ಸ‌ರ್ಕಾರಿ ಆಂಗ್ಲ ಶಾಲೆಗೆ ಸೇರಿಸಲು ಹರಸಾಹಸ


Team Udayavani, Jun 5, 2019, 3:00 AM IST

sarkari

ದೇವನಹಳ್ಳಿ: ತಾಲೂಕಿನ ವಿಶ್ವನಾಥಪುರ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಪ್ರಸ್ತುತ ವರ್ಷದಿಂದ ಎಲ್‌ಕೆಜಿ, ಯುಕೆಜಿ ಹಾಗೂ 1ನೇ ತರಗತಿಯ ಆಂಗ್ಲ ಮಾಧ್ಯಮ ದಾಖಲಾತಿಗಳು ಆಗಿದ್ದು, ಅದರಂತೆ ಪ್ರಸ್ತುತ ಎಲ್‌ಕೆಜಿ ಹಾಗೂ ಯುಕೆಜಿಗೆ ದಾಖಲಾತಿ ಪ್ರಮಾಣ 100ಕ್ಕೆ ಏರಿದೆ. ಕೆಪಿಎಸ್‌, ಸ‌ರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭ ಹಿನ್ನಲೆಯಲ್ಲಿ ಪೋಷಕರು ತಮ್ಮ ಮಕ್ಕಳ ದಾಖಲಾತಿಗಾಗಿ ಹರಸಾಹಸ ಪಡುವಂತಾಗಿದೆ.

ದಾಖಲಾತಿ ಪ್ರಮಾಣ ಹೆಚ್ಚಳ: ಸರ್ಕಾರದ ಆದೇಶದಂತೆ ಪ್ರತಿ ಸರ್ಕಾರಿ ಶಾಲೆಗೆ ಎಲ್‌ಕೆಜಿ, ಯುಕೆಜಿ ಆಂಗ್ಲ ಮಾಧ್ಯಮಕ್ಕೆ 30 ವಿದ್ಯಾರ್ಥಿಗಳನ್ನು ಮಾತ್ರ ಸೀಮಿತಗೊಳಿಸಿದೆ. ಇದೀಗ ದಾಖಲಾತಿ ಪ್ರಮಾಣ ಹೆಚ್ಚಾಗಿದ್ದರಿಂದ ಶಿಕ್ಷಕರು ಎಸ್‌ಡಿಎಂಸಿ ಮೊರೆ ಹೋಗುತ್ತಿದ್ದು, ಸಮಸ್ಯೆ ಪರಿಹರಿಸಿಕೊಳ್ಳಲು ಶಾಲಾ ಆಡಳಿತ ಮಂಡಳಿ ಸಭೆಯಲ್ಲಿ ಪ್ರತಿ 30 ವಿದ್ಯಾರ್ಥಿಗಳ ಪೈಕಿ ಶಿಕ್ಷಕರನ್ನು ಹೆಚ್ಚುವರಿಯಾಗಿ ನೇಮಿಸಿಕೊಳ್ಳಲು ಚರ್ಚಿಸಲಾಗುತ್ತಿದೆ. ಈಗಾಗಲೇ ಒಂದು ಶಿಕ್ಷಕ, ಒಂದು ಆಯಾ ಹುದ್ದೆಗೆ ನೇಮಕಾತಿ ಕರೆಯಲಾಗಿದೆ.

