ಶರಣರ ಬದುಕಿನ ಮಾರ್ಗ ಅನುಕರಣೀಯವಾದುದು


Team Udayavani, May 14, 2019, 3:00 AM IST

sharanara

ವಿಜಯಪುರ: ಸಕಲಜೀವಿಗಳಲ್ಲಿ ಲೇಸನ್ನು ಬಯಸಿದ ಶರಣರ ಬದುಕಿನ ಮಾರ್ಗವು ಸಾರ್ವಕಾಲಿಕ ಅನುಕರಣೀಯ. ಕಾಯಕನಿಷ್ಠೆ. ಧರ್ಮನಿಷ್ಠರಾಗಿ ಶರಣಸಂಸ್ಕೃತಿಯನ್ನು ಕಟ್ಟಿಕೊಳ್ಳುವ ಕಾಯಕದಲ್ಲಿ ಎಲ್ಲರೂ ತೊಡಗಿಕೊಳ್ಳಬೇಕಿದೆ.

ಸಮಾಜದ ಹಿತಕ್ಕಾಗಿ ತತ್ವನಿಷ್ಠೆ, ಮೌಲ್ಯನಿಷ್ಠೆಯಿಟ್ಟುಕೊಂಡು ಧೀರೋದ್ಧಾತ ಶ್ರೇಷ್ಠ ಬದುಕು ಮಾರ್ಗದಲ್ಲಿ ಧ್ಯೇಯ, ಉದಾತ್ತತೆ ಇರಿಸಿಕೊಳ್ಳುವಂತಾಗಬೇಕು ಎಂದು ನಿಡುಮಾಮಿಡಿ ಶ್ರೀ ಮಾನವ ಸದ್ಧರ್ಮಸಿಂಹಾಸನ ಪೀಠಾಧ್ಯಕ್ಷ ಶ್ರೀ ವೀರಭದ್ರಚನ್ನಮಲ್ಲ ದೇಶೀಕೇಂದ್ರಸ್ವಾಮೀಜಿ ಹೇಳಿದರು.

ಪಟ್ಟಣ ಸುಬ್ಬಮ್ಮಚನ್ನಪ್ಪ ಸಮುದಾಯಭವನದಲ್ಲಿ ಶ್ರೀ ವೀರೇಶಚಾರಿಟಬಲ್‌ ಟ್ರಸ್ಟ್‌, ದೇವನಹಳ್ಳಿ ಸಾಕ್ಷಿಮುರುಘ ಸೇವಾಟ್ರಸ್ಟ್‌ಗಳ ಸಹಕಾರದಲ್ಲಿ ಹಮ್ಮಿಕೊಂಡಿದ್ದ ಸಾಹಿತಿ ಸಿ.ಎಂ.ವೀರಣ್ಣ ಸಂಸ್ಮರಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ವೀರಣ್ಣನವರ ಕೊಡುಗೆ ಅಪಾರ: ಸಾಮಾಜಿಕ, ಧಾರ್ಮಿಕ, ಅಧ್ಯಾತ್ಮಿಕ ಮತ್ತು ಸಾಹಿತ್ಯಿಕ ಕ್ಷೇತ್ರಕ್ಕೆ ಸಿ.ಎಂ.ವೀರಣ್ಣನವರ ಕೊಡುಗೆ ಅಪಾರವಾದುದು. ಅಕ್ಕನಬಳಗ, ಅರಿವಿನ ಮನೆಯ ಮೂಲಕ ಮಹಿಳೆಯರಿಗೆ, ಕಿರಿಯರಿಗೆ ಧರ್ಮಪ್ರಸಾರ ಮಾಡಲು ಮಾಡಿದ ಸೇವೆಯನ್ನು ಅನುಕರಿಸಬೇಕು ಎಂದರು.

ಜಚನಿ ಕಾರ್ಯ ಪ್ರಶಂಸನೀಯ: 12 ನೇ ಶತಮಾನದ ನಂತರ ಶ್ರಮಜೀವಿಸಂಸ್ಕೃತಿಗೆ ಪೂರಕವಾಗಿ ನಿರಕ್ಷರಕುಕ್ಷಿಗಳನ್ನು ಸಾಹಿತ್ಯಸೃಷ್ಟಿಯೆಡೆಗೆ ಓಲೈಸುವ ಕಾರ್ಯದಲ್ಲಿ ಶರಣರಷ್ಟೇ ಮಹತ್ವಪೂರ್ಣವಾಗಿ ಸೇವೆಸಲ್ಲಿಸದ ನಿಡುಮಾಮಿಡಿ ಕ್ಷೇತ್ರಾಧ್ಯಕ್ಷ ಸಾಹಿತ್ಯಸೂರ್ಯ ಜಚನಿ ಗುರುಗಳ ಕಾರ್ಯವು ಶ್ಲಾಘನೀಯವಾದುದು ಎಂದು ತಿಳಿಸಿದರು.

