ಎಸ್ಸೆಸ್ಸೆಲ್ಸಿ: ಜಿಲ್ಲೆಗೆ ಮೂರನೇ ಸ್ಥಾನ
Team Udayavani, May 2, 2019, 3:00 AM IST
ದೇವನಹಳ್ಳಿ: 2018-19ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಒಟ್ಟು ಶೇ.88.24 ರಷ್ಟು ಫಲಿತಾಂಶ ಪಡೆದು ಇಡೀ ರಾಜ್ಯದಲ್ಲಿಯೇ ಮೂರನೇ ಸ್ಥಾನ ಪಡೆದುಕೊಂಡಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ(ಡಿಡಿಪಿಐ)ಕೃಷ್ಣಮೂರ್ತಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾದ 12,166 ವಿದ್ಯಾರ್ಥಿಗಳಲ್ಲಿ 10,763 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.88.34 ಫಲಿತಾಂಶ ದಾಖಲಾಗುವ ಮೂಲಕ ಜಿಲ್ಲೆ ಇಡೀ ರಾಜ್ಯಕ್ಕೇ ಮೂರನೇ ಸ್ಥಾನ ಪಡೆದಿದೆ ಎಂದರು.
2017-18ನೇ ಸಾಲಿನಲ್ಲಿ 11,935 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 9,807 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.82.17ಫಲಿತಾಂಶದೊಂದಿಗೆ ರಾಜ್ಯದಲ್ಲಿ 14ನೇ ಸ್ಥಾನ ಪಡೆದಿತ್ತು. ಈ ಬಾರಿ ಮೂರನೇ ಸ್ಥಾನಕ್ಕೆ ಏರಿದೆ ಎಂದು ತಿಳಿಸಿದರು.
ಜಿಲ್ಲೆ ಗರಿಮೆ ಹೆಚ್ಚಳ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ನವ್ಯಾ ಹಾಗೂ ನಾಗೇಂದ್ರ 625ಅಂಕಕ್ಕೆ 619 ಅಂಕ ಗಳಿಸುವ ಮೂಲಕ ಜಿಲ್ಲೆಯಲ್ಲಿ ಪ್ರಥಮ ಸ್ಥಾನವನ್ನು ಇಬ್ಬರು ಹಂಚಿಕೊಂಡಿದ್ದಾರೆ. ಜಿಲ್ಲೆಯ ದೇವನಹಳ್ಳಿ ತಾಲೂಕು ಶೇ.93.30, ದೊಡ್ಡಬಳ್ಳಾಪುರ ಶೇ.93.79, ಹೊಸಕೋಟೆ ಶೇ.93.89, ನೆಲಮಂಗಲ ಶೇ.93.92ಗಳಿಸುವ ಮೂಲಕ ದೊಡ್ಡಬಳ್ಳಾಪುರ ತಾಲೂಕು ಹೊರತುಪಡಿಸಿದರೆ, ಈ ಬಾರಿ ಉತ್ತಮ ಫಲಿತಾಂಶ ದಾಖಲಾಗಿದೆ. ಇದು ಜಿಲ್ಲೆಯ ಗರಿಮೆಯನ್ನು ಹೆಚ್ಚಿಸಿದೆ ಎಂದು ಹೇಳಿದರು.
ಫಲಿತಾಂಶ ಸುಧಾರಣಾ ಸಮಿತಿ: ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕೃಷ್ಣಬೈರೇಗೌಡ ಅವರ ನಿರ್ದೇಶನದ ಮೇರೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಲತಾ ಅವರ ಅಧ್ಯಕ್ಷತೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣಾ ಸಮಿತಿ ರಚಿಸಿ, ಕಲಿಕೆಯಲ್ಲಿ ಕಡಿಮೆ ಸಾಧನೆ ಮಾಡಿದ್ದ ಮಕ್ಕಳನ್ನು ಗುರುತಿಸಿ, ಅವರ ಕಲಿಕಾ ಪ್ರಗತಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂದು ವಿವರಿಸಿದರು.
