ಗ್ರಾಮಾಂತರ ಜಿಲ್ಲೆಗೆ ಬರಗಾಲದ ಬಜೆಟ್‌


Team Udayavani, Mar 9, 2021, 4:45 PM IST

ಗ್ರಾಮಾಂತರ ಜಿಲ್ಲೆಗೆ ಬರಗಾಲದ ಬಜೆಟ್‌

ದೇವನಹಳ್ಳಿ: ಸಿಎಂ ಯಡಿಯೂರಪ್ಪ ಮಂಡಿಸಿರುವ ಬಜೆಟ್‌ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಕೇಂದ್ರವನ್ನು ಘೋಷಿಸುತ್ತಾರೆಂಬುವ ಆಸೆಯಲ್ಲಿದ್ದ ಜನತೆಗೆ ಸರ್ಕಾರ ನಿರಾಸೆ ಮೂಡಿಸಿದೆ. ಜಿಲ್ಲೆಗೆ ಅನೇಕ ಯೋಜನೆಗಳನ್ನು ನೀಡಬೇಕಾಗಿತ್ತು. ಆದರೆ, ನಿರೀಕ್ಷಿತ ಮಟ್ಟದಲ್ಲಿ ಯಾವುದೇ ತಾಲೂಕಿಗೆ ಯೋಜನೆಗಳನ್ನು ನೀಡುವುದರಲ್ಲಿ ಬಜೆಟ್‌ ಹಿಂದುಳಿದಿದೆ.

ಬಜೆಟ್‌ನಲ್ಲಿ ಜಿಲ್ಲೆಗೆ ಸಿಕ್ಕಿರುವುದು: ದೇವನಹಳ್ಳಿಯಲ್ಲಿ ಸಾರ್ವ ಜನಿಕ ಖಾಸಗಿ ಸಹಭಾಗಿತ್ವದಲ್ಲಿ ಫುಟ್‌ಬಾಲ್‌, ಹಾಕಿ, ಶೂಟಿಂಗ್‌, ಈಜು, ಟೆನ್ನಿಸ್‌ ಕ್ರೀಡೆಗಳಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾ ಮೂಲಸೌಕರ್ಯ ಒದಗಿಸಲು ಕ್ರಮವಹಿಸಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ದಿಂದ ಬೆಂಗಳೂರು ಸಿಗ್ನೇಚರ್‌ ಬ್ಯುಸಿನೆಸ್‌ ಪಾರ್ಕ್‌ ನಿರ್ಮಿಸಲು ಪ್ರಸ್ತಾಪಿಸಿದ್ದು, ಈ ಯೋಜನೆಯ ಟ್ರಂಕ್‌ ಮೂಲ ಸೌಕರ್ಯವನ್ನು 168 ಕೋಟಿ ರೂ.ಗಳ ವೆಚ್ಚದಲ್ಲಿ ಈಗಾಗಲೇ ಅಭಿವೃದ್ಧಿಪಡಿಸಲಾಗುತ್ತಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ

2ನೇ ರನ್‌ವೇ ಕಾಮಗಾರಿಯು 2,708 ಕೋಟಿ ರೂ.ಗಳ ವೆಚ್ಚದಲ್ಲಿಪೂರ್ಣಗೊಳಿಸಿ, 2ನೇ ಟರ್ಮಿನಲ್‌ ಕಟ್ಟಡ ಕಾಮಗಾರಿಯನ್ನು 4,751ಕೋಟಿ ರೂ.ವೆಚ್ಚದಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು. ಎತ್ತಿನಹೊಳೆ ಸಮಗ್ರ ಯೋಜನೆಗೆ ಭೈರಗೊಂಡಲು ಜಲಾಶಯದ ನಿರ್ಮಾಣಕ್ಕೆ ಅಡ್ಡಿಯಾಗಿರುವ ಭೂಸ್ವಾಧೀನ ಸಮಸ್ಯೆ ನಿವಾರಿಸಿ ಕಾಮಗಾರಿಗೆ ಆದ್ಯತೆ ನೀಡಲಾಗುವುದು. ಬೆಂಗಳೂರು ನಗರ ವೃಷಭಾವತಿ ಕಣಿವೆಯಿಂದ ದ್ವಿತೀಯ ಹಂತಕ್ಕೆ ಸಂಸ್ಕರಿಸಿದ 308ಎಂಎಲ್‌ಡಿ ನೀರನ್ನು ಬೆಂಗಳೂರು ನಗರ ಜಿಲ್ಲೆ, ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಯ 234 ಕೆರೆಗಳಿಗೆ ನೀರುತುಂಬಿಸುವ ಯೋಜನೆಗೆ 500 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ. ಕಾರ್ಮಿಕರ ಸುಸಜ್ಜಿತವಾದ ತಾತ್ಕಾಲಿಕ ವಸತಿ ನಿರ್ಮಾಣಕ್ಕೆ ಆದ್ಯತೆಯನ್ನು ಬಜೆಟ್‌ನಲ್ಲಿ ನೀಡಲಾಗಿದೆ.