ಸಿ.ಎಂ.ವೀರಣ್ಣ ಪ್ರಶಸ್ತಿ ನೀಡಬೇಕು: ಸಾಹಿತ್ಯಚಂದ್ರ ಸಿ.ಎಂ.ವೀರಣ್ಣ ಅವರ ಹೆಸರಿನಲ್ಲಿ ಶ್ರೀ ವೀರೇಶ ಚಾರಿಟಬಲ್‌ ಟ್ರಸ್ಟ್‌ನ ವತಿಯಿಂದ ಪ್ರತಿವರ್ಷವೂ ಕೊಡುವ ಯೋಜನೆಯು ಜಾರಿಯಾಗಬೇಕು. ಸತ್ಪ್ರೇರಣೆ, ಸದ್ಚಿಂತನೆ ಬಂದು ಹೊಸಬೆಳಕು ಮೂಡಿ ಹೊಸಭಾವನೆ ಪ್ರತಿಫ‌ಲಿಸಲು ನಿಸರ್ಗವೇ ಮಾರ್ಗತೋರಬೇಕಿದೆ ಎಂದು ಹೇಳಿದರು.

ಸಾಧೆನೆ ಮೂಲಕ ಸಾಫ‌ಲ್ಯ: ವನಕಲ್ಲು ಶ್ರೀ ಮಲ್ಲೇಶ್ವರಸಂಸ್ಥಾನಮಠಾಧ್ಯಕ್ಷ ಶ್ರೀ ಬಸವರಮಾನಂದಸ್ವಾಮೀಜಿ ಅನುಭವಾಮೃತವನ್ನು ನೀಡಿ, ಮನುಷ್ಯನು ನಾನಾಕ್ಷೇತ್ರಗಳಲ್ಲಿ ಸಾಧನೆ, ಸಿದ್ಧಿಗಳ ಮೂಲಕ ಜೀವನದಲ್ಲಿ ಸಾಫ‌ಲ್ಯವನ್ನು ಪಡೆಯಲು ಸಾಧ್ಯವಿದ್ದು, ಧಾರ್ಮಿಕ ರಂಗದಲ್ಲಿ ವ್ರತ, ನಿಯಮ, ಶರಣರ ನಿಷ್ಠಾನುಷ್ಠಾನ, ಗುರುಲಿಂಗಜಂಗಮದಲ್ಲಿ ಪ್ರೇಮವನ್ನಿರಿಸಕೊಳ್ಳಬಹುದಾಗಿದೆ. ಉತ್ತಮ ಸೇವಾಮನೋಭಾವನೆಯಿರಿಸಿಕೊಳ್ಳುವ ಮೂಲಕ ಪಾಪಪುಣ್ಯಾಧಿಕರ್ಮಗಳಿಂದ ಹೊರಬರಲು ಸಾಧ್ಯವಿದೆ ಎಂದರು.

ಎಲ್ಲರೊಳಗೊಂದಾಗಿ ಬದುಕಿ: ಜಿಲ್ಲಾ ಶರಣಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಚ್‌.ಎಸ್‌.ರುದ್ರೇಶಮೂರ್ತಿ ಮಾತನಾಡಿ, ಎಲ್ಲರೊಳಗೊಂದಾಗಿ ಬದುಕಲು ಮಾಗಿದ ಮನಸ್ಸುಗಳಿಗೆ ಮಾತ್ರ ಸಾಧ್ಯವಿದೆ. ವಾಸ್ತವವಾಗಿ ಹಿರಿತನ ಬರುವುದು ವಯಸ್ಸು, ಅಧಿಕಾರ, ಹಣ, ವಿದ್ವತ್ತಿನಿಂದ ಅಲ್ಲ. ಸದಾಸಾತ್ವಿಕತೆ, ವಿನಯಶೀಲತೆ, ಅಹಂನಿರಸನಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ ವಾಪಸಂದ್ರ ನಿಡುಮಾಮಿಡಿ ಶಾಖಾಮಠಾಧ್ಯಕ್ಷೆ ಡಾ.ಶಿವಜ್ಯೋತಿತಾಯಿ, ದೇವನಹಳ್ಳಿ ಸಾಕ್ಷಿಮುರುಘ ಸೇವಾಟ್ರಸ್ಟ್‌ನ ಅಧ್ಯಕ್ಷ ತುಪ್ಪದ ಚಕ್ಕವೀರಭದ್ರಪ್ಪ, ಶ್ರೀ ವೀರಭದ್ರಸ್ವಾಮಿಗೋಷ್ಠಿ ಅಕ್ಕನ ಬಳಗ ಸೇವಾಟ್ರಸ್ಟ್‌ನ ಅಧ್ಯಕ್ಷ ಸಿ.ಬಸಪ್ಪ, ಪಿ.ರುದ್ರಪ್ಪ, ಚುಟುಕು ಕವಿ ಜರಗನಹಳ್ಳಿ ಶಿವಶಂಕರ್‌, ನಗರ್ತ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಚ್‌.ಎಸ್‌.ಬಸವರಾಜು, ತಾಲೂಕು ಶರಣಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮ.ಸುರೇಶ್‌ಬಾಬು, ಶ್ರೀ ವೀರೇಶಚಾರಿಟಬಲ್‌ ಟ್ರಸ್ಟ್‌ನ ಅಧ್ಯಕ್ಷ ಅನಿಲ್‌ಕುಮಾರ್‌, ಕಾರ್ಯದರ್ಶಿ ವಿಮಲಾಂಬ, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.