ಕುಡಿವ ನೀರಿನ ಸಮಸ್ಯೆ ಬಾರದಂತೆ ಕ್ರಮ ಕೈಗೊಳ್ಳಿ: ಡೀಸಿ


Team Udayavani, May 18, 2019, 3:00 AM IST

kudiva

ದೇವನಹಳ್ಳಿ: ಪ್ರತಿ ಗ್ರಾಮದಲ್ಲಿ ಜಾನುವಾರುಗಳಿಗೂ ನೀರು ಒದಗಿಸುವ ಕೆಲಸವಾಗಬೇಕಿದ್ದು ಎಲ್ಲಾ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ನೀರಿನ ಸಮಸ್ಯೆಗಳನ್ನು ಪಟ್ಟಿಮಾಡಿ ಕೂಡಲೇ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸಿ.ಎಸ್‌.ಕರೀಗೌಡ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನಾದ್ಯಂತ ನೀರಿನ ಸಮಸ್ಯೆ ಇರುವ ಗ್ರಾಮಗಳು ಹಾಗೂ ಮೇವಿನ ಸಮಸ್ಯೆ ಕುರಿತಂತೆ ನಗರದ ತಾಪಂ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ನೀರಿನ ಸಮಸ್ಯೆ ಇರುವ ಕಡೆ ಈಗಾಗಲೇ ಟ್ಯಾಂಕರ್‌ಗಳ ಮೂಲಕ ನೀರನ್ನು ಸರಬರಾಜು ಮಾಡಲಾಗುತ್ತಿದೆ. ನೀರಿನ ಸಮಸ್ಯೆ ಇರುವ ಕಡೆ ಕೂಡಲೇ ಟ್ಯಾಂಕರ್‌ನಲ್ಲಿ ನೀರನ್ನು ಸರಬರಾಜು ಮಾಡಬೇಕೆಂದರು.

ಕಂಟ್ರೋಲ್‌ ರೂಂ: ಜಿಲ್ಲಾಧಿಕಾರಿ ಕಚೇರಿಯಲ್ಲಿ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಕಂಟ್ರೋಲ್‌ರೂಂ ದೂ.080-29781021 ಇದ್ದು, ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2ರವರೆಗೆ ಹಾಗೂ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 9ಗಂಟೆವರೆಗೆ ಹಾಗೂ ರಾತ್ರಿ 9 ರಿಂದ ಬೆಳಗ್ಗೆ 9ರವರೆಗೆ ಮೂರು ಪಾಳಿಯಲ್ಲಿ ಕಂಟ್ರೋಲ್‌ ರೂಂ. ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ದೂರವಾಣಿ ಮೂಲಕ ಸ್ವೀಕರಿಸುವ ದೂರು ನಮೂದಿಸಿ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಮುಂದಿನ ಕ್ರಮಕ್ಕೆ ಕಳುಹಿಸಿಕೊಡಲಾಗುತ್ತದೆ ಎಂದು ಹೇಳಿದರು.

ಕ್ರಮ ಕೈಗೊಳ್ಳಿ: ಒಂದು ಲೋಡ್‌ ಮೇವು ಬಂದಿದ್ದು, ಮೇವು ಸಮಸ್ಯೆ ಇರುವ ಕಡೆ ನೀಡಲು ನಿರ್ಧರಿಸಲಾಗಿದೆ. ಅಧಿಕಾರಿಗಳು ಮಳೆ ಬರುವವರೆಗೂ ನೀರಿನ ಸಮಸ್ಯೆ ಬಾರದಂತೆ ಅಗತ್ಯ ಕ್ರಮವನ್ನು ನಿಮ್ಮ ಹಂತದಲ್ಲೇ ತೆಗೆದುಕೊಳ್ಳಬೇಕೆಂದರು.