ನಲಿಕಲಿಗೆ ಸೇರಿಸಿಕೊಳ್ಳಲು ಅವಕಾಶ: ಆಂಗ್ಲ ಮಾಧ್ಯಮಕ್ಕೆ ಹೆಚ್ಚಿನ ಬೇಡಿಕೆ ಇದ್ದು, ಪೋಷಕರು ತಮ್ಮ ಮಕ್ಕಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸುತ್ತಿರುವುದ್ದಾರೆ. ಆದರೆ, ಸರ್ಕಾರದ ಆದೇಶದಂತೆ 30 ಮಕ್ಕಳನ್ನು ಮಾತ್ರ ಅವಕಾಶ ಇದೆ. ಉಳಿದವರನ್ನು ನಲಿಕಲಿಗೆ ಸೇರಿಸಿಕೊಳ್ಳಲು ಅವಕಾಶವಿದೆ. ಆದರೆ, ಪೋಷಕರು ಇದಕ್ಕೆ ಸಮ್ಮತ ನೀಡುತ್ತಿಲ್ಲ. ಬದಲಾಗಿ ನಮ್ಮ ಮಕ್ಕಳನ್ನು ಸಹ ಎಲ್‌ಕೆಜಿ ಆಂಗ್ಲ ಮಾಧ್ಯಮದಲ್ಲಿಯೇ ದಾಖಲಾತಿ ಮಾಡಿಕೊಳ್ಳಿ ಎಂದು ಪಟ್ಟು ಹಿಡಿಯುತ್ತಿರುವುದು ಶಿಕ್ಷಕರಿಗೆ ಒಂದು ರೀತಿಯ ಸಮಸ್ಯೆ ಎದುರಿಸುವಂತೆ ಆಗಿದೆ.

ಪೋಷಕರು ಮೇಲಿಂದ ಮೇಲೆ ಸರ್ಕಾರಿ ಶಾಲೆಯಲ್ಲಿ ತಮ್ಮ ಮಕ್ಕಳ ದಾಖಲಾತಿ ಮಾಡಿಕೊಳ್ಳಲು ಹರಸಾಹಸ ಪಡುತ್ತಿರುವುದು ಒಂದು ಕಡೆಯಾದರೆ, ಶಿಕ್ಷಕರು ಆಂಗ್ಲ ಮಾಧ್ಯಮಕ್ಕೆ ಸೀಟು ಖಾಲಿ ಇಲ್ಲ. ತಮ್ಮ ಮಗುವನ್ನು ನಲಿ ಕಲಿ (ಕನ್ನಡ ಮಾಧ್ಯಮ)ಕ್ಕೆ ಸೇರಿಸಿ ಎಂದು ಹೇಳುತ್ತಿರುವುದು ಶಿಕ್ಷಕರಲ್ಲಿ ಹಾಗೂ ಪೋಷಕರಲ್ಲಿ ಮಾತಿನ ಚಕಮಕಿ ಜೋರಾಗಿಯೇ ನಡೆಯುತ್ತಿದೆ.

30 ಮಂದಿಗೆ ಸೀಮಿತ ಸಲ್ಲ: ಸರ್ಕಾರ ಪ್ರತಿ ಶಾಲೆಗೆ 30 ಸೀಟುಗಳಿಗೆ ಆಂಗ್ಲ ಮಾಧ್ಯಮ ಎಲ್‌ಕೆಜಿಯನ್ನು ಸೀಮಿತಗೊಳಿಸಿರುವುದು ಸರಿಯಲ್ಲ. ಈ ಬಗ್ಗೆ ಪೋಷಕರಿಗೆ ಮೊದಲೇ ತಿಳಿಸಬೇಕಿತ್ತು. ಆಂಗ್ಲ ಮಾಧ್ಯಮಕ್ಕೆ ಈ ಶಾಲೆಯಲ್ಲಿ ದಾಖಲಾತಿ ಪ್ರಮಾಣ ಹೆಚ್ಚಾದರೆ ಯಾರು ಹೊಣೆ, ನಮ್ಮ ಮಕ್ಕಳು ಸಹ ಆಂಗ್ಲ ಮಾಧ್ಯಮಕ್ಕೆ ಸೇರುವುದು ನಮಗೆ ಆಸೆ ಇರುತ್ತದೆ. ಈ ವಿಚಾರವಾಗಿ ಸರ್ಕಾರ ಗಂಭೀರವಾಗಿ ಯೋಚಿಸಿ, ಆದೇಶ ಹೊರಡಿಸಬೇಕಿತ್ತು. ಆಂಗ್ಲ ಮಾಧ್ಯಮದಲ್ಲಿಯೇ ದಾಖಲಾತಿ ಮಾಡಿಕೊಳ್ಳಿ ಎಂದು ಶಿಕ್ಷಕರಿಗೆ ಪೋಷಕರು ಒತ್ತಾಯಿಸಿದ್ದಾರೆ.