ನಿರಾಸೆ ಮೂಡಿಸಿದ ಬಜೆಟ್‌: ಈ ಬಾರಿ ಬಜೆಟ್‌ನಲ್ಲಿ ಜಿಲ್ಲಾ ಕೇಂದ್ರದ ಘೋಷಣೆ, ಜಿಲ್ಲಾಸ್ಪತ್ರೆ, ಮೆಡಿಕಲ್‌ ಕಾಲೇಜು, ಸರ್ಕಾರಿ ಎಂಜನಿಯರಿಂಗ್‌ ಕಾಲೇಜು, ದೇವನಹಳ್ಳಿ ಮತ್ತು ವಿಜಯಪುರ ಅವಳಿ ನಗರಗಳಾಗಿ ಅಭಿವೃದ್ಧಿ ಪಡಿಸುವುದು. ಜಿಲ್ಲಾ ಕ್ರೀಡಾಂಗಣ,ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿರುವ ಕಾವೇರಿನೀರು ನಗರಕ್ಕೆ ವಿಸ್ತರಣೆ, ಮೆಟ್ರೋ ರೈಲು, ದ್ರಾಕ್ಷಿ ಹಣ್ಣಿನಸಂಸ್ಕರಣಾ ಘಟಕ ಸೇರಿದಂತೆ ಯಾವುದೇ ಯೋಜನೆಗಳಿಗೂಅನುದಾನ ಘೋಷಣೆಯಾಗಿಲ್ಲ, ಎತ್ತಿನಹೊಳೆ ಯೋಜನೆಯಿಂದ ಯಾವಾಗ ನೀರು ಬರುವುದು ಎಂಬುವ ಕನಸಿನಲ್ಲಿ ಜನರು ಇದ್ದಾರೆ. ಕಾಮಗಾರಿ ಸ್ಥಗಿತಗೊಂಡಿದೆ. ಜಿಲ್ಲೆಯಲ್ಲಿ 1500 ಅಡಿ ಕೊರೆಸಿದರೂಕೊಳವೆ ಬಾವಿಗಳಲ್ಲಿ ನೀರು ಬರದ ಸ್ಥಿತಿ ನಿರ್ಮಾಣವಾಗಿದೆ. ಶಾಶ್ವತ ನೀರಾವರಿಗೆ ಹೆಚ್ಚಿನ ಅನುದಾನ ನೀಡುತ್ತಾರೆಂಬುವ ಜನಪ್ರತಿನಿಧಿಗಳು ಮತ್ತು ಜನರಿಗೆಈ ಬಾರಿಯು ಸರ್ಕಾರ ನಿರಾಶಾದಾಯಕ ಬಜೆಟ್‌ ಮಂಡಿಸಿದ್ದಾರೆ.

ಬೆಂ.ಗ್ರಾ ಜಿಲ್ಲೆಗೆ ರಾಜ್ಯ ಬಜೆಟ್‌ನಲ್ಲಿ ಸಾಕಷ್ಟುಅನುದಾನದ ನಿರೀಕ್ಷೆ ಹುಸಿಯಾಗಿದೆ. ಏತ ನೀರಾವರಿಗೆ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತದೆ ಎಂಬುವ ಆಶಾ ಭಾವನೆಯಲ್ಲಿದ್ದೆವು. ಎಸ್‌ಟಿಆರ್‌ಆರ್‌ಯೋಜನೆಗೆ ಹೆಚ್ಚಿನ ಒತ್ತನ್ನು ನೀಡಬೇಕಾಗಿತ್ತು. ಪಿಆರ್‌ ಆರ್‌ ರಸ್ತೆಗಳಿಗೆ ಹೆಚ್ಚಿನ ಒತ್ತನ್ನು ನೀಡಿದೆ. ಶರತ್‌ ಬಚ್ಚೇಗೌಡ, ಶಾಸಕ

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತಲಿನಪ್ರದೇಶ ಅಭಿವೃದ್ಧಿಗೆ ಬಜೆಟ್‌ನಲ್ಲಿಹೆಚ್ಚಿನ ಒತ್ತನ್ನು ನೀಡಿದರೆ ಹೇಗೆ,ದೇವನಹಳ್ಳಿ ಸುತ್ತಮುತ್ತಲು ಅನೇಕ ಬಡ ಜನರು, ರೈತರು, ಕೂಲಿಕಾರ್ಮಿಕರು, ಅಲ್ಪಸಂಖ್ಯಾತರುಸಾಕಷ್ಟು ಇದ್ದರೂ ಸರ್ಕಾರ ಬಜೆಟ್‌ನಲ್ಲಿ ಅವರಿಗೆ ಅನುಕೂಲವಾಗುವ ಯೋಜನೆ ರೂಪಿಸುವಲ್ಲಿ ವಿಫಲವಾಗಿದೆ. ಎಲ್‌.ಎನ್‌.ನಾರಾಯಣಸ್ವಾಮಿ, ಶಾಸಕ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.