ನೋಟಿಸ್‌ ನೀಡಲಾಗಿದೆ: ನೀರಿನ ಬವಣೆ ಕಡಿಮೆ ಮಾಡಲು ಎಲ್ಲಾ ಪಿಡಿಒಗಳು ಮಳೆ ಕೊಯ್ಲು ಅಳವಡಿಸಿಕೊಳ್ಳಲು ಮನೆಗಳಲ್ಲಿ ಕಡ್ಡಾಯ ಮಳೆಕೊಯ್ಲು ಪದ್ಧತಿ ಅಳವಡಿಸಿಕೊಳ್ಳುವಂತೆ ಅರಿವು ಮೂಡಿಸಬೇಕು. ಕೈಗಾರಿಕೆ, ಚಿತ್ರಮಂದಿರ, ಕಲ್ಯಾಣ ಮಂಟಪ, ಕೋಳಿ ಫಾರಂ, ವಾಣಿಜ್ಯ ಕಟ್ಟಡ ವಿವಿಧ ಮಾಲಿಕರಿಗೆ ಮಳೆಕೊಯ್ಲು ಪದ್ಧತಿ ಅಳವಡಿಸಿಕೊಳ್ಳಲು ನೋಟಿಸ್‌ ನೀಡಿ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಮ್ಮ ಗಮನಕ್ಕೆ ತನ್ನಿ: ಜಿಪಂ ಸಿಇಒ ಆರ್‌.ಲತಾ, ಬೋರ್‌ವೆಲ್‌ ಕೊರೆಸಿರುವ ಕಡೆ ಪೈಪ್‌ಲೈನ್‌ ಅಳವಡಿಸಿಕೊಳ್ಳದಿದ್ದರೆ ಕೂಡಲೇ ಅಳವಡಿಸಿಕೊಳ್ಳಲು ಅನುಮೋದನೆ ನೀಡುವಂತಾಗಬೇಕು. ಎಲ್ಲಾ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮಾಹಿತಿ ನೀಡಿ ಅನುಮೋದನೆ ಪಡೆದು ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. ಉದ್ಯೋಗ ಖಾತ್ರಿಯಲ್ಲಿ ಮಳೆ ಕೊಯ್ಲು ಅಳವಡಿಸಿಕೊಳ್ಳಲು ಅಂದಾಜು ತಯಾರಿಸಲಾಗುತ್ತಿದೆ. ಎಲ್ಲಾದರೂ ನೀರಿನ ಸಮಸ್ಯೆ ಕಂಡು ಬಂದರೇ ಕೂಡಲೇ ನಮ್ಮ ಗಮನಕ್ಕೆ ತನ್ನಿ ಎಂದು ತಿಳಿಸಿದರು.

ಇದೇ ವೇಳೆ ಉಪವಿಭಾಗಾಧಿಕಾರಿ ಮಂಜುನಾಥ್‌, ಜಿಪಂ ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಶಿರಸ್ತೇದಾರ್‌ ಬಾಲಕೃಷ್ಣ, ತಾಪಂ ಕಾರ್ಯನಿರ್ವಹಣಾಧಿಕಾರಿ ಮುರುಡಯ್ಯ, ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಶನಿವಾರವೇ ನೀರಿನ ಬಿಲ್‌ ಸಲ್ಲಿಸಿ: ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಿದ ಬಿಲ್‌ಗ‌ಳನ್ನು ಪ್ರತಿ ಶನಿವಾರ ಸಲ್ಲಿಸಬೇಕು. ಬಾಕಿ ಬಿಲ್‌ಗ‌ಳ ಮೊತ್ತ ನೀಡಲಾಗಿದ್ದು, ಕಚೇರಿಯಲ್ಲಿ ಯಾವುದೇ ಬಿಲ್‌ ಬಾಕಿ ಇಲ್ಲ. ಎಲ್ಲಾ ಟ್ಯಾಂಕರ್‌ಗಳಿಗೆ ಕಡ್ಡಾಯವಾಗಿ ಜಿಪಿಎಸ್‌ ಅಳವಡಿಸಬೇಕು. ಟ್ಯಾಂಕರ್‌ ನೀರಿಗೆ 500ರೂ. ದರ ನಿಗದಿ ಮಾಡಲಾಗಿದೆ. ಜುಲೈ ಮೊದಲನೇ ವಾರದಲ್ಲಿ ಕುಡಿವ ನೀರು, ಮೇವಿನ ಸಮಸ್ಯೆ ಬಾರದ ಹಾಗೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕರೀಗೌಡ ಅಧಿಕಾರಿಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.