ಅರ್ಹತೆ ಪರೀಕ್ಷೆ ನಡೆಸಿ: ಇದೀಗ ನಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮಕ್ಕೆ ಸೇರಿಸಿಕೊಳ್ಳಲು ಎಲ್ಲಾ ರೀತಿಯಿಂದ ಸಿದ್ಧಪಡಿಸಿದ್ದೇವೆ. ಇದೀಗ ದಾಖಲಾತಿ ಇಲ್ಲ ಎಂದು ಹೇಳಿದರೆ ಸರಿಯಲ್ಲ. ಸ‌ರ್ಕಾರದ ಆದೇಶದಂತೆ 30 ವಿದ್ಯಾರ್ಥಿಗಳನ್ನು ಅರ್ಹತೆ ಪರೀಕ್ಷೆ ನಡೆಸಿ, ಲಾಟರಿ ಮೂಲಕ ಆಯ್ಕೆ ಮಾಡಬಹುದಲ್ಲವೆ. ಈ ರೀತಿ 1ನೇ ತರಗತಿಗೆ ದಾಖಲಾತಿ ಮಾಡಿಕೊಳ್ಳಲಿ ಎಂದು ವಿಶ್ವನಾಥಪುರ ಪೋಷಕಿ ದೀಪಾ ಹೇಳುತ್ತಾರೆ.

ಮಕ್ಕಳ ದಾಖಲಾತಿಗೆ ಪೋಷಕರು ಒತ್ತಾಯ: ಈಗಾಗಲೇ ಪೋಷಕರು ಮೇಲಿಂದ ಮೇಲೆ ಬಂದು ಸ‌ರ್ಕಾರಿ ಶಾಲೆಗಳಲ್ಲಿ ತಮ್ಮ ಮಕ್ಕಳನ್ನು ಸೇರಿಸುತ್ತಿದ್ದಾರೆ. ಪ್ರಸ್ತುತ ಎಲ್‌ಕೆಜಿ, ಯುಕೆಜಿಗೆ 100 ಮಕ್ಕಳನ್ನು ದಾಖಲಾತಿ ಮಾಡಿಕೊಂಡಿದ್ದೇವೆ. 1ನೇ ತರಗತಿಗೆ 40 ಮಕ್ಕಳು ದಾಖಲಾತಿಯಾಗಿದೆ. ಇನ್ನು ದಾಖಲಾತಿಗಾಗಿ ಪೋಷಕರು ಬರುತ್ತಿದ್ದಾರೆ.

ಇದೊಂದು ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಸರ್ಕಾರ ಕೇವಲ 30 ಸೀಟುಗಳಿಗೆ ಮಾತ್ರ ಅವಕಾಶ ನೀಡಿದೆ. ಈಗಾಗಲೇ ಹೆಚ್ಚುವರಿ ದಾಖಲಾತಿಯಾಗಿರುವುದನ್ನು ಸರಿಪಡಿಸಿಕೊಳ್ಳುವುದೇ ಆಗಿದೆ. ಇದರ ಜೊತೆಯಲ್ಲಿ ಜನಪ್ರತಿನಿಧಿಗಳ ಮೂಲಕ ಪೋಷಕರು ತಮ್ಮ ಮಕ್ಕಳ ದಾಖಲಾತಿಗಾಗಿ ಕರೆ ಮಾಡಿಸುತ್ತಿದ್ದಾರೆ ಎಂದು ಕೆಪಿಎಸ್‌ ಕಿರಿಯ ಮುಖ್ಯೋಪಾಧ್ಯಯ ಬಸವರಾಜ್‌ ಹೇಳಿದ್ದಾರೆ.

ಯುಕೆಜಿಗೆ ದಾಖಲಿಸಿಕೊಳ್ಳಲು ಸೀಟ್‌ ಖಾಲಿ ಇಲ್ಲ ಎಂದು ಶಿಕ್ಷಕರು ಹೇಳುತ್ತಿದ್ದಾರೆ. ಇದರಿಂದ ನಮಗೆ ಬಹಳ ತೊಂದರೆ ಅನುಭವಿಸುವಂತೆ ಆಗಿದೆ.
-ಆರತಿದೇವಿ, ಪೋಷಕಿ

* ಎಸ್‌.ಮಹೇಶ್‌

ಟಾಪ್ ನ್ಯೂಸ್

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.