಗಳಿಂದ ಸುಮಾರು 60ಕ್ಕೂ ಹೆಚ್ಚು ತಂಡಗಳು ಈ ಪಂದ್ಯದಲ್ಲಿ ಭಾಗವಹಿಸಿದ್ದು ಸರ್ಜಾಪುರದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಜೈ ಭೀಮ್ ಕಬಡ್ಡಿ ಕಪ್ ಸಹ ಆಯೋಜಕ ಹೇಮಂತ್ಕುಮಾರ್ ಮಾತನಾಡಿ, ಆರೋಗ್ಯವಂತರಾಗಿರಲು ಮತ್ತು ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಕ್ರೀಡೆ ಅತ್ಯವಶ್ಯಕವಾಗಿದೆ. ಪ್ರತಿಯೊಬ್ಬರು ಪ್ರತಿನಿತ್ಯಾ ಒಂದು ಗಂಟೆ ವ್ಯಾಯಾಮ ಮಾಡ ಬೇಕು. ಕ್ರೀಡೆಗಳಲ್ಲಿ ಸೋಲು-ಗೆಲುವು ಅನಿವಾರ್ಯ ಆದರೆ ಅದರಲ್ಲಿ ಭಾಗವಹಿಸುವುದು ಬಹಳ ಮುಖ್ಯವಾಗಿದ್ದು ವಿದ್ಯಾರ್ಥಿಗಳು ಸೋತರು ಸಹ ಬೇಸರ ಪಡದೆ ಕ್ರೀಡೆಗಳಲ್ಲಿ ಸತತ ಅಭ್ಯಾಸ ಮಾಡಿದರೆ ಇಂದೆಲ್ಲಾ ನಾಳೆ ಗೆಲುವು ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಉತ್ತಮವಾಗಿ ಆಟಚಾಡಿದ ಸರ್ಜಾಪುರ ಟೆರರ್ ತಂಡದ ಆಟಗಾರ ನಾಗೇಂದ್ರಗೆ 20 ಸಾವಿರ ರೂ. ನಗದು ಬಹುಮಾನವನ್ನು ಜೈಹಿಂದ್ ವಾಲಿಬಾಲ್ ಕ್ಲಬ್ನ ಮುಖ್ಯಸ್ಥರು ನೀಡಿದರು. ಶಾಸಕ ಬಿ.ಶಿವಣ್ಣ, ಸರ್ಜಾಪುರಗ್ರಾಪಂ ಉಪಾಧ್ಯಕ್ಷ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಮದ್ದೂರಪ್ಪ ಮಧು, ಸತೀಶ್, ಯಲ್ಲಪ್ಪ, ಮೌನ, ಜೈ ಭೀಮ್ ಕಬಡ್ಡಿ ಕಪ್ ಸಹ ಆಯೋಜಕ ಮುರಳಿ ಕೃಷ್ಣ, ಮೋಹನ್, ಮಂಜುನಾಥ್, ಆಭಿಲಾಷ್ ಹಾಗೂ ಕ್ರೀಡಾಭಿಮಾನಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್ ಸಮಸ್ಯೆ
Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ
Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್ ಸ್ಪರ್ಧೆ
Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ
Road Dispute: ರಸ್ತೆ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ
MUST WATCH
ಹೊಸ ಸೇರ್ಪಡೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