ಕನ್ನಡ ಶಾಲೆಗೆ ಶಿಕ್ಷಕರೇ ಕಂಟಕ

ಶಿಕ್ಷಕರ ವಿರುದ್ಧ ಶಾಲೆ ಮುಚ್ಚಿಸುವ ಹುನ್ನಾರದ ಆರೋಪ | ಕಠಿಣ ಕ್ರಮದ ಎಚ್ಚರಿಕೆ

Team Udayavani, Aug 2, 2019, 11:06 AM IST

br-tdy-1

ನೆಲಮಂಗಲ ಪಟ್ಟಣದ ಪ್ರಿಯದರ್ಶಿನಿ ಪ್ರೌಢಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಅಲ್ಮಾಸ್‌ಫ‌ರ್ವೀನ್‌ತಾಜ್‌ ಭೇಟಿ ನೀಡಿ ದಾಖಲಾತಿ ಪರಿಶೀಲನೆ ಮಾಡಿದರು.

ನೆಲಮಂಗಲ: ರಾಜ್ಯದಲ್ಲಿ ಕನ್ನಡ ಶಾಲೆಗಳ ಉಳಿವಿಗೆ ಸರ್ಕಾರ ಕೋಟ್ಯಂತರ ಹಣ ಖರ್ಚು ಮಾಡಿ ಶಾಲೆ ಗಳನ್ನು ನಡೆಸುತ್ತಿದೆ. ಆದರೆ ಶಿಕ್ಷಕರು ಶಾಲೆಯನ್ನು ಮುಚ್ಚುವ ಉದ್ದೇಶದಿಂದ ಮಕ್ಕಳಿಗೆ ಬೇರೆ ಶಾಲೆಗೆ ಸೇರುವಂತೆ ತಿಳಿಸಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ಒಂದು ವೇಳೆ ಶಿಕ್ಷಕರ ವಿರುದ್ಧದ ಆರೋಪ ಸಾಬೀತಾದರೆ, ಕ್ರಿಮಿನಲ್ ಕೇಸ್‌ ದಾಖಲಿಸಿ, ಮೂರು ತಿಂಗಳ ವೇತನ ಕಡಿತಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಿಕ್ಷಕರ ನಡೆ ಅನುಮಾನಾಸ್ಪದ: ಪಟ್ಟಣದ ಸುಭಾಷ್‌ ನಗರದ ಪ್ರಿಯದರ್ಶಿನಿ ಪ್ರೌಢ ಶಾಲೆ 1994ರಲ್ಲಿ ಆರಂಭವಾಗಿ 1996 ರಿಂದ ಸರ್ಕಾರಿ ಅನುದಾನಿತ ಗೊಂಡಿದೆ. ಜತೆಗೆ ಸಾವಿರಾರು ವಿದ್ಯಾರ್ಥಿಗಳ ಜೀವನ ಬೆಳಕಾಗಿಸಿದೆ. ಇಂತಹ ಶಾಲೆಗೆ ಬಾಗಿಲು ಮುಚ್ಚುವ ಅನಿವಾರ್ಯ ಎದುರಾಗಿರುವುದಕ್ಕೆ ಮೂಲ ಕಾರಣವೇ ಮುಖ್ಯಶಿಕ್ಷರು ಹಾಗೂ ಸಹ ಶಿಕ್ಷಕರು ಎಂಬ ಆರೋಪ ಬಲವಾಗಿ ಕೇಳಿದೆ. ಶಾಲೆ ವಿದ್ಯಾರ್ಥಿಗಳ ದಾಖಲಾತಿ ಪರಿಶೀಲಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಅಲ್ಮಾಸ್‌ ಫ‌ವೀನ್‌ತಾಜ್‌, ಶಾಲೆ ಮುಚ್ಚುವಲ್ಲಿ ಮುಖ್ಯ ಶಿಕ್ಷಕರ ಪಾತ್ರವಿದೆ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.

