ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಲಾಬಿ ಶುರು

ಮೀಸಲಾತಿಯ ಲೆಕ್ಕಾ ಚಾರ ಪ್ರಾರಂಭ | ಮೀಸಲಾತಿ ನೀಡಲು ಜಿಲ್ಲಾಧಿಕಾರಿಗಳಿಗೆ ಆದೇಶ

Team Udayavani, Jan 6, 2021, 12:18 PM IST

ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಲಾಬಿ ಶುರು

ದೇವನಹಳ್ಳಿ: ಗ್ರಾಮ ಪಂಚಾಯಿತಿ ಚುನಾವಣೆ ಮುಗಿದು ಫ‌ಲಿತಾಂಶ ಹೊರಬಿದ್ದಿದ್ದು ಜಿಲ್ಲೆಯ ವಿವಿಧ ಗ್ರಾಪಂಗಳಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಪಡೆಯಲು ಸದಸ್ಯರು ಆಯಾ ಮೀಸಲಾತಿ ಅನುಗುಣವಾಗಿ ಅಧಿಕಾರದ ಗದ್ದುಗೆ ಹಿಡಿಯಲು ಕಸರತ್ತು ನಡೆಸಿದ್ದಾರೆ.

ಜಿಲ್ಲೆಯ 91 ಗ್ರಾಪಂಗಳ ಪೈಕಿ 1605 ಅಭ್ಯರ್ಥಿಗಳು ಜಯಶೀಲರಾಗಿದ್ದು, ಅಷ್ಟು ಅಭ್ಯರ್ಥಿಗಳ ಪೈಕಿ ಯಾರಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಪಟ್ಟ ಸಿಗಲಿದೆ ಎಂಬ ಕುತೂಹಲ ತೆರೆಮರೆಯಲ್ಲಿ ಲಾಬಿ ನಡೆಯುತ್ತಿದೆ. ಗ್ರಾಪಂ ಚುನಾವಣೆ ಫ‌ಲಿತಾಂಶ ಬಂದ ಕೂಡಲೇ ಮೀಸಲಾತಿ ಕಡೆ ಲೆಕ್ಕಾಚಾರ ಪ್ರಾರಂಭವಾಗಿದ್ದು, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಬದಲಾವಣೆ ಲಾಬಿಯೂ ಪ್ರಾರಂಭವಾಗಿದೆ.

ಒತ್ತಡ ಹಾಕಲು ಕಸರತ್ತು: ಈ ಹಿಂದೆ ಸ್ಥಾನಯಾವುದಕ್ಕೆ ಮೀಸಲಾಗಿತ್ತು, ಈ ಬಾರಿ ಯಾವುದಕ್ಕೆ ಬರಲಿದೆ. ಮೀಸಲಾತಿ ಅಭ್ಯರ್ಥಿ ಜಯಗಳಿಸಿ ದ್ದಾನೆಯೇ ನಮಗೆ ಸಿಗಬೇಕಾದರೆ ಏನೆಲ್ಲಾ ಮಾಡಬೇಕು, ಯಾವ ಜನಪ್ರತಿನಿಧಿಯಿಂದ ಪ್ರಭಾವತರಬೇಕು, ಅಧಿಕಾರಿಗಳ ಮೇಲೆ ಹೇಗೆಲ್ಲಾ ಒತ್ತಡ ಹಾಕಬೇಕು ಎಂಬ ಲೆಕ್ಕಾಚಾರ ಶುರುವಾಗಿದೆ.

ರಾಜ್ಯಮಟ್ಟದ ಮುಖಂಡರವರೆಗೂ ಲಾಬಿ:ಜಿಲ್ಲೆಯಲ್ಲಿ ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ಬೆಂಬಲಿತರುಜಯಗಳಿಸಿದ್ದು, ಆಯಾ ಪಕ್ಷದ ಮುಖಂಡರು ಪಂಚಾ ಯಿತಿಗಳಲ್ಲಿ ತಮ್ಮದೇ ಪಕ್ಷದ ಬೆಂಬಲಿಗರಿಗೆಅಧ್ಯಕ್ಷ ಮತ್ತು ಉಪಾಧ್ಯಕ್ಷಗಿರಿ ಲಭಿಸಬೇಕೆಂಬ ಕಸರತ್ತು ಮಾಡುತ್ತಿದ್ದಾರೆ. ಒಂದು ಪಕ್ಷದಿಂದ ಮತ್ತೂಂದು ಪಕ್ಷಕ್ಕೆ ಸೆಳೆಯಲು ಮುಖಂಡರಿಂದ ರಾಜ್ಯ ಮಟ್ಟದ ಮುಖಂಡರವರೆಗೆ ಲಾಬಿ ನಡೆಯುತ್ತಿದೆ.