ಜಿಪಂ ಸಿಇಒ ಮುತುವರ್ಜಿ: ಜಿಲ್ಲಾ ಪಂಚಾಯಿತಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶೈಕ್ಷಣಿಕ ಮಾರ್ಗದರ್ಶನಕ್ಕಾಗಿ ತಜ್ಞರ ನೇಮಕ, ಅನುದಾನಕ್ಕಾಗಿ ಬೆಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆ ಆಡಳಿತಾಧಿಕಾರಿಗಳ ಸಂಪರ್ಕ, ನಿಧಾನ ಕಲಿಕಾ ಮಕ್ಕಳ ಆಯ್ಕೆಗಾಗಿ ಸೂಕ್ತ ಮಾನದಂಡಗಳ ರಚನೆ,
ಜಿಲ್ಲಾದ್ಯಂತ 33ನೋಡಲ್ ಕೇಂದ್ರಗಳ ಸ್ಥಾಪನೆ ಪ್ರತಿ ಕೇಂದ್ರಕ್ಕೂ ನೋಡಲ್ ಅಧಿಕಾರಿಗಳ ನೇಮಕ, ಬೋಧಕರನ್ನಾಗಿ ನುರಿತ ಸಂಪನ್ಮೂಲ ಶಿಕ್ಷಕರ ಆಯ್ಕೆ, ಗೀತಂ ವಿವಿ ಸಭಾಂಗಣದಲ್ಲಿ ಕಡಿಮೆ ಸಾಧಕ ಮಕ್ಕಳನ್ನು ಒಗ್ಗೂಡಿಸಿ “ಪರೀಕ್ಷಾ ಸಂಭ್ರಮಕ್ಕೆ ಸಿದ್ಧರಾಗಿ’ ಎಂಬ ಸ್ಫೂರ್ತಿದಾಯಕ ಕಾರ್ಯಕ್ರಮದ ಆಯೋಜನೆ,
“ವಿಪಿಜಿ’ ಮತ್ತು “ಏ ಒನ್’ ಗುಂಪು ರಚಿಸಿ ಈ ಮಕ್ಕಳಿಗಾಗಿ ವಿಶೇಷ ಕಲಿಕಾ ಪಠ್ಯಕ್ರಮ ರಚನೆ, ಏರ್ಪಾಟು, ವಿಪಿಜಿ ಮಕ್ಕಳ ಪೋಷಕರ ಸಭೆಗೆ ಏರ್ಪಾಟು, ಗಣಿತ ಕಲಿಕೆಯನ್ನು ಸುಲಭಗೊಳಿಸಲು “ಗಣಿತ ಅಭ್ಯಾಸ ಪುಸ್ತಕ’ ಎಂಬ ಕೈಪಿಡಿ ರಚನೆ, ಜಿಲ್ಲೆಯ ಎಲ್ಲಾ 234 ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ
ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರ ಸಭೆ ನಡೆಸಿ ಶಾಲಾವಾರು ಫಲಿತಾಂಶ ಸುಧಾರಣಾ ಕ್ರಮಗಳ ಪರಿಶೀಲನೆ, ಪ್ರಿಪರೇಟರಿ ಪರೀಕ್ಷಾ ಫಲಿತಾಂಶದ ವಿಶ್ಲೇಷಣೆ, ಕಲಿಕೆಯಲ್ಲಿ ಪ್ರಗತಿ ಕಾಣದ “ಏ ಒನ್’ ಮಕ್ಕಳಿಗಾಗಿ ಪ್ರತಿ ಶಾಲೆಯಲ್ಲೂ ಬೋಧನಾ ಕ್ರಮದ ಜಾರಿ ಇತ್ಯಾದಿ ಸುಧಾರಣಾ ಕ್ರಮಗಳನ್ನು ರೂಪಿಸುವಲ್ಲಿ ಆರ್.ಲತಾ ಹೆಚ್ಚು ಆಸಕ್ತಿ ವಹಿಸಿದ್ದರು ಎಂದು ತಿಳಿಸಿದರು.
ಸಿಇಒ ಅಭಿನಂದನೆ: ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಜಿಲ್ಲೆಯ ಸ್ಥಾನ ಹೆಚ್ಚಳಗೊಳ್ಳಲು ಕಾರಣರಾದ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಿಡಿಪಿಐ ಕೃಷ್ಣಮೂರ್ತಿ ಸೇರಿದಂತೆ ಶ್ರಮ ವಹಿಸಿದ ಎಲ್ಲರನ್ನೂ ಜಿಪಂ ಸಿಇಒ ಆರ್.ಲತಾ ಶ್ಲಾ ಸಿದ್ದಾರೆ. ಅನುತ್ತೀರ್ಣರಾದ ವಿದ್ಯಾರ್ಥಿಗಳು ಧೃತಿಗೆಡದೆ ಮತ್ತೂಮ್ಮೆ ಆತ್ಮವಿಶ್ವಾಸದೊಂದಿಗೆ ಪರೀಕ್ಷೆಗೆ ಸಿದ್ಧರಾಗುವಂತೆ ಪ್ರೇರೇಪಿಸಿದ್ದು, ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಹರ್ಷ: ಸಿಇಒ ಆರ್.ಲತಾ ಅವರ ಅಧ್ಯಕ್ಷತೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣಾ ಸಮಿತಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಬಗ್ಗೆ ಅತ್ಯಂತ ಕಾಳಜಿ ವಹಿಸಿ ವಿಶೇಷ ತರಗತಿಗಳನ್ನು ನಡೆಸಿ,ಪರೀಕ್ಷೆಗೆ ಅಣಿಗೊಳಿಸಿದ್ದರಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಗೊಂಡು ಮೂರನೇ ಸ್ಥಾನ ಪಡೆದಿದೆ ಎಂದು ಜಿಲ್ಲಾಧಿಕಾರಿ ಕರೀಗೌಡ ಹರ್ಷ ವ್ಯಕ್ತಪಡಿಸಿದ್ದಾರೆ.
ಪರೀಕ್ಷೆಯಲ್ಲಿ ಅನುಉತ್ತೀರ್ಣರಾದ ವಿದ್ಯಾರ್ಥಿಗಳು ಎದೆಗುಂದದೆ, ಮರು ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಲು ಸಲಹೆ ನೀಡಿದ್ದಾರೆ ಎಂದು ಡಿಡಿಪಿಐ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್ ಸಮಸ್ಯೆ
Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ
Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್ ಸ್ಪರ್ಧೆ
Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ
Road Dispute: ರಸ್ತೆ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