ಪಾಲಕರನ್ನು ಹೊಣೆ ಮಾಡಿದ ಶಿಕ್ಷಕರು: ಪ್ರಿಯ ದರ್ಶಿನಿ ಪ್ರೌಢಶಾಲೆ 2016-17 ನೇ ಸಾಲಿನಲ್ಲಿ 8 ರಿಂದ 10ನೇ ತರಗತಿಯವರೆಗೆ 94 ಮಕ್ಕಳು, 2017- 18 ರಲ್ಲಿ 84 ಮಕ್ಕಳಿದ್ದರು. ಇನ್ನೂ 2018-19ನೇ ಸಾಲಿನಲ್ಲಿ 67 ಮಕ್ಕಳಿದ್ದಾರೆ ಎಂಬ ದಾಖಲಾತಿಯನ್ನು ಇಲಾಖೆಗೆ ನೀಡಿದ್ದಾರೆ. 67 ಮಕ್ಕಳಲ್ಲಿ 26 ವಿದ್ಯಾ ರ್ಥಿಗಳು ಎಸ್‌ಎಸ್‌ಎಲ್ಸಿ ಪರೀಕ್ಷೆ ಮುಗಿದ ನಂತರ 41 ವಿದ್ಯಾರ್ಥಿಗಳು ಪ್ರಸ್ತುತ ಸಾಲಿನಲ್ಲಿನ 9 ಹಾಗೂ 10ನೇ ತರಗತಿಯಲ್ಲಿ ಇರಬೇಕಾಗಿತ್ತು. ದುರಂತ ವೆಂಬಂತೆ ಶಾಲೆ ಶಿಕ್ಷಕರು 3 ವಿದ್ಯಾರ್ಥಿಗಳನ್ನು ಬಿಟ್ಟು ಉಳಿದ ವಿದ್ಯಾರ್ಥಿಗಳಿಗೆ ವರ್ಗಾವಣೆ ಪ್ರಮಾಣ ಪತ್ರ (ಟಿಸಿ) ನೀಡಿದ್ದಾರೆ. ಇದರ ಬಗ್ಗೆ ಕೇಳಿದರೆ ಪೋಷ ಕರು ಕೊಡಿ ಎಂದು ಕೇಳಿದ್ದರು. ಅದಕ್ಕೆ ಕೊಟ್ಟಿದ್ದೇವೆ ಎಂದು ಮುಖ್ಯ ಶಿಕ್ಷಕ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಆದರೆ ಇದರ ಹಿಂದೆ ಮುಖ್ಯ ಶಿಕ್ಷಕರ ಕೈವಾಡವಿದೆ ಎಂಬ ದಟ್ಟ ಅನಮಾನವಿದೆ ಎನ್ನಲಾಗಿದೆ.

 

ಶಿಕ್ಷಕರ ವಿರುದ್ಧ ಆರೋಪ: ಪ್ರಿಯದರ್ಶಿನಿ ಪ್ರೌಢ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿ ಗಳನ್ನು ಈ ಶಾಲೆಯಲ್ಲಿ ಉತ್ತಮಶಿಕ್ಷಣ ನೀಡುವು ದಿಲ್ಲ. ಶಿಕ್ಷಕರ ಕೊರತೆಯಿದೆ. ಸೌಲಭ್ಯಗಳಿಲ್ಲ ಎಂಬು ದಾಗಿ ಹೇಳಿರುವ ಶಿಕ್ಷಕರು ಒತ್ತಾಯ ಪೂರ್ವಕವಾಗಿ ಬೇರೆ ಶಾಲೆಗೆ ಸೇರುವಂತೆ ಮಾಡಿದ್ದಾರೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿವೆೆ. ಇದಕ್ಕೆ ಪೂರಕವೆಂಬಂತೆ ಒಂದೇ ವರ್ಷದಲ್ಲಿ 9 ಮತ್ತು 10ನೇ ತರಗತಿಯ 20ಕ್ಕೂ ಹೆಚ್ಚು ವಿದ್ಯಾ ರ್ಥಿಗಳಿಗೆ ವರ್ಗಾವಣೆ ಪ್ರಮಾಣ(ಟಿಸಿ) ನೀಡಿರು ವುದು ಹಾಗೂ ಹೊಸ ದಾಖಲಾತಿ ಮಾಡಿಕೊಳ್ಳ ದಿರುವುದು ಆರೋಪ ಹಾಗೂ ಅನುಮಾನಗಳಿಗೆ ಪುಷ್ಟಿ ನೀಡಿದಂತಾಗಿದೆ.

ಸೇವೆ ಸಲ್ಲಿಸುತ್ತಿರುವ 7 ಶಿಕ್ಷಕರು: ಪ್ರೌಢಶಾಲೆಯಲ್ಲಿ ಪ್ರಸ್ತುತ 7 ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ಅವರೆಲ್ಲ ರಿಗೂ ಸರ್ಕಾರ ವೇತನ ನೀಡುತ್ತಿದೆ. ಶಿಕ್ಷಕರಿಲ್ಲದ ಕಾರಣ ಪಾಠ ಮಾಡಲಾಗದೆ ಫ‌ಲಿತಾಂಶ ಕಡಿಮೆ ಬಂದಿದೆ. ಹೀಗಾಗಿಯೇ ಪೋಷಕರು ವರ್ಗಾವಣೆ ಪ್ರಮಾಣ ಪತ್ರ ತೆಗೆದುಕೊಂಡು ಹೋಗಿದ್ದಾರೆ ಎಂದು ಮುಖ್ಯ ಶಿಕ್ಷಕರು ಉತ್ತರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಬಿಇಒ, ಶಿಕ್ಷಕರ ಕೊರತೆಯಿಲ್ಲ, ಮುಖ್ಯ ಶಿಕ್ಷಕರ ನಾಟಕ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಶಾಲೆ ಉಳಿವಿಗೆ ಸಂಘಟನೆಗಳ ಒತ್ತಾಯ: ಕನ್ನಡ ಶಾಲೆಗಳ ಉಳಿವಿಗೆ ಶಿಕ್ಷಕರು ಮುಂದಾಗಬೇಕು. ಮಕ್ಕಳನ್ನು ಬೇರೆ ಶಾಲೆಗೆ ಸೇರುವಂತೆ ವರ್ಗಾವಣೆ ಟಿಸಿ ನೀಡಿರುವುದು ಖಂಡನೀಯ. ಶಾಲೆ ಮುಂದು ವರಿಸಿ ಕನ್ನಡ ಶಾಲೆಗಳಿಗೆ ಜೀವ ನೀಡಬೇಕು ಎಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.