ಪಕ್ಷೇತರ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ:

ಗ್ರಾಪಂಗಳಲ್ಲಿ ಫ‌ಲಿತಾಂಶ ಪ್ರಕಟಗೊಂಡ ಹಿನ್ನೆಲೆಯಲ್ಲೇ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಗಿಟ್ಟಿಸಿಕೊಳ್ಳಲು ಯಾವ ಮೀಸಲಾತಿ ಗ್ರಾಪಂಗೆ ದೊರೆಯಲಿದೆ. ಸದಸ್ಯ ಬಲ ಕ್ರೋಢೀಕರಿಸಲು ಪಕ್ಷಗಳನಾಯಕರು ತಂತ್ರಗಳ ಮೊರೆ ಹೋಗಿದ್ದಾರೆ. ಮುಂದಿನ ತಾಪಂ, ಜಿಪಂ, ವಿಧಾನಸಭ ಚುನಾವಣೆಗಳಿಗೆದಿಕ್ಸೂಚಿಯಂತೆ ಬಿಂಬಿತವಾಗಿತ್ತು. ಈಗಾಗಲೇ ಚುನಾವಣೆ ಆಯೋಗ ಜಿಲ್ಲಾಧಿಕಾರಿಗಳು ಗ್ರಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿಯನ್ನು ಮಾಡಲುಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಯಾವ ಗ್ರಾಪಂನಲ್ಲಿ ಯಾವ ಮೀಸಲಾತಿ ಬಂದಿಲ್ಲ. ಅಂತಹ ಮೀಸಲಾತಿ ತರಲು ಮುಖಂಡರು ಕಸರತ್ತು ನಡೆಸಿದ್ದಾರೆ.

ವಿವಿಧ ಪಕ್ಷದ ಸದಸ್ಯರು ಸದಸ್ಯ ಬಲ ಹೆಚ್ಚಿಸಿಕೊಳ್ಳಲು ಪಕ್ಷೇತರ ಅವಶ್ಯವಿರುವ ಕಡೆ ದೊಡ್ಡಮಟ್ಟದ ಲಾಬಿ ನಡೆಯುತ್ತಿದೆ. ಜೊತೆಗೆ ಪಕ್ಷೇತರ ಅಭ್ಯರ್ಥಿಗಳಿಗೆ ಪ್ರಮುಖ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಳ್ಳಲು ಇದೊಂದು ಒಳ್ಳೆಯ ಅವಕಾಶವಾಗಿದೆ. ಇಂತಹ ಅಭ್ಯರ್ಥಿಗಳು ಈ ವಿಷಯದಲ್ಲಿ ಎಚ್ಚರಿಕೆಯಿಂದಿದ್ದಾರೆ.

50-80 ಲಕ್ಷ ರೂ. ಆಮಿಷ: ದೇವನಹಳ್ಳಿ ತಾಲೂಕಿನಲ್ಲಿ ಮೊದಲ ಹೆಜ್ಜೆಯಾಗಿ ಅತಿ ಹೆಚ್ಚಿನಸಂಪನ್ಮೂಲ ಕ್ರೋಢೀಕರಿಸಿಕೊಳ್ಳುವ ಅಣ್ಣೇಶ್ವರ ಗ್ರಾಪಂಗೆ 10 ಮಂದಿ ಜೆಡಿಎಸ್‌ ಬೆಂಬಲಿತರು, 9ಮಂದಿ ಕಾಂಗ್ರೆಸ್‌ ಬೆಂಬಲಿತರು ಆಯ್ಕೆಗೊಂಡಿದ್ದು,ಕನಿಷ್ಠ ಒಬ್ಬ ಸದಸ್ಯ ಕಾಂಗ್ರೆಸ್‌ ಪರವಾಗಿ ಬೆಂಬಲಿಸಿದರೆಕನಿಷ್ಠ 50-80 ಲಕ್ಷ ರೂ. ಆಮಿಷ ಇಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ 10 ಮಂದಿ ಜೆಡಿಎಸ್‌ ಸದಸ್ಯರು ಗೋವಾ ರೆಸಾರ್ಟ್‌ಗೆ ತೆರಳಿದ್ದಾರೆ ಎಂದು ಜೆಡಿಎಸ್‌ ಮೂಲಗಳು ತಿಳಿಸಿವೆ.

ಅಧ್ಯಕ್ಷ ಮತ್ತು ಉಪಾಧ್ಯಕ್ಷ ವರ್ಗವಾರು ಪ್ರಕಟವಾಗಿರುವುದರಿಂದ ತಾಲೂಕಿನಲ್ಲಿ ಬಿಜೆಪಿ ಖಾತೆ ತೆರೆದರೂ ಪಂಚಾಯಿತಿಯಲ್ಲಿ ಅಧಿಕಾರದ ಗದ್ದುಗೆ ಏರುವಷ್ಟು ಬೆಂಬಲಿತ ಸದಸ್ಯರು ಆಯ್ಕೆಗೊಂಡಿಲ್ಲ.

 

ಎಸ್‌ ಮಹೇಶ್‌

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.