ಸಿದ್ಧಗಂಗಾ ಸ್ವಾಮೀಜಿ ಕೇವಲ ವ್ಯಕ್ತಿಯಲ್ಲ, ಮಹಾಚೇತನ


Team Udayavani, Mar 26, 2017, 4:43 PM IST

MUM-03.jpg

ಹೊಸಕೋಟೆ: ಸಿದ್ಧಗಂಗೆಯ ಮಠಾಧ್ಯಕ್ಷರಾದ ಶಿವಕುಮಾರ ಸ್ವಾಮೀಜಿ ಕೇವಲ ವ್ಯಕ್ತಿಯಾಗದೆ ಮಹಾಚೇತನವಾಗಿದ್ದಾರೆಂದು ನಿವೃತ್ತ ಐಎಎಸ್‌ ಅಧಿಕಾರಿ ಡಾ.ಸಿ.ಸೋಮಶೇಖರ್‌ ಹೇಳಿದರು. 

ನಗರದ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಸಿದ್ಧಗಂಗಾ ಶ್ರೀ 110ನೇ ಹುಟ್ಟುಹಬ್ಬದ ಅಂಗ ವಾಗಿ ಹಮ್ಮಿಕೊಂಡಿರುವ ಶೋಭಾಯಾತ್ರೆಯ ಸಮಾರೋಪದಲ್ಲಿ ಮಾತನಾಡಿದ ಅವರು, ಸಿದ್ಧಗಂಗಾ ಸ್ವಾಮೀಜಿಯಂತಹ ಸೇವಾ ಮನೋಭಾವ ಹೊಂದಿರುವ ವ್ಯಕ್ತಿಗಳು ವಿರಳ ಹಾಗೂ ಸ್ವಾರ್ಥತೆ ಹೆಚ್ಚಾಗುತ್ತಿರುವ ಸನ್ನಿವೇಶದಲ್ಲಿ ಸಾಮಾಜಿಕ ಸೇವೆಗೆ ತಮ್ಮ ಜೀವನವನ್ನು ಮುಡಿಪಾಗಿಟಿದ್ದು, ರಾಷ್ಟ್ರದ ಪ್ರತಿಷ್ಠಿತ ಭಾರತರತ್ನ ಪ್ರಶಸ್ತಿಗೆ ಅರ್ಹರಾಗಿದ್ದಾರೆ ಎಂದು ಹೇಳಿದರು.

ಪವಿತ್ರ ದಿನವಾಗಿ ಆಚರಿಸಿ: ಕಳೆದ 85 ವರ್ಷಗಳಿಂದಲೂ  ಯಾವುದೇ  ಜಾತಿ, ಮತ, ಭೇದಭಾವವಿಲ್ಲದೆ ಎಲ್ಲಾ ವರ್ಗಕ್ಕೂ ಮುಕ್ತವಾದ ಅವಕಾಶ ಕಲ್ಪಿಸಿ  ಶೈಕ್ಷಣಿಕ ಪ್ರಗತಿಗೆ ಉತ್ತಮ ಕೊಡುಗೆ ನೀಡಲು ಶ್ರಮಿಸುತ್ತಿರುವ ಮಠಾಧೀಶರು ಇತರ ರಿಗೆ ಮಾದರಿಯಾಗಿದ್ದಾರೆ.  ಕೇವಲ ಶಿಕ್ಷಣ ಕ್ಷೇತ್ರಕ್ಕೆ ಮಾತ್ರ ಸೀಮಿತಗೊಳ್ಳದೆ ಸಮಾಜದ ಬಡವರ, ರೈತರಂತಹ ಎಲ್ಲಾ ವರ್ಗದವರ ಹಿತ ಬಯಸು ವರಾಗಿ ಯುಗಪುರುಷರಾಗಿದ್ದಾರೆ. ಅವರ ಜನ್ಮದಿನೋತ್ಸವವನ್ನು ಪವಿತ್ರ ದಿನವನ್ನಾಗಿ ಆಚರಿಸುವ ಮೂಲಕ ಗೌರವ ಸಲ್ಲಿಸಬೇಕಾದ್ದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದರು.

ತಾಲೂಕು ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಿ.ಎಸ್‌.ರಾಜ ಕುಮಾರ್‌ ಮಾತನಾಡಿ, ಸಿದ್ಧಗಂಗಾ ಸ್ವಾಮೀಜಿಯವರ ಹುಟ್ಟುಹಬ್ಬಕ್ಕಾಗಿ ಈಗಾಗಲೇ ಭಕ್ತರಿಂದ ಸುಮಾರು 250 ಮೂಟೆಗಳಷ್ಟು ಅಕ್ಕಿ ಸಂಗ್ರಹಣೆ ಮಾಡಲಾಗುತ್ತಿದ್ದು ಯಾವುದೇ ರೀತಿಯ ಕೊಡುಗೆಗಳನ್ನು ನೀಡಬಯಸುವವರು ಮಾ.30ರೊಳಗೆ ಸಲ್ಲಿಸಬಹುದಾಗಿದೆ ಎಂದು ಹೇಳಿದರು. ಸಂಗ್ರಹಗೊಂಡ ಎಲ್ಲಾ ವಸ್ತುಗಳನ್ನು ಪಟ್ಟಣದ ಎಸ್‌ಜೆಆರ್‌ಎಸ್‌ ಶಾಲೆಯಲ್ಲಿ ದಾಸ್ತಾನು ಮಾಡಿದ್ದು, ಮಾ.31ರಂದು ಕ್ಷೇತ್ರಕ್ಕೆ  ರವಾನಿಸಲಾಗುವುದು. ಹೆಚ್ಚಿನ ವಿವರಗಳಿಗೆ ದೂ. 9620782738 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಜಿಲ್ಲಾ ಶೋಭಾಯಾತ್ರೆ ಸಮಿತಿ ಅಧ್ಯಕ್ಷ ಹುಲಿಕಲ್‌ ನಟರಾಜ್‌, ತಾಲೂಕು ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಿ.ಎಸ್‌.ರಾಜಕುಮಾರ್‌, ನಗರಸಭೆ ಸದಸ್ಯ ಜೆ.ಸಿ.ವೀರಭದ್ರಯ್ಯ, ಟೌನ್‌ ಬ್ಯಾಂಕ್‌ ನಿರ್ದೇಶಕ ಸಿ.ನವೀನ್‌, ತಾಲೂಕು ವೀರಶೈವ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಸಮಾರಂಭಕ್ಕೂ ಮುನ್ನ ನಗರದ ಅವಿಮುಕ್ತೇಶ್ವರಸ್ವಾಮಿ ದೇಗುಲದಿಂದ ಪ್ರಾರಂಭಗೊಂಡು ಶೋಭಾ ಯಾತ್ರೆ  ಪ್ರಮುಖ ಬೀದಿಗಳಲ್ಲಿ ವಿವಿಧ ಜನಾಪದ ಕಲಾ ತಂಡಗಳೊಂದಿಗೆ  ಸಂಚರಿಸಿತು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.